​ಯಲ್ಲಾಪುರ: ಅರಬೈಲ್ ಘಟ್ಟದಲ್ಲಿ ಇಥೆನಾಲ್ ಟ್ಯಾಂಕರ್ ಪಲ್ಟಿ; ಬೆಂಕಿಗಾಹುತಿಯಾದ ಲಾರಿ

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರ ತಿರುವಿನಲ್ಲಿ ಇಥೆನಾಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದ ಘಟನೆ ಜ.31ರ ಶನಿವಾರ ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಲಾರಿ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ. ​ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ಶಿವಾನಂದ ಬೀರಾದಾರ್ ಎಂಬುವವರು ಇಥೆನಾಲ್ ತುಂಬಿದ ಟ್ಯಾಂಕರ್ ಅನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು….

Read More

ಯಲ್ಲಾಪುರ ರಂಜಿತಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅರಣ್ಯದಲ್ಲಿ ಆರೋಪಿ ರಫೀಕ್ ಶವ ಪತ್ತೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಸಂಭವಿಸಿದ ವಿಚ್ಛೇದಿತ ಮಹಿಳೆ ರಂಜಿತಾ ಬನಸವಾಡೆ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿ ರಫೀಕ್ (30) ಪಟ್ಟಣದ ಸಮೀಪದ ಕಾಳಮ್ಮನಗರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಂಜಿತಾ ಅವರನ್ನು ಕೊಲೆ ಮಾಡಿ ಅಡಗಿದ್ದ ಆರೋಪಿಗಾಗಿ ರವಿವಾರದಂದು ಶ್ವಾನದಳದೊಂದಿಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ನೇಹದ ಹೆಸರಲ್ಲಿ ನಡೆದ ಘಾತುಕ ಕೃತ್ಯ:ಕಳೆದ ಹತ್ತು…

Read More

​ಯಲ್ಲಾಪುರ: ರಂಜಿತಾ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ 2 ಎಕರೆ ಜಮೀನು ನೀಡಿ – ಬಿ.ವೈ. ವಿಜಯೇಂದ್ರ ಆಗ್ರಹ

​ಯಲ್ಲಾಪುರ: ಮುಸ್ಲಿಂ ಯುವಕನ ಚಾಕು ಇರಿತಕ್ಕೆ ಬಲಿಯಾದ ದಲಿತ ಹಿಂದೂ ಯುವತಿ ರಂಜಿತಾ ಬನಸವಾಡೆ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಕ್ಷಣವೇ 50 ಲಕ್ಷ ರೂಪಾಯಿ ಪರಿಹಾರ ಹಾಗೂ 2 ಎಕರೆ ಜಮೀನು ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಭಾನುವಾರ ಯಲ್ಲಾಪುರಕ್ಕೆ ಭೇಟಿ ನೀಡಿದ ಅವರು, ಮೃತ ಯುವತಿಯ ಅಂತಿಮ ದರ್ಶನ ಪಡೆದು, ಅವರ ತಾಯಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವತಿಯ ಸಾವಿನಿಂದ ಹತ್ತು ವರ್ಷದ…

Read More

ಮಾದಕ ವಸ್ತು ತಡೆದಿದ್ದಕ್ಕೆ ಜೈಲರ್‌ ಮೇಲೆ ಖೈದಿಗಳಿಂದ ಮಾರಣಾಂತಿಕ ಹಲ್ಲೆ: ಕಾರವಾರ ಜೈಲಿನಲ್ಲಿ ಭೀಕರ ಘಟನೆ

ಮಾದಕ ವಸ್ತು ತಡೆದಿದ್ದಕ್ಕೆ ಜೈಲರ್‌ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ: ಕಾರವಾರ ಜೈಲಿನಲ್ಲಿ ಭೀಕರ ಘಟನೆ ಕಾರವಾರ (ಉತ್ತರಕನ್ನಡ): ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆ ಮತ್ತು ಬಳಕೆಗೆ ಸಂಪೂರ್ಣವಾಗಿ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಮಂಗಳೂರಿನ ಮೂಲದ ಇಬ್ಬರು ಕುಖ್ಯಾತ ರೌಡಿಗಳು ಜೈಲರ್ ಮತ್ತು ಇತರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನೆ ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ವರದಿಯಾಗಿದೆ. ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಕರ್ತವ್ಯ ನಿರತ ಇತರೆ ಮೂವರು ಸಿಬ್ಬಂದಿ ಮೇಲೆ…

Read More

ಯಲ್ಲಾಪುರ ಅರಬೈಲ್ ಘಟ್ಟದಲ್ಲಿ ಎಥನಾಲ್ ಟ್ಯಾಂಕರ್ ಪಲ್ಟಿ: ಭಾರಿ ಬೆಂಕಿ, ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಯಲ್ಲಾಪುರ, ಉತ್ತರ ಕನ್ನಡ: ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಸಮೀಪದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಾರುತಿ ದೇವಸ್ಥಾನದ ಎದುರು ಶನಿವಾರ ಬೆಳಗಿನ ಜಾವ ಎಥನಾಲ್ (ಸ್ಪಿರಿಟ್) ತುಂಬಿದ ಟ್ಯಾಂಕರ್‌ ಲಾರಿ ಪಲ್ಟಿಯಾಗಿ ಭಾರಿ ಬೆಂಕಿ ಹೊತ್ತಿಕೊಂಡ ದುರ್ಘಟನೆ ಸಂಭವಿಸಿದೆ. ಈ ಘಟನೆ ಪರಿಣಾಮವಾಗಿ ಹೆದ್ದಾರಿಯಲ್ಲಿ ಸಂಪೂರ್ಣ ಸಂಚಾರ ಅಸ್ತವ್ಯಸ್ತಗೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿಯು ಅರಬೈಲ್ ಘಟ್ಟದ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕಕ್ಕೆ ಪಲ್ಟಿಯಿತು. ಟ್ಯಾಂಕರ್ ಪಲ್ಟಿಯಾದ…

Read More

ದಾಖಲೆ ಇಲ್ಲದೆ ಖಾಸಗಿ ಬಸ್‌ನಲ್ಲಿ ಸಾಗಿಸುತ್ತಿದ್ದ 1.99 ಕೋಟಿ ರೂ. ನಗದು ವಶ

ಕಾರವಾರ: ದಾಖಲೆ ಇಲ್ಲದೆ ಖಾಸಗಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ ಬರೋಬ್ಬರಿ ₹1,99,99,500 ನಗದನ್ನು ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಮಂಗಳವಾರ ನಸುಕಿನ ಜಾವ ಚಿತ್ತಾಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ​ಪಣಜಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನ್ನು ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಈ ಬೃಹತ್ ಮೊತ್ತದ ಹಣ ಪತ್ತೆಯಾಗಿದೆ. ರಾಜಸ್ಥಾನ ಮೂಲದ ಕಲ್ವೇಶ್ ಮತ್ತು ಭಮ್ರುಕುಮಾರ ಎಂಬುವವರು ಈ ಹಣವನ್ನು ಸಾಗಿಸುತ್ತಿದ್ದರು ಎಂದು ಚಿತ್ತಾಕುಲ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ​ಸಾಗಿಸಲಾಗುತ್ತಿದ್ದ ನೋಟಿನ ರಾಶಿಗಳನ್ನು ಎರಡು ಬ್ಯಾಗ್‌ಗಳಲ್ಲಿ ತುಂಬಿಸಿಡಲಾಗಿತ್ತು….

Read More

ಮನೆ ಮುಂದೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: ಹೊನ್ನಾವರದಲ್ಲಿ ದಂಪತಿ ದಾರುಣ ಸಾವು

ಹೊನ್ನಾವರ (ಉತ್ತರ ಕನ್ನಡ): ತಾಲೂಕಿನ ಕಾಸರಕೋಡು ಗ್ರಾಮದ ವಿನಾಯಕ ಕೇರಿಯಲ್ಲಿ ಮನೆಯ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ಸಂಭವಿಸಿದೆ. ಸಂತೋಷ ಗೌಡ (ಗಂಡ) ಮತ್ತು ಸೀತಾ ಗೌಡ (ಪತ್ನಿ) ಮೃತ ದುರ್ದೈವಿಗಳು. ಘಟನೆ ವಿವರ:ಭಾನುವಾರ ಸಂಜೆ ವೇಳೆಗೆ ಸಂತೋಷ ಗೌಡ ಅವರು ಮನೆಯ ಮುಂಭಾಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ಸ್ಪರ್ಶಿಸಿದ್ದಾರೆ. ತಕ್ಷಣವೇ ವಿದ್ಯುತ್ ಪ್ರವಹಿಸಿ ಅವರು ಒದ್ದಾಡುವುದನ್ನು ಕಂಡ ಪತ್ನಿ ಸೀತಾ ಅವರು, ಪತಿಯನ್ನು…

Read More

ಯೂಟ್ಯೂಬರ್ ಮುಕಳೆಪ್ಪ ವಿವಾದ: ಮುಂಡಗೋಡ ನೋಂದಣಾಧಿಕಾರಿ ಕಚೇರಿಗೇ ಬೀಗ! ಮುಕಳೆಪ್ಪ-ಗಾಯತ್ರಿ ಮದುವೆ ದಾಖಲೆ ವಿವಾದ; ಸಿಬ್ಬಂದಿ ನಾಪತ್ತೆ, ಸಾರ್ವಜನಿಕರ ಪರದಾಟ

ಮುಂಡಗೋಡ: ಸುಳ್ಳು ದಾಖಲೆ ಸೃಷ್ಟಿಸಿ ಹಿಂದೂ ಯುವತಿಯನ್ನು ವಿವಾಹವಾಗಿದ್ದಾರೆ ಎನ್ನಲಾದ ಯೂಟ್ಯೂಬರ್ ಮುಕಳೆಪ್ಪ (Mukaleppa) ಅವರ ಪ್ರಕರಣವು ಇದೀಗ ಸರ್ಕಾರಿ ಅಧಿಕಾರಿಗಳ ಕುತ್ತಿಗೆಗೆ ಸುತ್ತಿಕೊಂಡಿದೆ. ಈ ವಿವಾದದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ವಿವಾಹ ನೋಂದಣಾಧಿಕಾರಿ ಕಚೇರಿಗೇ ಬೀಗ ಜಡಿದು ಸಿಬ್ಬಂದಿ ನಾಪತ್ತೆಯಾಗಿರುವ ಆತಂಕಕಾರಿ ವಿದ್ಯಮಾನ ನಡೆದಿದೆ. ಸುಳ್ಳು ದಾಖಲೆ ನೀಡಿ ವಿವಾಹ ನಡೆದಿರುವುದು ಬಯಲಾದ ಬೆನ್ನಲ್ಲೇ, ವಿವಾಹ ನೋಂದಣಿ ಮಾಡಿಕೊಟ್ಟಿದ್ದ ಕಚೇರಿ ಸಿಬ್ಬಂದಿ ವಿರುದ್ಧವೂ ದೂರು ದಾಖಲಾಗಿತ್ತು. ಹೀಗಾಗಿ, ಬುಧವಾರದಂದು ನೋಂದಣಾಧಿಕಾರಿ ಹಾಗೂ ಸಿಬ್ಬಂದಿ…

Read More

ಶಿರಸಿ | ಬೆಣ್ಣೆಹೊಳೆ ಜಲಪಾತದಲ್ಲಿ ದುರ್ಘಟನೆ ಒಬ್ಬ ವಿಧ್ಯಾರ್ಥಿ ನೀರು ಪಾಲು ; ಮತ್ತೊಬ್ಬನ ರಕ್ಷಣೆ*

ಉತ್ತರ ಕನ್ನಡ ಜಿಲ್ಲೆಯ: ಶಿರಸಿ ತಾಲ್ಲೂಕಿನ ಬೆಣ್ಣೆಹೊಳೆ ಜಲಪಾತದ ಬಳಿ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆ ಅಂತ ಬಂದಿದ್ದ ವಿದ್ಯಾರ್ಥಿಗಳು ಕಾಲು ಜಾರಿ ಜಲಪಾತದಲ್ಲಿ ಕೊಚ್ಚಿ ಹೋದ ದುರ್ಘಟನೆ ಸಂಭವಿಸಿದೆ. ಇದರಲ್ಲಿ ಒಬ್ಬ ವಿಧ್ಯಾರ್ಥಿ ಕಲ್ಲು ಬಂಡೆಗಳ ನಡುವೆ ಸಿಲುಕಿ ಕೊಂಡಿದ್ದು ಅವನನ್ನು ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ. ಮತ್ತೊಬ್ಬ ವಿಧ್ಯಾರ್ಥಿ ಕೊಚ್ಚಿ ಹೋಗಿದ್ದು ಅಗ್ನಿಶಾಮಕ ದಳ ಹಾಗೂ ಪೋಲಿಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಹೊಸಪೇಟೆ ಮೂಲದ ಶ್ರೀನಿವಾಸ ರಕ್ಷಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದು, ಹೂವಿನಹಡಗಲಿ ಮೂಲದ ರಾಹುಲ್ ಕಾಣೆಯಾದ ವಿಧ್ಯಾರ್ಥಿಯಾಗಿದ್ದಾನೆ. ಶಿರಸಿಯ…

Read More