ಕಿತ್ತೂರು ಚೆನ್ನಮ್ಮ ವಿಜಯೋತ್ಸವದ ದ್ವಿಶತಮಾನೋತ್ಸವ: ₹ 200ರ ಸ್ಮಾರಕ ನಾಣ್ಯ ಬಿಡುಗಡೆ
ನವದೆಹಲಿ: ವೀರರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ ೨೦೦ ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ನವದೆಹಲಿಯ ಸಿರಿ ಪೋರ್ಟ್ ಸಭಾಂಗಣದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ ಮತ್ತು ದೆಹಲಿ ಕನ್ನಡ ಸಂಘದ ಸಹಯೋಗದಲ್ಲಿ ಭವ್ಯ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ೨೦೦ ರೂಪಾಯಿಯ ಸ್ಮಾರಕ ನಾಣ್ಯವನ್ನು ಬಿಡುಗಡೆ ಮಾಡಿದರು. ಈ ಸ್ಮಾರಕ ನಾಣ್ಯ ಬಿಡುಗಡೆ ಕಾರ್ಯಕ್ರಮವು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ವಚನಾನಂದ ಮಹಾಸ್ವಾಮಿ…

