ಶಿಕ್ಷಕರ ಕೊರತೆ: ರಾಣೇಬೆನ್ನೂರ ತಾಲ್ಲೂಕಿನ ಚಿಕ್ಕ ಅರಳಿಹಳ್ಳಿ ಶಾಲೆ ಬಂದ್ ಮಾಡಿ ಪ್ರತಿಭಟನೆ

ರಾಣೇಬೆನ್ನೂರ: ತಾಲ್ಲೂಕಿನ ಚಿಕ್ಕ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮರ್ಪಕ ಸಂಖ್ಯೆಯಲ್ಲಿ ಶಿಕ್ಷಕರಿಲ್ಲದ ಕಾರಣ ವಿದ್ಯಾರ್ಥಿಗಳ ಶಿಕ್ಷಣ ಕುಂಠಿತಗೊಳ್ಳುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು, ಪಾಲಕರು, ಪೋಷಕರು, ಶಾಲಾ ಮಕ್ಕಳು ಹಾಗೂ ಎಸ್‌ಡಿಎಂಸಿ ಸದಸ್ಯರು ಬುಧವಾರದಂದು ಶಾಲೆ ಬಂದ್ ಮಾಡಿ ಸುಮಾರು ನಾಲ್ಕು ಗಂಟೆಗಳ ಕಾಲ ತೀವ್ರ ಪ್ರತಿಭಟನೆ ನಡೆಸಿದರು. ಒಂದರಿಂದ ಎಂಟನೇ ತರಗತಿವರೆಗೆ ಒಟ್ಟು 111 ಮಕ್ಕಳು ಕಲಿಯುತ್ತಿದ್ದು, ದೀರ್ಘಕಾಲದಿಂದ ಕಾಡುತ್ತಿರುವ ಶಿಕ್ಷಕರ ಕೊರತೆಯಿಂದಾಗಿ ಪಾಠ ಬೋಧನೆ ಸಮರ್ಪಕವಾಗಿ ನಡೆಯುತ್ತಿಲ್ಲ. ಇದು ಮಕ್ಕಳ ಭವಿಷ್ಯದ…

Read More

ದಾವಣಗೆರೆ ಉಪಚುನಾವಣೆ: ಸಚಿವ ಜಮೀರ್ ಹೆಸರಿನ ಆಡಿಯೋ ವೈರಲ್; ಷಡ್ಯಂತ್ರ ಎಂದ ಸಿರಾಜ್

ದಾವಣಗೆರೆ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಚ್ಚಾಟಿತ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್ ನಡುವೆ ನಡೆದಿದೆ ಎನ್ನಲಾದ ಆಡಿಯೋ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆಯ ಮತದಾನದ ದಿನವಾದ ಏಪ್ರಿಲ್ 9ರಂದು ಇಬ್ಬರ ನಡುವೆ ನಡೆದಿದೆ ಎನ್ನಲಾದ ಸುಮಾರು 3 ನಿಮಿಷ 50 ಸೆಕೆಂಡ್‌ಗಳ ಈ ಮಾತುಕತೆಯನ್ನು ‘ಕನ್ನಡ ಕಾಕ್ರೋಚ್’ ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸೋಮವಾರ ಮುಂಜಾನೆ…

Read More

​ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಆಡಳಿತಾಧಿಕಾರಿ ಧನುಷ್ ಸೂಚನೆ

ಮಳವಳ್ಳಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಧನುಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಬೋರ್‌ವೆಲ್‌ಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಜನರಿಗೆ ಕುಡಿಯುವ ನೀರಿನ ಕೊರತೆ…

Read More

ಭೀಮಾತೀರದಲ್ಲಿ ಮತ್ತೆ ನೆತ್ತರ ಹದ: ಜಮೀನು ವಿವಾದಕ್ಕೆ ಸಂಧಾನ ಸಭೆಯಲ್ಲೇ ಆರು ಜನರ ಭೀಕರ ಹತ್ಯೆ

ವಿಜಯಪುರ: ಇಷ್ಟು ದಿನ ಶಾಂತವಾಗಿದ್ದ ಭೀಮಾತೀರದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮತ್ತೊಮ್ಮೆ ರಕ್ತಪಾತವಾಗಿದ್ದು, ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡು ಹಾರಿಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿರಾಳೆ ಹಾಗೂ ಗೊಳಗಿ ಕುಟುಂಬಗಳ ನಡುವಿನ ಜಮೀನು ವ್ಯಾಜ್ಯವೇ ಈ ನರಮೇಧಕ್ಕೆ ಕಾರಣ ಎಂದು ತಿಳಿದುಬಂದಿದೆ. ದಾಳಿಯ ತೀವ್ರತೆಗೆ ನಿರಾಳೆ ಕುಟುಂಬದ ಪ್ರಮುಖರು ಹಾಗೂ ಅವರ ಬೆಂಬಲಿಗರು ಸೇರಿ ಒಟ್ಟು ಆರು ಮಂದಿ ಸ್ಥಳದಲ್ಲೇ ಪ್ರಾಣ…

Read More

ರಿಯಲ್ ಎಸ್ಟೇಟ್ ದಂಧೆಗೆ ರಾಜ್ಯ ಸರ್ಕಾರ ಮುಂದಾಗಿದೆ: ಭರತ್ ರಾಜ್ ಆರೋಪ

ಮಳವಳ್ಳಿ: ಬಿಡದಿ ಸಮೀಪದ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ರಾಜ್ಯ ಸರ್ಕಾರ ರಿಯಲ್ ಎಸ್ಟೇಟ್ ದಂಧೆಗೆ ಮುಂದಾಗಿದೆ ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಭರತ್ ರಾಜ್ ಆರೋಪಿಸಿದರು. ಪಟ್ಟಣದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಪಕ್ಕದ ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಪ್ರದೇಶಗಳಲ್ಲಿರುವ ಸಾವಿರಾರು ಎಕರೆ ಕೃಷಿಯೋಗ್ಯ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದನ್ನು ಪ್ರಾಂತ ರೈತ ಸಂಘ ಖಂಡಿಸುತ್ತದೆ ಎಂದರು. ದೆಹಲಿಯಲ್ಲಿ ರೈತರು ನಡೆಸಿದ ದೀರ್ಘಕಾಲದ ಹೋರಾಟದ ಮಾದರಿಯಲ್ಲೇ ಆ ಭಾಗದ…

Read More

“ಗಾಡ್ ಪ್ರಾಮಿಸ್” ಚಿತ್ರೀಕರಣ ಪೂರ್ಣ; ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕುಂದಾಪುರ: “ಗಾಡ್ ಪ್ರಾಮಿಸ್” ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆ ಚಿತ್ರತಂಡವು ಕುಂದಾಪುರ ಸಮೀಪದ ಪ್ರಸಿದ್ಧ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಮೂಡು ಗಣಪತಿ ಪೂಜೆಯನ್ನು ನೆರವೇರಿಸಿತು. ಚಿತ್ರಕ್ಕೆ ಕಥೆ, ನಿರ್ದೇಶನ ಹಾಗೂ ನಾಯಕನಾಗಿ ಸುಚನ್ ಶೆಟ್ಟಿ ಕಾರ್ಯನಿರ್ವಹಿಸಿದ್ದು, ಕುಟುಂಬ, ನಂಬಿಕೆ ಹಾಗೂ ಕರಾವಳಿ ಭಾಗದ ಸಂಸ್ಕೃತಿಯನ್ನು ಒಳಗೊಂಡ ಮನರಂಜನಾ ಕಥಾಹಂದರವನ್ನು ಚಿತ್ರ ಹೊಂದಿದೆ. ಚಿತ್ರೀಕರಣ ಪೂರ್ಣಗೊಂಡ ಸಂತಸದ ಹಿನ್ನೆಲೆಯಲ್ಲಿ ನಡೆದ ಪೂಜೆಯಲ್ಲಿ ಸುಚನ್ ಶೆಟ್ಟಿ, ಪ್ರಶಾಂತ್ ಸಿದ್ದಿ, ನಾಗರಾಜ್ ಬೈಂದೂರು, ನಿರ್ಮಾಪಕ ಮಹೇಂದ್ರ ಶೆಟ್ಟಿ, ಸಂಕಲನಕಾರ…

Read More

ಶಿಗ್ಗಾವಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ಬರ್ಬರ ಹತ್ಯೆ; ಸಹೋದರ ಬಂಧನ

ಶಿಗ್ಗಾವಿ: ಪಟ್ಟಣದ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರ-3ರಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬರ್ಬರ ಹತ್ಯೆ ಪ್ರಕರಣವು ಜನತೆಯನ್ನು ಬೆಚ್ಚಿಬೀಳಿಸಿದೆ. 29 ವರ್ಷದ ಅಂಗನವಾಡಿ ಕಾರ್ಯಕರ್ತೆ ಸುಮಾ ಶಿವಶಂಕರ ಸವಣೂರ (ಊರ್ಫ್ ವನಹಳ್ಳಿ) ಅವರನ್ನು ಅವರ ಸಹೋದರನೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಿಗ್ಗೆ ಸುಮಾ ಅವರು ಎಂದಿನಂತೆ ಅಂಗನವಾಡಿ ಕೇಂದ್ರ ತೆರೆಯಲು ಬಂದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಿಯರ ಹಾಗೂ ವೈಯಕ್ತಿಕ ಕಾರಣಗಳಿಂದ ಉಂಟಾದ ಕಲಹದ ಹಿನ್ನೆಲೆ ಆರೋಪಿ ಸಂಜು…

Read More

ಚಾಮರಾಜನಗರ:ನರಬಲಿ ಪಡೆದ ಚಿರತೆ ಸೆರೆ: ಅರಣ್ಯ ಇಲಾಖೆಯ 15 ದಿನಗಳ ಕಾರ್ಯಾಚರಣೆ ಯಶಸ್ವಿ

ಚಾಮರಾಜನಗರ: ಜಿಲ್ಲೆಯ ನಾಗಮಲೆ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆಗೆ ತೆರಳಿದ್ದ ಬಾಲಕನನ್ನು ಬಲಿ ಪಡೆದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಸೆರೆ ಹಿಡಿದಿದ್ದಾರೆ. ಕಳೆದ 15 ದಿನಗಳಿಂದ ನಿರಂತರವಾಗಿ ನಡೆದ ಬೃಹತ್ ಕಾರ್ಯಾಚರಣೆಯ ಫಲವಾಗಿ ಹನೂರು ತಾಲೂಕಿನ ಇಂಡಿಗನತ್ತ ಹಾಡಿ ಸಮೀಪ ಇರಿಸಲಾಗಿದ್ದ ಬೋನಿನಲ್ಲಿ ಹೆಣ್ಣು ಚಿರತೆ ಸೆರೆಯಾಗಿದೆ. ಇದರಿಂದ ಕಾಡಂಚಿನ ಗ್ರಾಮಸ್ಥರು ಹಾಗೂ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರು ನಿಟ್ಟುಸಿರು ಬಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬೆಂಗಳೂರು ಮೂಲದ ಹರ್ಷಿತ್ ಎಂಬ ಬಾಲಕ ತನ್ನ…

Read More

ಜಿಂಕೆಯನ್ನು ನುಂಗಿದ ಹೆಬ್ಬಾವು; ಚಲಿಸಲು ಹರಸಾಹಸ ಪಟ್ಟ ಅಪರೂಪದ ಘಟನೆ

ಮಳವಳ್ಳಿ: ಬೃಹತ್ ಗಾತ್ರದ ಹೆಬ್ಬಾವು ಜಿಂಕೆಯನ್ನು ನುಂಗಿದ ಬಳಿಕ ಚಲಿಸಲು ಹರಸಾಹಸ ಪಟ್ಟ ಅಪರೂಪದ ಘಟನೆ ಮಳವಳ್ಳಿ ತಾಲ್ಲೂಕಿನ ನೆಟ್ಕಲ್ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ. ನೆಟ್ಕಲ್ ಗ್ರಾಮದ ಬಳಿ ಬೆಂಗಳೂರು ಜಲಮಂಡಳಿಗೆ ನೀರು ಸರಬರಾಜು ಮಾಡುವ ಪೈಪ್‌ಲೈನ್ ಹಾದು ಹೋಗುವ ಅರಣ್ಯ ಪ್ರದೇಶದ ಸಮೀಪ ಈ ಹೆಬ್ಬಾವು ಪತ್ತೆಯಾಗಿದೆ. ದೊಡ್ಡ ಗಾತ್ರದ ಜಿಂಕೆಯನ್ನು ನುಂಗಿದ್ದರಿಂದ ಹೆಬ್ಬಾವು ಚಲಿಸಲು ಸಾಧ್ಯವಾಗದೇ ಅಲ್ಲೇ ಕುಂಠಿತ ಸ್ಥಿತಿಯಲ್ಲಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ಗಮನಿಸಿದ ಸ್ಥಳೀಯ ರೈತರು ಹಾಗೂ ಜಾನುವಾರು ಮೇಯಿಸುತ್ತಿದ್ದ…

Read More

ಭಟ್ಕಳ:ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದ ಎಂಟು ಮಂದಿ ನೀರುಪಾಲು

ಭಟ್ಕಳ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪದ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಸಂಭವಿಸಿದ ದಾರುಣ ಘಟನೆಗೆ ಎಂಟು ಮಂದಿ ನೀರುಪಾಲಾಗಿದ್ದಾರೆ. ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34),…

Read More