ಮಲೆ ಮಹದೇಶ್ವರ ಬೆಟ್ಟದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಚಾಲನೆ: ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ
ಹನೂರ: ಪವಿತ್ರ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಹಸಿರು ನಾಳೆ-ಎಂ.ಎಂ. ಹಿಲ್ಸ್’ (Green Tomorrow – MM Hills) ಅಭಿಯಾನದ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿ ಶ್ರೀರೂಪ ಅವರು ಘನತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳಿಗೆ ಅಧಿಕೃತವಾಗಿ ಚಾಲನೆ ನೀಡಿದರು. ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಈ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನೂತನವಾಗಿ…

