ಭೂಮಿ ಜೀವದ ತೊಟ್ಟಿಲು, ಅದನ್ನು ಬಂಜೆ ಮಾಡಬಾರದು: ಮಣ್ಣಿನ ಆರೋಗ್ಯ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಬೆಳಗಾವಿ: “ಭೂಮಿಯು ಜೀವದ ತೊಟ್ಟಿಲಾಗಿದ್ದು, ಅತಿಯಾದ ರಸಗೊಬ್ಬರ ಬಳಕೆಯ ಮೂಲಕ ಅಂತಹ ಪವಿತ್ರ ಭೂಮಿಯನ್ನು ಬಂಜೆ ಮಾಡಬಾರದು. ಕೃಷಿಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳಲು ರೈತರು ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ತಾಲೂಕಿನ ಹುದಲಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶಗಳಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಮಾಡುವ ನೂತನ ಯೋಜನೆಗೆ…

