ಧಾರವಾಡ: ಅಪಾಯಕಾರಿ ಮರಗಳ ತೆರವಿಗೆ ಜ. 8 ರಂದು ಬಹಿರಂಗ ಹರಾಜು

Spread the love

ಧಾರವಾಡ: ನಗರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿಗಳ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯು ಜನೆವರಿ 08 ರಂದು ಬಹಿರಂಗ ಹರಾಜು ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ.

​ನಗರದ ಸಾರ್ವಜನಿಕ ಸ್ಥಳಗಳಲ್ಲಿ ಸಂಚಾರಕ್ಕೆ ಹಾಗೂ ಕಟ್ಟಡಗಳಿಗೆ ಮುಳುವಾಗುವಂತಿರುವ ಒಟ್ಟು 32 ಮರಗಳು ಮತ್ತು 39 ಮರದ ಟೊಂಗೆಗಳನ್ನು ಕಡಿಯಲು ಈ ಹರಾಜು ನಡೆಸಲಾಗುತ್ತಿದೆ. ಆಸಕ್ತರು ಜನೆವರಿ 08, 2026 ರಂದು ಮಧ್ಯಾಹ್ನ 3 ಗಂಟೆಗೆ ಧಾರವಾಡದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ.

​ಮರ ಸಂರಕ್ಷಣಾ ಕಾಯ್ದೆ 1976 ರ ಅನ್ವಯ ಈ ಮರಗಳ ತೆರವಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ತಕರಾರುಗಳನ್ನು ಹೊಂದಿದ್ದಲ್ಲಿ, ಜನೆವರಿ 07 ರ ಒಳಗಾಗಿ ಲಿಖಿತ ರೂಪದಲ್ಲಿ ದೂರು ಸಲ್ಲಿಸಲು ಅವಕಾಶ ನೀಡಲಾಗಿದೆ. ತಕರಾರು ಇರುವವರು ಧಾರವಾಡದ ಕೆ.ಸಿ. ಪಾರ್ಕ್ ಎದುರಿಗಿನ ಅರಣ್ಯ ಸಂಕೀರ್ಣದಲ್ಲಿರುವ ಮರ ಅಧಿಕಾರಿಯವರಿಗೆ ಅಥವಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ತಮ್ಮ ಮನವಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *