10 ಸಾವಿರ ರೂ.ಗಾಗಿ ಬಲಿಯಾದ ಬಿಸಿಎ ವಿದ್ಯಾರ್ಥಿನಿಯ ಜೀವ: ಶುಲ್ಕ ಪಾವತಿಸಲಾಗದೆ ಹಾಲ್‌ಟಿಕೆಟ್ ಸಿಗದೆ ಆತ್ಮಹತ್ಯೆ

ಭಟ್ಕಳ: ಕಾಲೇಜು ಶುಲ್ಕ ಪಾವತಿಸಲು ತಂದೆ ನೀಡಿದ್ದ 10 ಸಾವಿರ ರೂಪಾಯಿ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿ, ಆತ ಹಣವನ್ನು ಮರಳಿ ನೀಡದೆ ವಂಚಿಸಿದ ಹಿನ್ನೆಲೆಯಲ್ಲಿ ಮನನೊಂದ ಬಿಸಿಎ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಶನಿವಾರದಂದು ನಡೆದಿದೆ. ಭಟ್ಕಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಗಾಯತ್ರಿಯ ತಂದೆ ನಾಗರಾಜ ಅವರು ಮಗಳ ಕಾಲೇಜು…

Read More

ಪರಿಹಾರ ವಿತರಣೆಯಲ್ಲಿ ತಾರತಮ್ಯ ಆರೋಪ: ಬಾಗಲಕೋಟೆ ಪ್ರಾಧಿಕಾರ ಕಚೇರಿಯಲ್ಲೇ ಸಿಬ್ಬಂದಿಗೆ ಚಪ್ಪಲಿ ಏಟು ನೀಡಿದ ಸಂತ್ರಸ್ತ ರೈತ

ಬಾಗಲಕೋಟೆ, ಜೂ.13: ಮುಳುಗಡೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ತಾರತಮ್ಯ ಎಸಗಲಾಗಿದೆ ಹಾಗೂ ಹಲವು ವರ್ಷಗಳಿಂದ ಕಚೇರಿಗೆ ಅಲೆದಾಡಿಸಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ, ಸಂತ್ರಸ್ತ ರೈತನೊಬ್ಬ ಆಕ್ರೋಶಗೊಂಡು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬುಡಾ) ಕಚೇರಿಯ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಘಟನೆ ಶನಿವಾರ ನಡೆದಿದೆ. ಸಾರ್ವಜನಿಕರ ಸಮ್ಮುಖದಲ್ಲೇ ನಡೆದ ಈ ಘಟನೆ ಕೆಲಕಾಲ ಕಚೇರಿ ಆವರಣದಲ್ಲಿ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು. ಜಮೀನು ಕಳೆದುಕೊಂಡು ಮುಳುಗಡೆ ಸಂತ್ರಸ್ತನಾಗಿರುವ ಬಸಪ್ಪ ಎಂಬ ರೈತ ತನ್ನ ಪರಿಹಾರ ಕಡತದ ಸ್ಥಿತಿಗತಿ…

Read More

ಅಂಕೋಲಾದಲ್ಲಿ ಭೂ ಹಗರಣದ ವಾಸನೆ: ನಾಲ್ಕು ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿ ‘ಜೀವಂತ’ ಎಂದು ದಾಖಲೆ ತಿದ್ದುಪಡಿ ಮಾಡಿ ಜಮೀನು ಮಾರಾಟ!

ಕಾರವಾರ, ಜೂ. 13: ನಾಲ್ಕು ದಶಕಗಳ ಹಿಂದೆಯೇ ಮೃತಪಟ್ಟ ವ್ಯಕ್ತಿಯನ್ನು ಬದುಕಿದ್ದಾನೆ ಎಂದು ದಾಖಲೆಗಳನ್ನು ತಿದ್ದುಪಡಿ ಮಾಡಿ, ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿರುವ ಆತಂಕಕಾರಿ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಭೂ ದಾಖಲೆಗಳ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವ ಈ ಪ್ರಕರಣವನ್ನು ತಾಲೂಕು ಆಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ. 2026ರ ಫೆಬ್ರವರಿ 26ರಂದು ಅಂಕೋಲಾ ಉಪ ನೋಂದಣಿ ಕಚೇರಿಯಲ್ಲಿ ನಡೆದ ಜಮೀನು ನೋಂದಣಿ ಪ್ರಕ್ರಿಯೆಯ ವೇಳೆ ಈ…

Read More

ಶಿರಸಿ ಸರ್ಕಾರಿ ವಸತಿ ನಿಲಯದಲ್ಲಿ ಆಘಾತಕಾರಿ ಘಟನೆಶೌಚಾಲಯದಲ್ಲಿ ಹೆರಿಗೆ ಬಳಿಕ ನವಜಾತ ಶಿಶುವನ್ನು ಕಿಟಕಿಯಿಂದ ಎಸೆದ ಅಪ್ರಾಪ್ತ ಬಾಲಕಿ; ಮಗು ಸಾವು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಸಮೀಪದ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಶೌಚಾಲಯದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದ ಪರಿಣಾಮ ಮಗು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ವಸತಿ ನಿಲಯದಲ್ಲಿ ವಾಸವಾಗಿದ್ದ ಸುಮಾರು 15 ವರ್ಷದ ಬಾಲಕಿ ಯಾರಿಗೂ ತಿಳಿಯದಂತೆ ಹಾಸ್ಟೆಲ್‌ನ ಶೌಚಾಲಯದಲ್ಲೇ ಹೆರಿಗೆ ಮಾಡಿಕೊಂಡಿದ್ದಾಳೆ. ಹೆರಿಗೆಯಾದ ಬಳಿಕ ಗಾಬರಿಗೊಂಡಿದ್ದ ಬಾಲಕಿ ಅಥವಾ ವಿಷಯವನ್ನು ಮರೆಮಾಚುವ ಉದ್ದೇಶದಿಂದ ನವಜಾತ…

Read More

ಅಕ್ಟೋಬರ್-ನವೆಂಬರ್‌ನಲ್ಲಿ ಮಹಿಳೆಯರಿಗಾಗಿ ‘ಸಮೃದ್ಧಿ ಶಕ್ತಿ’ ಯೋಜನೆ ಜಾರಿ: ಶಾಸಕ ಸಮೃದ್ಧಿ ಮಂಜುನಾಥ

ಮಳವಳ್ಳಿ: ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಗುರಿಯಾಗಿಸಿಕೊಂಡು ಮುಂದಿನ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ‘ಸಮೃದ್ಧಿ ಶಕ್ತಿ’ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ ತಿಳಿಸಿದರು. ಪಟ್ಟಣದಲ್ಲಿನ ಗುರುವಾರದಂದು ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 36ನೇ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಯಾರಿಗೂ ಮೋಸ ಮಾಡಿಲ್ಲ. ಆದರೆ ಮಂಡ್ಯ ಜಿಲ್ಲೆಗೆ ಮೋಸ ಮಾಡಿದವರೇ ಹೆಚ್ಚು ಎಂಬ ಬೇಸರ ವ್ಯಕ್ತಪಡಿಸಿದರು. ಮಹಿಳೆಯರ ಸಬಲೀಕರಣಕ್ಕಾಗಿ ಸಮೃದ್ಧಿ ಸಂಸ್ಥೆ ವಿಶೇಷವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ…

Read More

ಸವಣೂರ:ನಿಧಿ ಆಸೆಗೆ ದೇವಸ್ಥಾನ ಧ್ವಂಸ ಆರೋಪ: ನಾಲ್ವರು ಬಂಧನ, ನ್ಯಾಯಾಂಗ ವಶಕ್ಕೆ

ಹಾವೇರಿ: ನಿಧಿ ಸಿಗುವ ಆಸೆಯಿಂದ ಮೂಕಬಸವೇಶ್ವರ ಹಾಗೂ ಈಶ್ವರಮೂರ್ತಿ ಪ್ರತಿಷ್ಠಾಪಿತವಾಗಿದ್ದ ಕಲ್ಲಿನ ದೇವಸ್ಥಾನವನ್ನು ಧ್ವಂಸಗೊಳಿಸಿ ನೆಲ ಅಗೆದ ಆರೋಪದಡಿ ನಾಲ್ವರನ್ನು ಸವಣೂರು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ಘಟನೆ ತಾಲೂಕಿನ ನದಿನೀರಲಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನದಿನೀರಲಗಿ ಗ್ರಾಮದ ಫಕ್ಕಿರಪ್ಪ ಮಾದರ ಅವರ ಜಮೀನಿನಲ್ಲಿರುವ ಮೂಕಬಸವೇಶ್ವರ ಹಾಗೂ ಈಶ್ವರಮೂರ್ತಿಯ ಸಣ್ಣ ಕಲ್ಲಿನ ದೇವಸ್ಥಾನವನ್ನು ನಿಧಿ ಹುಡುಕುವ ಉದ್ದೇಶದಿಂದ ಧ್ವಂಸ ಮಾಡಲಾಗಿದೆ ಎಂದು ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು…

Read More

ಮೊನ್ನೆ ಸೀಜ್, ನಿನ್ನೆ ರೀ-ಓಪನ್: ಲಕ್ಷ್ಮೇಶ್ವರ ಪುರಸಭೆ ವಾಣಿಜ್ಯ ಮಳಿಗೆಗಳ ವಿವಾದಕ್ಕೆ ಹೊಸ ತಿರುವು

ಲಕ್ಷ್ಮೇಶರ: ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿರುವ ಮಳಿಗೆಗಳ ಅವಧಿ ಮುಗಿದಿದ್ದು, ಅವುಗಳನ್ನು ತೆರವುಗೊಳಿಸಿ ಹೊಸದಾಗಿ ಟೆಂಡರ್ ಕರೆದು ಹರಾಜು ಪ್ರಕ್ರಿಯೆ ನಡೆಸಬೇಕು ಎಂದು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಂಗಳವಾರ ಹೋರಾಟ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಸುಮಾರು ಏಳು ಮಳಿಗೆಗಳನ್ನು ಸೀಜ್ ಮಾಡಿದ್ದರು. ಆದರೆ ಬುಧವಾರ ಅದೇ ಮಳಿಗೆಗಳನ್ನು ಮತ್ತೆ ತೆರೆಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ವಾಣಿಜ್ಯ ಸಂಕೀರ್ಣದಲ್ಲಿರುವ ಕೆಲ ವ್ಯಾಪಾರಸ್ಥರು ಮಳಿಗೆಗಳ ತೆರವು ಕ್ರಮವನ್ನು ಪ್ರಶ್ನಿಸಿ…

Read More

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ, ಸಸಿ ನೆಟ್ಟು ಸಂಭ್ರಮ

ಮಳವಳ್ಳಿ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬದ ಅಂಗವಾಗಿ ಮಳವಳ್ಳಿ ತಾಲ್ಲೂಕು ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಹಾಗೂ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಕರವೇ ತಾಲ್ಲೂಕು ಅಧ್ಯಕ್ಷ ಅಪ್ಪೇಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಬಳಿಕ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ…

Read More

ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಜೃಂಭಣೆಯಿಂದ ವಿಶ್ವ ಪರಿಸರ ದಿನಾಚರಣೆ

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಮಾನವ ಸರಪಳಿ ಹನೂರು, ಜೂನ್ 5: ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಪ್ರಕೃತಿಯ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಹನೂರಿನ ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹನೂರು ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಹೇಬ್ ಗೌಡ ಅವರು ಮಾತನಾಡಿ, ಪರಿಸರವು ಮಾನವಕುಲಕ್ಕೆ ದೊರೆತಿರುವ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ…

Read More

​ಮಳವಳ್ಳಿ: ನ್ಯೂ ರೇಬೋ ಕಿಡ್ಸ್ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ; ಪುಟಾಣಿಗಳಿಂದ ಜಾಗೃತಿ ಮೆರವಣಿಗೆ

ಮಳವಳ್ಳಿ: ಪಟ್ಟಣದ ನ್ಯೂ ರೇಬೋ ಕಿಡ್ಸ್ ಸಂಸ್ಥೆಯ ವತಿಯಿಂದ ಪುಟಾಣಿ ಮಕ್ಕಳೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ವಿದ್ಯಾ ಅವರು ಗಿಡಗಳಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ವಿದ್ಯಾ ಅವರು, ಪ್ರಸ್ತುತ ದಿನಗಳಲ್ಲಿ ಪ್ಲಾಸ್ಟಿಕ್ ಅತಿಯಾದ ಬಳಕೆಯಿಂದಾಗಿ ಪರಿಸರ ಸಂಪೂರ್ಣವಾಗಿ ಹಾಳಾಗುತ್ತಿದೆ. ಹೀಗಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಬೇಕಾಗಿದೆ. ಕೇವಲ ಭಾಷಣಕ್ಕೆ ಸೀಮಿತವಾಗದೆ, ಎಲ್ಲಾ ಖಾಲಿ ಜಾಗಗಳಲ್ಲೂ ಗಿಡಗಳನ್ನು ನೆಟ್ಟು, ಅವುಗಳಿಗೆ ನಿಯಮಿತವಾಗಿ ನೀರು…

Read More