ಮಲೆ ಮಾದೇಶ್ವರ ಬೆಟ್ಟದ ಹಾದಿಯಲ್ಲಿ ಕೆಎಸ್ಆರ್ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ – ಆಂಬ್ಯುಲೆನ್ಸ್ ಸಿಗದೆ ನರಳಾಡಿದ ಗಾಯಾಳುಗಳು, ವ್ಯವಸ್ಥೆಯ ವಿರುದ್ಧ ಆಕ್ರೋಶ
ಹನೂರು: ಕೊಳ್ಳೇಗಾಲದಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಭಕ್ತಾದಿಗಳನ್ನು ಹೊತ್ತು ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೆಟ್ಟದ ಹಾದಿಯ ತಾಳುಬೆಟ್ಟದ ಮೂರನೇ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಭೀಕರವಾಗಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯ ನಂತರದ ಪರಿಸ್ಥಿತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಬೇಜವಾಬ್ದಾರಿಯನ್ನು ಎತ್ತಿ ತೋರಿಸುವಂತಿತ್ತು. ಅಪಘಾತ ಸಂಭವಿಸಿದ ತಕ್ಷಣ ಸಹಾಯಕ್ಕಾಗಿ ಕಿರುಚಾಡಿದ ಪ್ರಯಾಣಿಕರಿಗೆ…

