ಮಲೆ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಸಂಭ್ರಮ: ಭಕ್ತರಿಗಾಗಿ ಲಕ್ಷಾಂತರ ಲಾಡು ಪ್ರಸಾದ ಸಿದ್ಧತೆ
ಹನೂರು: ಪಾವನ ಕ್ಷೇತ್ರವಾದ ಮಲೆ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿದ್ದು, ಶ್ರೀ ಕ್ಷೇತ್ರಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗಾಗಿ ವಿಶೇಷ ಲಾಡು ಪ್ರಸಾದ ತಯಾರಿಕಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭಕ್ತರ ಸೇವೆಯನ್ನು ಮೂಲ ಮಂತ್ರವಾಗಿಸಿಕೊಂಡಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರವು, ಜಾತ್ರೆಯ ಸಂದರ್ಭದಲ್ಲಿ ಪ್ರಸಾದದ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದೆ. ಪ್ರಸಾದ ತಯಾರಿಕೆಯಲ್ಲಿ ಶುದ್ಧತೆ, ನೈರ್ಮಲ್ಯ ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅತ್ಯಂತ ಶ್ರದ್ಧೆಯಿಂದ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ. ಈ ಬೃಹತ್…

