ಕೊಟ್ಟೂರು ಬೆಚ್ಚಿಬೀಳಿಸಿದ ಭೀಕರ ತ್ರಿವಳಿ ಕೊಲೆ: ಮನೆಯ ಹಾಲ್‌ನಲ್ಲೇ ತಂದೆ-ತಾಯಿ-ತಂಗಿ ಶವ ಹೂತಿಟ್ಟ ನರಹಂತಕ ಮಗ!

​ವಿಜಯನಗರ: ಕೊಟ್ಟೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವಂತ ಭೀಕರ ತ್ರಿವಳಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನು ಭೀಕರವಾಗಿ ಹತ್ಯೆಗೈದ ನರಹಂತಕ ಮಗ, ಮನೆಯ ಹಾಲ್‌ನಲ್ಲೇ ಶವಗಳನ್ನು ಹೂತಿಟ್ಟು ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ತಿಲಕ್ ನಗರ ಠಾಣೆ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಒಂದೇ ಕುಣಿಯಲ್ಲಿ ಹೂತಿಟ್ಟಿದ್ದ ಮೂರು ಮೃತದೇಹಗಳು ಪತ್ತೆಯಾಗಿವೆ. ಆರೋಪಿ ಅಕ್ಷಯ್ ತಂದೆ ಭೀಮರಾವ್ (50), ತಾಯಿ ಜಯಲಕ್ಷ್ಮಿ (45) ಮತ್ತು ತಂಗಿ ಎಚ್.ಅಮೃತಾ (17) ಅವರನ್ನು…

Read More

​ಯಲ್ಲಾಪುರ: ಅರಬೈಲ್ ಘಟ್ಟದಲ್ಲಿ ಇಥೆನಾಲ್ ಟ್ಯಾಂಕರ್ ಪಲ್ಟಿ; ಬೆಂಕಿಗಾಹುತಿಯಾದ ಲಾರಿ

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರ ತಿರುವಿನಲ್ಲಿ ಇಥೆನಾಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದ ಘಟನೆ ಜ.31ರ ಶನಿವಾರ ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಲಾರಿ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ. ​ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ಶಿವಾನಂದ ಬೀರಾದಾರ್ ಎಂಬುವವರು ಇಥೆನಾಲ್ ತುಂಬಿದ ಟ್ಯಾಂಕರ್ ಅನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು….

Read More

​ಕೋಲಾರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ನಾನೇ ಕೊಂದಿದ್ದು’ ಎಂದು ವಿಡಿಯೋ ಬಿಡುಗಡೆ ಮಾಡಿದ ಆರೋಪಿ!

​ಕೋಲಾರ: ಜಿಲ್ಲೆಯ ಮೆಟ್ಟುಬಂಡೆ ಬಳಿ ಜನವರಿ 27 ರಂದು ನಡೆದಿದ್ದ ಯಲ್ಲೇಶ್ (41) ಎಂಬುವವರ ಭೀಕರ ಹತ್ಯೆ ಪ್ರಕರಣ ಈಗ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ಬಿಂದು ಕುಮಾರ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಹತ್ಯೆಯ ಹೊಣೆಯನ್ನು ತಾನೇ ಹೊತ್ತುಕೊಳ್ಳುವ ಮೂಲಕ ಪೊಲೀಸರಿಗೆ ಸವಾಲು ಹಾಕಿದ್ದಾನೆ. ​ಸೇಡಿನ ಕಿಚ್ಚಿಗೆ ಬಲಿಯಾದ ಯಲ್ಲೇಶ್: ನರಸಾಪುರದ ಸಂತೋಷ್ ಎಂಬುವವರ ಪುತ್ರ ಬಿಂದು ಕುಮಾರ್, ತಾನು ಹಾಗೂ ಅಕ್ಷಯ್ ತಂಡ ಸೇರಿ ಈ ಕೃತ್ಯ ಎಸಗಿರುವುದಾಗಿ…

Read More

ಕುಂದಗೋಳ: ಹಳೆಯ ದ್ವೇಷಕ್ಕೆ ನಿಂಗರಾಜ ಎಂಬ ಅಪ್ರಾಪ್ತನ ಬರ್ಬರ ಹತ್ಯೆ; ಮೂವರು ಅಪ್ರಾಪ್ತ ಬಾಲಕರಿಂದ ಕೃತ್ಯ

ಕುಂದಗೋಳ: ಪಟ್ಟಣದ ಸರ್ವೋದಯ ಶಾಲೆಯ ಹಿಂಭಾಗದಲ್ಲಿರುವ ಸೊಸೈಟಿಯ ಖುಲ್ಲಾ ಜಾಗದಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಬಾಲಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿ, ಮತ್ತೊಬ್ಬನಿಗೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ನಿಂಗರಾಜ ಎಂಬ ಯುವಕನೇ ಕೊಲೆಯಾದ ದುರ್ದೈವಿಯಾಗಿದ್ದು, ಸಂಜು ತಂದೆ ಮಹಾಂತೇಶ ಶಿರಸಂಗಿ ಎಂಬುವವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೊಳಗಾದ ಮೂವರು ಅಪ್ರಾಪ್ತ ಬಾಲಕರ ವಿರುದ್ಧ ದೂರು ದಾಖಲಾಗಿದೆ. ದಿನಾಂಕ 14-01-2025 ರಂದು ಮಧ್ಯಾಹ್ನ 3:45 ರಿಂದ 4:00 ಗಂಟೆಯ ಸುಮಾರಿಗೆ…

Read More

ಹುಬ್ಬಳ್ಳಿ: ಹಳೆ ದ್ವೇಷಕ್ಕೆ ರಕ್ತಪಾತ: ಅಣ್ಣನಿಗೆ 7 ಬಾರಿ ಚಾಕು ಇರಿದು ಕೊಲೆಗೆ ಯತ್ನಿಸಿದ ತಮ್ಮ

​ಹುಬ್ಬಳ್ಳಿ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸ್ವಂತ ತಮ್ಮನೇ ಅಣ್ಣನಿಗೆ ಚಾಕುವಿನಿಂದ ಮನಬಂದಂತೆ ಇರಿದು ಕೊಲೆಗೆ ಯತ್ನಿಸಿದ ಘೋರ ಘಟನೆ ನಗರದ ಹಳೆ ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ. ​ಗಂಭೀರವಾಗಿ ಗಾಯಗೊಂಡವರನ್ನು ಮಲ್ಲೇಶ್ ಪೂಜಾರ (೪೨) ಎಂದು ಗುರುತಿಸಲಾಗಿದೆ. ಮಲ್ಲೇಶ್ ಅವರು ತಮ್ಮ ಮನೆಯ ಮುಂಭಾಗದಲ್ಲಿ ಮದ್ಯದ ಅಮಲಿನಲ್ಲಿ ಕುಳಿತಿದ್ದರು. ಈ ವೇಳೆ ಏಕಾಏಕಿ ಅಲ್ಲಿಗೆ ಬಂದ ಅವರ ಸಹೋದರ ಪ್ರದೀಪ್, ಹಳೆಯ ದ್ವೇಷದ ಕಾರಣಕ್ಕೆ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದಾಗ ಪ್ರದೀಪ್ ತನ್ನ ಬಳಿಯಿದ್ದ ಚಾಕುವಿನಿಂದ…

Read More

ಕುಂದಗೋಳ: ಅಂದಾಜು17 ವರ್ಷದ ಬಾಲಕನ ಶಂಕಾಸ್ಪದ ಸಾವು, ಕೊಲೆ ಶಂಕೆ?

ಕುಂದಗೋಳ: ಪಟ್ಟಣದ ಪೂಜಾರ ಓಣಿಯ ಅಂದಾಜು 17 ವರ್ಷದ ಬಾಲಕನೊಬ್ಬ ಶಂಕಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ​ಮೃತನನ್ನು ಲಿಂಗರಾಜ ಅವಾರಿ ಅಂದಾಜು (17) ಎಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ ಪಕ್ಕದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಶವ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು. ​ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಕುಂದಗೋಳ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಸಾವಿನ ಸುತ್ತ…

Read More

​ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಬಲಿಯಾದ ಮಾಜಿ ಪಾಲಿಕೆ ಸದಸ್ಯ; ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ದಾವಣಗೇರೆ:ಕೌಟುಂಬಿಕ ಕಲಹದ ಕಿಚ್ಚು ದಾವಣಗೆರೆಯಲ್ಲಿ ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಲ್ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ. ​ದಾವಣಗೆರೆಯ ನಾಗನೂರು ಬಳಿಯಿರುವ ತಮ್ಮ ತೋಟದ ಮನೆಯಲ್ಲಿ ಈ ಭೀಭತ್ಸ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರ ಇಬ್ಬರು ಮಕ್ಕಳು ಮೊದಲು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮಕ್ಕಳ ಈ…

Read More

ಹುಬ್ಬಳ್ಳಿಯಲ್ಲಿ ನರರೂಪಿ ರಾಕ್ಷಸರ ಕೃತ್ಯ: ಅಸಹಾಯಕ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ವೈರಲ್! ಕಾಮುಕರ ಬಂಧನ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಹಾಗೂ ಭೀಭತ್ಸ ಘಟನೆ ಒಂದು ಬೆಳಕಿಗೆ ಬಂದಿದೆ. ಅಸಹಾಯಕ ಮಹಿಳೆಯೊಬ್ಬಳ ಮೇಲೆ ಇಬ್ಬರು ನರಾಧಮರು ಸಾಮೂಹಿಕ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಘೋರ ಪ್ರಕರಣ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಶಿವಶಂಕರ ಕಾಲೋನಿಯ ನಿವಾಸಿಗಳಾದ ಶಿವಾನಂದ್ (29) ಹಾಗೂ ಗಣೇಶ್ ಗಿಡ್ಡಣ್ಣವರ (31) ಎಂದು ಗುರುತಿಸಲಾಗಿದೆ. ಹಾವೇರಿ…

Read More

​ಬೈಲಹೊಂಗಲ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ದುರಂತ; ಬಿಸಿ ಪದಾರ್ಥ ಸೋರಿಕೆಯಾಗಿ ಮೂವರು ಕಾರ್ಮಿಕರ ಸಾವು ಕೆಲವರಿಗೆ ಗಾಯ,

​ಬೈಲಹೊಂಗಲ: ತಾಲ್ಲೂಕಿನ ಮರಕುಂಬಿ ಗ್ರಾಮದ ಸಮೀಪವಿರುವ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಖಾನೆಯ ಎವಿಸಿಪಿ ನಂ-1ರ ಕಂಪಾರ್ಟ್‌ಮೆಂಟ್ ವಾಲ್ ದುರಸ್ತಿ ಕಾರ್ಯದ ವೇಳೆ ಏಕಾಏಕಿ ಕುದಿಯುವ ಬಿಸಿ ಪದಾರ್ಥ ಸೋರಿಕೆಯಾದ ಪರಿಣಾಮ ಈ ಸಾವು-ನೋವು ಸಂಭವಿಸಿದೆ. ​ಸುಮಾರು 40 ಅಡಿ ಎತ್ತರದಲ್ಲಿರುವ ವಾಲ್ ದುರಸ್ತಿ ಕಾರ್ಯಕ್ಕಾಗಿ ಎವಿಸಿಪಿ ನಂ-1ನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕಾರ್ಮಿಕರು ವಾಲ್‌ನ ನಟ್ ಬೋಲ್ಟ್‌ಗಳನ್ನು ತೆಗೆಯುತ್ತಿದ್ದ…

Read More

​ಹುಬ್ಬಳ್ಳಿ: ಉಣಕಲ್ ಬಳಿ ಭೀಕರ ಅಪಘಾತ; ಬಿಆರ್‌ಟಿಎಸ್ ರಸ್ತೆಯಲ್ಲಿ ಚಿಗರಿ ಬಸ್-ಕಾರು ಮುಖಾಮುಖಿ ಡಿಕ್ಕಿ

​ಹುಬ್ಬಳ್ಳಿ: ನಗರದ ಉಣಕಲ್ ಬಳಿಯ ಬಿಆರ್‌ಟಿಎಸ್ (BRTS) ಕಾರಿಡಾರ್‌ನಲ್ಲಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ‘ಚಿಗರಿ’ ಬಸ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ನೆಕ್ಸಾನ್ ಕಾರಿನ ನಡುವೆ ಸಂಭವಿಸಿದ ಈ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ​ಭಾನುವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ…

Read More