ಬಾಲಕಿಯರನ್ನು ಪ್ರಾಣಿಗಳಂತೆ ನಡೆಸಿಕೊಂಡ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬಿ.ವೀರಪ್ಪ ಖಂಡನೆ!

ಮಂಡ್ಯ, ಮೇ.23: ನಗರದ ಬಂದೀಗೌಡ ಬಡಾವಣೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವಿದ್ಯಾರ್ಥಿನಿಯರ ವಾಸದ ಪರಿಸ್ಥಿತಿ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಕಂಡು ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪರಿಶೀಲನೆ ವೇಳೆ ಒಂದೇ ಕೊಠಡಿಯಲ್ಲಿ 13 ವಿದ್ಯಾರ್ಥಿನಿಯರು ವಾಸಿಸುತ್ತಿರುವುದು ಬೆಳಕಿಗೆ ಬಂದಿದ್ದು, ಇದರಿಂದ ಆಕ್ರೋಶಗೊಂಡ ಉಪ ಲೋಕಾಯುಕ್ತರು, “ಇವರು ಮಕ್ಕಳು ಎಂದು ತಿಳ್ಕೊಂಡಿದ್ದೀರಾ…

Read More

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ಟ್ಯಾಂಕರ್–ಕ್ರೂಸರ್ ಡಿಕ್ಕಿಗೆ ಐವರು ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಲಾಡ್ಡಾಪುರ–ಹಲಕರ್ಟಿ ನಡುವಿನ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಯಾದಗಿರಿಯಿಂದ ಇಂಗಳಗಿಗೆ ತೆರಳುತ್ತಿದ್ದ ಕ್ರೂಸರ್ ವಾಹನ ಹಾಗೂ ವಾಡಿಯಿಂದ ಯಾದಗಿರಿಗೆ ಸಾಗುತ್ತಿದ್ದ ಟ್ಯಾಂಕರ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಛಿದ್ರಗೊಂಡಿರುವ…

Read More

ನಿಯಮಬಾಹಿರ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಪೊಲೀಸ್ ವಶಕ್ಕೆ

ನಿಯಮಬಾಹಿರ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಪೊಲೀಸ್ ವಶಕ್ಕೆ ಬೆಳಗಾವಿ: ನಿಯಮಬಾಹಿರ ಹಾಗೂ ಅನಧಿಕೃತ ಬಡ್ಡಿ ವ್ಯವಹಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಹಕಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಜಂಟಿ ತಂಡ ಸುದೀರ್ಘ ದಾಳಿ ನಡೆಸಿ ಶುಕ್ರವಾರ ಈ ಕ್ರಮ ಕೈಗೊಂಡಿದೆ. ಆರೋಪಿ ಶಿವಾನಂದ ಯಾವುದೇ ಆರ್‌ಬಿಐ ನಿಯಮಗಳನ್ನು ಪಾಲಿಸದೆ ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಹಣ ಸಂಗ್ರಹಿಸಿರುವುದು…

Read More

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬೆಂಗಳೂರಿನ ಬಾಲಕ ಬಲಿ

ಹನೂರು: ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುವ ಕಾಲುನಡಿಗೆ ಮಾರ್ಗದಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಬೆಂಗಳೂರು ಮೂಲದ 10 ವರ್ಷದ ಬಾಲಕ ಹರ್ಷಿತ್ ಎಂಬಾತ ದುರ್ಮರಣಕ್ಕೀಡಾಗಿದ್ದಾನೆ. ದೇವರ ದರ್ಶನದ ಹಂಬಲ ಹೊತ್ತು ಬಂದಿದ್ದ ಪುಟ್ಟ ಬಾಲಕ ಪ್ರಾಣ ಕಳೆದುಕೊಂಡ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಭಕ್ತರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ​ಬೆಂಗಳೂರಿನಿಂದ ಕುಟುಂಬದವರೊಂದಿಗೆ ಬೆಟ್ಟಕ್ಕೆ ಬಂದಿದ್ದ ಹರ್ಷಿತ್, ನಾಗಮಲೆಯತ್ತ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಹಠಾತ್ತಾಗಿ ದಾಳಿ ಮಾಡಿದ ಚಿರತೆಯು…

Read More

ಗದಗ ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೋರ್ ಮುರಿದು ಬಿದ್ದು 21 ಜನರಿಗೆ ಗಾಯ,ಏಳು ಮಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಗದಗ: ಜಿಲ್ಲೆಯ ಅತಿ ದೊಡ್ಡ ಜಾತ್ರೆ ಎನ್ನುವ ಹೆಗ್ಗಳಿಕೆ ಹೊಂದಿರುವ ಇಲ್ಲಿನ ಪ್ರಸಿದ್ಧ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದ ‘ಡ್ಯಾನ್ಸಿಂಗ್ ಫ್ಲೋರ್’ ಮನರಂಜನಾ ಯಂತ್ರವು ಚಾಲನೆಯಲ್ಲಿ ಇದ್ದಾಗಲೇ ತಾಂತ್ರಿಕ ದೋಷದಿಂದ ಮುರಿದು ಬಿದ್ದ ಪರಿಣಾಮ 21 ಜನರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾತ್ರಾ ಕಮಿಟಿ ಅಧ್ಯಕ್ಷರು ಸೇರಿದಂತೆ ಒಟ್ಟು 7 ಜನರ ಮೇಲೆ ಸೋಮವಾರ ಶಹರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ​ಭಾನುವಾರ ರಾತ್ರಿ ಈ ಘಟನೆ…

Read More

​ತುಂಗಭದ್ರಾ ಜಲಾಶಯ ಮುಂದಿನ 50 ವರ್ಷ ಸುಭದ್ರ: ಮೇ 15ಕ್ಕೆ 33 ಹೊಸ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ – ಡಿ.ಕೆ. ಶಿವಕುಮಾರ್

​ಹೊಸಪೇಟೆ: ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮುಂದಿನ 50 ವರ್ಷಗಳ ಕಾಲ ಜಲಾಶಯವು ಅತ್ಯಂತ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಜಲಾಶಯದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಯೋಜನೆಯಿಂದ ವಿಜಯನಗರ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸುಮಾರು 7.5 ಲಕ್ಷ ರೈತರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು. ​ಜಲಾಶಯದ ಸುರಕ್ಷತೆ ಹಾಗೂ ರೈತರ…

Read More

​ಗುಂಡ್ಲುಪೇಟೆ ಬಳಿ ಕಾರು-ಲಾರಿ ಮುಖಾಮುಖಿ ಡಿಕ್ಕಿ: ಗರ್ಭಿಣಿ ಹಾಗೂ ಚಾಲಕ ದುರ್ಮರಣ

​ಚಾಮರಾಜನಗರ: ಜಿಲ್ಲೆಯ ಜನತೆ ಮಳೆ ಮತ್ತು ಬೆಳೆಯ ಲೆಕ್ಕಾಚಾರದಲ್ಲಿ ತೊಡಗಿರುವಾಗಲೇ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಗುಂಡ್ಲುಪೇಟೆ-ಕೇರಳ ರಾಷ್ಟ್ರೀಯ ಹೆದ್ದಾರಿಯ ಮದ್ದಯ್ಯನಹುಂಡಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗರ್ಭಿಣಿ ಮಹಿಳೆ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ​ಕೇರಳದಿಂದ ಚಾಮರಾಜನಗರದ ಕಡೆಗೆ ಬರುತ್ತಿದ್ದ ಕಾರಿಗೆ, ಕೇರಳದತ್ತ ತೆರಳುತ್ತಿದ್ದ ಲಾರಿ ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ…

Read More

ಅಹಿಂಸಾ ಮಾರ್ಗದಿಂದ ಮಾತ್ರ ಜೀವನದಲ್ಲಿ ನೆಮ್ಮದಿ ಸಾಧ್ಯ: ಪತ್ರಕರ್ತ ಗೋಣೆಪ್ಪ ದೀಪಾವಳಿ ಅಭಿಮತ

ರಾಣೇಬೆನ್ನೂರ: ಇಲ್ಲಿನ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ತಾಲೂಕಾ ಆಡಳಿತ ಮತ್ತು ವಿವಿದ ಸಂಘಟನೆಗಳ ವತಿಯಿಂದ ಶುಕ್ರವಾರ ಭಗವಾನ ಗೌತಮ ಬುದ್ಧರ ಜಯಂತಿಯನ್ನು ಆಚರಿಸಲಾಯಿತು. ಪತ್ರಕರ್ತ ಗೋಣೆಪ್ಪ ದೀಪಾವಳಿ ಈ ವೇಳೆ ಭಗವಾನ ಗೌತಮ ಬುದ್ಧರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಅಹಿಂಸಾ ಮಾರ್ಗವನ್ನು ಪ್ರತಿಪಾದಿಸಿದ ಭಗವಾನ ಗೌತಮ ಬುದ್ಧರು ಪ್ರಾಣಿಗಳ ಹಿಂಸೆ ಮಾಡಬಾರದು ಮಹಾಪಾಪ, ಸಕಲ ಜೀವಿಗಳ ಮೇಲೆ ದಯವಿರಬೇಕು ಎಂದು ಬೋಧಿಸಿದವರು ಅವರ ವಿಚಾರ ಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆಗಾಗ ಮಾತ್ರ ಜಯಂತಿಗೆ…

Read More

ಹೆಣ್ಣಿನ ನೆಲೆ, ನೀರಿನ ನೆಲೆ ಯಾರಿಗೆ ಗೊತ್ತು?: ಪತ್ನಿ-ಅಕ್ಕನ ಮಗನ ವಂಚನೆಗೆ ಬಲಿಯಾಯಿತೇ ಸುಂದರ ಸಂಸಾರ?

ತುಮಕೂರು (ಕುಣಿಗಲ್): “ಹೆಣ್ಣಿನ ನೆಲೆ, ಕುದುರೆ ನೆಲೆ ಹಾಗೂ ನೀರಿನ ನೆಲೆ ಯಾರಿಗೂ ತಿಳಿಯದು” ಎಂಬ ಹಿರಿಯರ ಮಾತು ಅಕ್ಷರಶಃ ಸತ್ಯ ಎಂಬಂತೆ ಕುಣಿಗಲ್‌ನಲ್ಲಿ ಒಂದು ಘೋರ ದುರಂತ ಸಂಭವಿಸಿದೆ. ತಾನು ಮಗನಂತೆ ಸಾಕಿ ಸಲಹಿದ ಅಕ್ಕನ ಮಗ ಹಾಗೂ ಜೀವವೇ ಎಂದು ನಂಬಿದ್ದ ಪತ್ನಿಯ ಕಪಟ ನಾಟಕಕ್ಕೆ ಸಿಲುಕಿದ ಶಿವಣ್ಣ ಎಂಬುವವರು, ತಮ್ಮ ಇಬ್ಬರು ಮುದ್ದಾದ ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಬಿಕೆಯ ಬೆನ್ನಿಗೆ ಚೂರಿ ಹಾಕಿದ ಪ್ರಿಯಕರ ಮತ್ತು ಪತ್ನಿಯ ಕೃತ್ಯಕ್ಕೆ ಒಂದು…

Read More

ಹನುಮನ ದರ್ಶನಕ್ಕೆ ತೆರಳುತ್ತಿದ್ದಾಗ ವಿಧಿಯಾಟ: ಟೈರ್ ಸ್ಫೋಟಗೊಂಡು ಕ್ರೂಷರ್ ಪಲ್ಟಿ, ಓರ್ವ ಸಾವು

ಕೊಪ್ಪಳ: ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಹನುಮನ ದರ್ಶನ ಪಡೆಯಲು ಭಕ್ತಿಯಿಂದ ಹೊರಟಿದ್ದ ಧಾರವಾಡ ಮೂಲದ ಹತ್ತು ಮಂದಿ ಭಕ್ತರ ಪಯಣ ಅರ್ಧ ದಾರಿಯಲ್ಲೇ ದುರಂತದಲ್ಲಿ ಅಂತ್ಯಗೊಂಡಿದೆ. ಕೊಪ್ಪಳ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕ್ರೂಷರ್ ವಾಹನದ ಟೈರ್ ಏಕಾಏಕಿ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ​ಧಾರವಾಡದಿಂದ ಕ್ರೂಷರ್ ವಾಹನದಲ್ಲಿ ಸಂಭ್ರಮದಿಂದಲೇ ಹೊರಟಿದ್ದ ಭಕ್ತರು ಹರಟೆ ಹೊಡೆಯುತ್ತಾ ಇನ್ನೇನು ಅಂಜನಾದ್ರಿ ತಲುಪಲು ಕೆಲವೇ ಮೈಲುಗಳ ದೂರ…

Read More