ಮಲೆ ಮಾದೇಶ್ವರ ಬೆಟ್ಟದ ಹಾದಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ – ಆಂಬ್ಯುಲೆನ್ಸ್ ಸಿಗದೆ ನರಳಾಡಿದ ಗಾಯಾಳುಗಳು, ವ್ಯವಸ್ಥೆಯ ವಿರುದ್ಧ ಆಕ್ರೋಶ

ಹನೂರು: ಕೊಳ್ಳೇಗಾಲದಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಭಕ್ತಾದಿಗಳನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಟ್ಟದ ಹಾದಿಯ ತಾಳುಬೆಟ್ಟದ ಮೂರನೇ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಭೀಕರವಾಗಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯ ನಂತರದ ಪರಿಸ್ಥಿತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಬೇಜವಾಬ್ದಾರಿಯನ್ನು ಎತ್ತಿ ತೋರಿಸುವಂತಿತ್ತು. ​ಅಪಘಾತ ಸಂಭವಿಸಿದ ತಕ್ಷಣ ಸಹಾಯಕ್ಕಾಗಿ ಕಿರುಚಾಡಿದ ಪ್ರಯಾಣಿಕರಿಗೆ…

Read More

ಮೇಕೆದಾಟು ಬಳಿ ಪ್ರವಾಸಿಗರ ಮೇಲೆ ಕಾಡಾನೆ ದಾಳಿ: ನದಿಯಲ್ಲಿ ಜಲಕ್ರೀಡೆ ಆಡುತ್ತಿದ್ದಾಗ ಎದುರಾದ ಗಜಾತಂಕ!

ಹನೂರು: ಪ್ರಕೃತಿಯ ಸೌಂದರ್ಯ ಸವಿಯಲು ಬಂದಿದ್ದ ಪ್ರವಾಸಿಗರಿಗೆ ಕಾಡಾನೆಯೊಂದು ಸಿಂಹಸ್ವಪ್ನವಾದ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ಸಂಭವಿಸಿದೆ. ಕಾವೇರಿ ನದಿಯ ದಡದಲ್ಲಿ ಪ್ರವಾಸಿಗರು ಆಟವಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕಾಡಾನೆಯೊಂದು ದಾಳಿ ನಡೆಸಿದ್ದು, ಪ್ರಾಣಾಪಾಯದಿಂದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ​ಸಂಗಮಕ್ಕೆ ಆಗಮಿಸಿದ್ದ ಪ್ರವಾಸಿಗರ ತಂಡವೊಂದು ಮೇಕೆದಾಟು ಬಳಿಯ ನದಿಯಲ್ಲಿ ಜಲಕ್ರೀಡೆ ಆಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿತ್ತು. ಇದೇ ಸಮಯದಲ್ಲಿ ನೀರು ಕುಡಿಯಲು ಬಂದಿದ್ದ ಕಾಡಾನೆಯು ಪ್ರವಾಸಿಗರ ಗದ್ದಲಕ್ಕೆ ಕೆರಳಿ ಏಕಾಏಕಿ ಅವರ ಮೇಲೆ ಎರಗಿದೆ….

Read More

ಕೆರೆ ನೀರಿಗೆ ಯೂರಿಯಾ ಮಿಶ್ರಣ: ಏಳು ಕುರಿಗಳ ದಾರುಣ ಸಾವು, ಕುರಿಗಾಯಿಯ ಕಣ್ಣೀರು

ಹನೂರು: ಕುರಿ ಮೇಯಿಸಿ ಜೀವನ ಸಾಗಿಸುತ್ತಿದ್ದ ಬಡ ರೈತನೊಬ್ಬನ ಹೊಟ್ಟೆಯ ಮೇಲೆ ಕಿಡಿಗೇಡಿಗಳು ಹೊಡೆದಿದ್ದಾರೆ. ಕುರಿಗಳು ಕುಡಿಯುವ ನೀರಿಗೆ ಅಪರಿಚಿತರು ಯೂರಿಯಾ ಮಿಶ್ರಣ ಮಾಡಿದ ಪರಿಣಾಮ, ನೀರು ಕುಡಿದ ಏಳು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹನೂರು ತಾಲ್ಲೂಕಿನ ಡಿ. ವಿಲೇಜ್‌ನ ಬೂದಿಕೆರೆ ಬಳಿ ಸಂಭವಿಸಿದೆ. 75 ಅರಬಗೆರೆ ಗ್ರಾಮದ ನಿವಾಸಿ ಮುತ್ತೇಗೌಡ ಬಿನ್ ಕರಗೆಗೌಡ ಎಂಬುವವರಿಗೆ ಸೇರಿದ ಕುರಿಗಳು ಈ ಮಾರಣಹೋಮಕ್ಕೆ ಬಲಿಯಾಗಿವೆ. ​ಮುತ್ತೇಗೌಡ ಅವರು ಪ್ರತಿದಿನದಂತೆ ಸೋಮವಾರ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕುರಿ…

Read More

ರಾಯಚೂರು: ಜಾತ್ರೆ ಮುಗಿಸಿ ಮರಳುವಾಗ ಭೀಕರ ಅಪಘಾತ; ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬವೊಂದು ದುರಂತ ಅಂತ್ಯ ಕಂಡಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ​ಘಟನೆಯ ವಿವರ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಬೈಕ್ ಚಾಲನೆ ಮಾಡುತ್ತಿದ್ದ ಅಂಜಿನಯ್ಯ ನಾಯಕ (37) ಮತ್ತು ಹತ್ತು ವರ್ಷದ ಬಾಲಕಿ ಅರ್ಚನಾ…

Read More

ಮುಂಡಗೋಡ ಮೀಟರ್ ಬಡ್ಡಿ ಕಿಂಗ್‌ಪಿನ್ ಹತ್ಯೆ ರಹಸ್ಯ ಬಯಲು: ಐವರು ಸುಪಾರಿ ಹಂತಕರ ಬಂಧನ, ಪಿಸ್ತೂಲ್ ವಶ

​ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಸಂಚಲನ ಮೂಡಿಸಿದ್ದ ಮೀಟರ್ ಬಡ್ಡಿ ದಂಧೆಯ ಕಿಂಗ್‌ಪಿನ್ ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣದ ಸುರುಳಿ ಬಿಚ್ಚಿಕೊಂಡಿದೆ. ಬಡ್ಡಿ ದಂಧೆಯ ವೃತ್ತಿ ವೈಷಮ್ಯಕ್ಕಾಗಿ ಸುಪಾರಿ ನೀಡಿ ಈ ಹತ್ಯೆ ಮಾಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನ ನೆಲಮಂಗಲದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮುಂಡಗೋಡಿನ ನಿವಾಸಿ ಮಂಜುನಾಥ ಕಾಜಗಾರ ಅಲಿಯಾಸ್ ಮಂಜ್ಯಾ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮಂಜುನಾಥ ಹಾಗೂ ಮೃತ ಜಮೀರ್…

Read More

ಬೆಳಗಾವಿ: ಖ್ಯಾತ ವಕೀಲೆ ಪೂಜಾ ಕಾಕತಕರ್ ನಿವಾಸದ ಮೇಲೆ ಗುಂಡಿನ ದಾಳಿ; ಪುತ್ರಿ ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಗರದ ಮಂಡೋಳಿ ರಸ್ತೆಯಲ್ಲಿರುವ ಖ್ಯಾತ ವಕೀಲೆ ಪೂಜಾ ಕಾಕತಕರ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ಮಧ್ಯರಾತ್ರಿ ಸುಮಾರು 1 ರಿಂದ 2 ಗಂಟೆಯ ಅವಧಿಯಲ್ಲಿ ಈ ಕೃತ್ಯ ನಡೆದಿದ್ದು, ಇಡೀ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ​ದುಷ್ಕರ್ಮಿಗಳು ಪೂಜಾ ಅವರ ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿಕೊಂಡು ಫೈರಿಂಗ್ ನಡೆಸಿದ್ದಾರೆ. ಆ ಸಮಯದಲ್ಲಿ ಮೊದಲ ಮಹಡಿಯ ಕೊಠಡಿಯಲ್ಲಿ ಪೂಜಾ…

Read More

ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ: ಸಿಎಂ ಬದಲಾವಣೆ ಕುರಿತು ಲಕ್ಷ್ಮೇಶ್ವರದಲ್ಲಿ ಡಿ.ಕೆ. ಶಿವಕುಮಾರ್ ಮಾರ್ಮಿಕ ನುಡಿ

ಲಕ್ಷ್ಮೇಶ್ವರ (ಗದಗ): “ನಾನು ಕುಳಿತಿರುವ ಈ ಜಾಗದಲ್ಲಿ ವಿಶೇಷ ಶಕ್ತಿಯಿದೆ. ಸಮಯ ಬರಲಿ, ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ” ಎಂದು ಹೇಳುವ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಚರ್ಚೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ​ಭಾನುವಾರ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸುಕ್ಷೇತ್ರ ಮುಕ್ತಿಮಂದಿರಕ್ಕೆ ಭೇಟಿ ನೀಡಿದ ಅವರು, ಲಿಂಗೈಕ್ಯ ರಂಭಾಪುರಿ ವೀರಗಂಗಾಧರ ಸ್ವಾಮಿಗಳ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮುಕ್ತಿಮಂದಿರದಲ್ಲಿ ಕೆಲ ಹೊತ್ತು ಧ್ಯಾನ ಮತ್ತು ಜಪದಲ್ಲಿ ತೊಡಗಿಸಿಕೊಂಡರು. ಈ…

Read More

ವಿಜಯನಗರ: ಡಣಾಪುರ ಬಳಿ ಭೀಕರ ಸರಣಿ ಅಪಘಾತ; ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು

ವಿಜಯನಗರ: ಜಿಲ್ಲೆಯ ಡಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ​ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಿತ್ತೂರು ಗ್ರಾಮದ ನಾಗಪ್ಪ (56), ಇವರ ಪುತ್ರ ಕೊಟ್ರೇಶ್ (22), ಪುತ್ರಿ ಸುಜಾತಾ (35) ಹಾಗೂ ತಿಮ್ಮಲಾಪುರ ಗ್ರಾಮದ ದುರುಗಪ್ಪ (55) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಿತ್ತೂರು ಗ್ರಾಮದ ಈ ನಾಲ್ವರು ಎರಡು…

Read More

ಏಪ್ರಿಲ್ 30ರಂದು ಬಿಳಿಗಿರಿರಂಗನಬೆಟ್ಟದಲ್ಲಿ ಅದ್ದೂರಿ ಬ್ರಹ್ಮ ರಥೋತ್ಸವ: ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಚಾಮರಾಜನಗರ: ಜಿಲ್ಲೆಯ ಸುಪ್ರಸಿದ್ಧ ಯಾತ್ರಾಕ್ಷೇತ್ರ ಬಿಳಿಗಿರಿರಂಗನಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವವು ಏಪ್ರಿಲ್ 30ರಂದು ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವ ಸಾವಿರಾರು ಭಕ್ತಾದಿಗಳಿಗೆ ಯಾವುದೇ ಲೋಪವಾಗದಂತೆ ಕುಡಿಯುವ ನೀರು, ಸಾರಿಗೆ ಹಾಗೂ ಭದ್ರತೆ ಸೇರಿದಂತೆ ಸಕಲ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದಲ್ಲಿ ನಡೆದ ರಥೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ರಥೋತ್ಸವದ ಸಂದರ್ಭದಲ್ಲಿ ಭಾರಿ ಸಂಖ್ಯೆಯ…

Read More

ಅಮಾವಾಸ್ಯೆ ದರ್ಶನ ಮುಗಿಸಿ ಬರುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ: ರಾಜ್ಯವನ್ನೇ ನಡುಗಿಸಿದ ಭೀಕರ ದುರಂತ!

​ಯಾದಗಿರಿ: ದೈವದರ್ಶನ ಮುಗಿಸಿ ಮರಳುತ್ತಿದ್ದ ಕುಟುಂಬವೊಂದಕ್ಕೆ ವಿಧಿ ಅಕ್ಷರಶಃ ಮೃತ್ಯುರೂಪಿಯಾಗಿ ಅಪ್ಪಳಿಸಿದೆ. ಇಂದು ಬೆಳಿಗ್ಗೆ ಸುಮಾರು 9:45ರ ಸುಮಾರಿಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯ ಭೀಕರತೆಗೆ ಒಂದೇ ಕುಟುಂಬದ ಆರು ಮಂದಿ ಕಾರಿನಲ್ಲೇ ಸಜೀವ ದಹನಗೊಂಡಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ವ್ಯಾಪ್ತಿಯಲ್ಲಿ ನಡೆದಿದೆ. ​ಬೆಂಗಳೂರಿನಿಂದ ಕಲಬುರಗಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಹಾಗೂ ತಿಂಥಣಿ ಮೌನೇಶ್ವರ ವೇಣುಗೋಪಾಲ ಸ್ವಾಮಿಯ ದರ್ಶನ ಮುಗಿಸಿ ಸಿರವಾರಕ್ಕೆ ಹಿಂತಿರುಗುತ್ತಿದ್ದ ಕಾರಿನ ನಡುವೆ…

Read More