ಧಾರವಾಡ: ಮಳೆ ಹಾನಿ ನಿರ್ವಹಣೆಗೆ ಸಹಾಯವಾಣಿ ಆರಂಭಿಸಿದ ಜಿಲ್ಲಾಡಳಿತ

Spread the love

ಧಾರವಾಡ: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಬಹುದಾದ ಸಮಸ್ಯೆಗಳನ್ನು ನಿರ್ವಹಿಸಲು ಧಾರವಾಡ ಜಿಲ್ಲಾಡಳಿತವು ಸಹಾಯವಾಣಿ ಕೇಂದ್ರಗಳನ್ನು ತೆರೆದಿದೆ. ಮಳೆಯಿಂದ ತೊಂದರೆಗೊಳಗಾದವರು ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಜನರು ಈ ಸಹಾಯವಾಣಿಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.

ಸಹಾಯವಾಣಿ ಸಂಖ್ಯೆಗಳ ವಿವರ ಹೀಗಿದೆ:

  • ಜಿಲ್ಲಾಡಳಿತ ಸಹಾಯವಾಣಿ: 0836-2445508 ಮತ್ತು 1077
  • ಧಾರವಾಡ ಉಪವಿಭಾಗಾಧಿಕಾರಿ ಕಚೇರಿ: 0836-2233860
  • ಧಾರವಾಡ ತಹಶೀಲ್ದಾರ್ ಕಚೇರಿ: 0836-2233822
  • ಅಳ್ನಾವರ ತಹಶೀಲ್ದಾರ್ ಕಚೇರಿ: 0836-2385544
  • ಹುಬ್ಬಳ್ಳಿ ನಗರ ತಹಶೀಲ್ದಾರ್ ಕಚೇರಿ: 0836-2358035
  • ಹುಬ್ಬಳ್ಳಿ ತಹಶೀಲ್ದಾರ್ ಕಚೇರಿ: 0836-2233844
  • ಕಲಘಟಗಿ ತಹಶೀಲ್ದಾರ್ ಕಚೇರಿ: 08370-284535
  • ಕುಂದಗೋಳ ತಹಶೀಲ್ದಾರ್ ಕಚೇರಿ: 08304-290239
  • ನವಲಗುಂದ ತಹಶೀಲ್ದಾರ್ ಕಚೇರಿ: 08380-229240
  • ಅಣ್ಣಿಗೇರಿ ತಹಶೀಲ್ದಾರ್ ಕಚೇರಿ: 8618442759
  • ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ: 0836-2213888, 0836-2213889, 0836-2213869

ಇದರ ಜೊತೆಗೆ, ಸಾರ್ವಜನಿಕರು ಮಳೆಯ ಹಾನಿಯ ಕುರಿತಾದ ಫೋಟೋಗಳು ಮತ್ತು ವೀಡಿಯೊಗಳನ್ನು 8277803778 ವಾಟ್ಸಾಪ್ ಸಂಖ್ಯೆಗೆ ಕಳುಹಿಸುವ ಮೂಲಕವೂ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ಮಳೆ ಹಾನಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ ಜನರು ಈ ಸಹಾಯವಾಣಿಗಳನ್ನು ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *