ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಗೋಗಿ ಬಳಿ ₹2.62 ಲಕ್ಷ ಮೌಲ್ಯದ ಅಕ್ಕಿ ಜಪ್ತಿ, ಓರ್ವ ಬಂಧನ

ಯಾದಗಿರಿ: ಶಹಾಪುರ ತಾಲೂಕಿನಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ದಂಧೆ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಸ್ವಕ್ಷೇತ್ರದಲ್ಲೇ ಈ ಘಟನೆ ನಡೆದಿದ್ದು, ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಹಾಪುರ ತಾಲೂಕಿನ ಗೋಗಿ ಗ್ರಾಮದ ಹೊರವಲಯದಲ್ಲಿ ಪಡಿತರ ಚೀಟಿದಾರರಿಂದ ಖರೀದಿಸಿದ ಅಕ್ಕಿಯನ್ನು ಸಂಗ್ರಹಿಸಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ನಿರೀಕ್ಷಕ ಬಸವರಾಜ್ ಮತ್ತು ಪಿಎಸ್‌ಐ ದೇವೇಂದ್ರರೆಡ್ಡಿ ಅವರು, ತೆಲಂಗಾಣ ನೋಂದಣಿ ಸಂಖ್ಯೆ ಹೊಂದಿದ್ದ ಗೂಡ್ಸ್ ವಾಹನವನ್ನು…

Read More

ಪೊಲೀಸ್ ದಾಳಿಗೆ ಬೆದರಿ ಓಡಿದ ವ್ಯಕ್ತಿ ಹೃದಯಾಘಾತದಿಂದ ಸಾವು:ಹುಣಸಗಿ ಪೊಲೀಸ್ ಠಾಣೆ ಎದುರು ಸಂಬಂಧಿಕರ ಪ್ರತಿಭಟನೆ

ಯಾದಗಿರಿ: ಹುಣಸಗಿ ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದಲ್ಲಿ ನಡೆದ ಇಸ್ಪೀಟ್ ಜೂಜು ಅಡ್ಡೆ ಮೇಲಿನ ದಾಳಿಯಿಂದಾಗಿ ಭಯಭೀತಗೊಂಡು ಓಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶನಿವಾರ ವಜ್ಜಲ್ ಗ್ರಾಮದಲ್ಲಿ ನಡೆದಿದೆ. ಘಟನೆ ಖಂಡಿಸಿ ಮೃತರ ಸಂಬಂಧಿಕರು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮೃತರನ್ನು ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದವರಾದ ಮಂಜುನಾಥ್ (43) ಎಂದು ಗುರುತಿಸಲಾಗಿದೆ. ಅವರು ಹಲವು ವರ್ಷಗಳಿಂದ ತಮ್ಮ ಪತ್ನಿಯ ತವರು ಮನೆಯಾದ ವಜ್ಜಲ್ ಗ್ರಾಮದಲ್ಲಿಯೇ ನೆಲೆಸಿದ್ದರು ಎಂದು ಹೇಳಲಾಗಿದೆ. ಪೊಲೀಸ್ ವಿರುದ್ಧ…

Read More

ಯಾದಗಿರಿ ವಸತಿ ಶಾಲೆಯಲ್ಲಿ ಘೋರ ದುರಂತ: ಶೌಚಾಲಯದಲ್ಲೇ ವಿದ್ಯಾರ್ಥಿನಿ ಹೆರಿಗೆ! ಪ್ರಾಚಾರ್ಯ ಸೇರಿ ನಾಲ್ವರ ಅಮಾನತು

ಯಾದಗಿರಿ: ವಿದ್ಯಾರ್ಥಿಗಳ ಪಾಲಿಗೆ ಸುರಕ್ಷಿತ ಆಶ್ರಯವಾಗಬೇಕಿದ್ದ ವಸತಿ ಶಾಲೆಗಳು ಇಂದು ನಿರ್ಲಕ್ಷ್ಯ, ಬೇಜವಾಬ್ದಾರಿತನ ಮತ್ತು ಅನೈತಿಕತೆಯ ತಾಣಗಳಾಗಿ ಪರಿವರ್ತನೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಯಾದಗಿರಿ ನಗರದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಅಮಾನವೀಯ ಘಟನೆ ಬಯಲಾಗಿದೆ. ಈ ದಾರುಣ ಪ್ರಸಂಗದ ಬೆನ್ನಲ್ಲೇ, ಜಿಲ್ಲಾಡಳಿತವು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಶಾಲೆಯ ಪ್ರಾಚಾರ್ಯರಾದ ಬಸಮ್ಮ ಪಾಟೀಲ್, ನಿಲಯ ಮೇಲ್ವಿಚಾರಕಿ ಗೀತಾ ಹೊಸ್ಮನಿ, ಶಿಕ್ಷಕ ನರಸಿಂಹಮೂರ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಧರ್ ಅವರನ್ನು ತಕ್ಷಣದಿಂದಲೇ…

Read More

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಶೌಚಾಲಯದಲ್ಲೇ ಹೆರಿಗೆ: ಯಾದಗಿರಿಯ ಘಟನೆ, ಶಿಕ್ಷಕರು-ಪಾಲಕರು ಗಮನಿಸಬೇಕಾದ ಸಂಗತಿ!

ಯಾದಗಿರಿ: ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸುರಕ್ಷತೆ ಮತ್ತು ನೈತಿಕ ವಾತಾವರಣ ನೀಡಬೇಕಾದ ವಸತಿ ಶಾಲೆಗಳು ಇಂದು ಎಂತಹ ದುರವಸ್ಥೆಗೆ ತಲುಪಿವೆ ಎಂಬುದಕ್ಕೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದ ಘಟನೆಯೇ ಸಾಕ್ಷಿ. ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಶೌಚಾಲಯದಲ್ಲೇ ಹೆರಿಗೆಯಾದ ಘಟನೆ ಇಡೀ ಸಮಾಜದ ತಲೆ ತಗ್ಗಿಸುವಂತಿದೆ. ಈ ಘಟನೆ ರಾಜ್ಯದ ಎಲ್ಲ ಶಾಲಾ ಶಿಕ್ಷಕರು, ಆಡಳಿತ ಮಂಡಳಿಗಳು ಮತ್ತು ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಗಂಭೀರ ವಿಷಯವಾಗಿದೆ. ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ…

Read More

‘ಆರೆಸ್ಸೆಸ್ ಗೀತೆ ಹಾಡಿದರೆ ಸಿಎಂ ಸ್ಥಾನ ಸಿಗುತ್ತೆ ಎಂದರೆ, ನಾನು-ಚೆನ್ನಾರೆಡ್ಡಿ ಇಬ್ಬರೂ ಹಾಡುತ್ತೇವೆ’: ಸಚಿವ ಸತೀಶ್ ಜಾರಕಿಹೋಳಿ ವ್ಯಂಗ್ಯ

ಯಾದಗಿರಿ: ‘ಆರೆಸ್ಸೆಸ್ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂದರೆ, ನಾನು ಮತ್ತು ಶಾಸಕ ಚೆನ್ನಾರೆಡ್ಡಿ ಪಾಟೀಲ್ ಇಬ್ಬರೂ ಹಾಡುತ್ತೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ವಿರೋಧಿಗಳಿಗೆ ವ್ಯಂಗ್ಯವಾಡಿದ್ದಾರೆ. ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಸ್ಕೃತ ಭಾಷೆಯನ್ನು ಚೆನ್ನಾಗಿ ಬಲ್ಲವರಾಗಿದ್ದು, ಸಂದರ್ಭಕ್ಕೆ ಅನುಗುಣವಾಗಿ ಅಧಿವೇಶನದಲ್ಲಿ ಹಾಡಿದ್ದಾರೆ ಅಷ್ಟೇ. ಇದರ ಹಿಂದಿನ ಉದ್ದೇಶ ಬೇರೆಯೇ ಇದೆ ಎಂದು ವಿರೋಧ ಪಕ್ಷದವರು ಮಾತನಾಡುತ್ತಿರುವುದು ಸರಿಯಲ್ಲ ಎಂದರು.ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರನ್ನು ಟೀಕಿಸಿದ…

Read More