ಭಟ್ಕಳ:ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದ ಎಂಟು ಮಂದಿ ನೀರುಪಾಲು
ಭಟ್ಕಳ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪದ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಸಂಭವಿಸಿದ ದಾರುಣ ಘಟನೆಗೆ ಎಂಟು ಮಂದಿ ನೀರುಪಾಲಾಗಿದ್ದಾರೆ. ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34),…

