

ಧಾರವಾಡ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ ಸೊರಕೆ ಅವರ ಆದೇಶದ ಮೇರೆಗೆ, ಶಿವಾನಂದ ನವಲಗುಂದ ಅವರನ್ನು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.
ಕೆಪಿಸಿಸಿ ಸದಸ್ಯ ಚಂದ್ರಶೇಖರ ಗೋವಿಂದಪ್ಪ ಜುಟ್ಟಲ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಶಿವಾನಂದ ನವಲಗುಂದ ಅವರ ನೇಮಕಕ್ಕೆ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಜಿಗಳೂರು ಗ್ರಾಮದವರಾದ ನವಲಗುಂದ ಅವರಿಗೆ ಪಕ್ಷವು ಈ ಮಹತ್ವದ ಜವಾಬ್ದಾರಿಯನ್ನು ವಹಿಸಿದೆ.
ಪಕ್ಷದ ಸೂಚನೆಗಳು ಮತ್ತು ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ನಾಯಕರ ಸಹಕಾರದೊಂದಿಗೆ ಪಕ್ಷದ ಸಂಘಟನೆ ಮತ್ತು ಸಬಲೀಕರಣಕ್ಕಾಗಿ ಶ್ರಮಿಸುವಂತೆ
ಈ ಸಂದರ್ಭದಲ್ಲಿ ನವಲಗುಂದ ಅವರಿಗೆ ಮನವಿ ಮಾಡಲಾಗಿದೆ. ಈ ಹೊಸ ಜವಾಬ್ದಾರಿಯಲ್ಲಿ ಅವರಿಗೆ ಹೆಚ್ಚಿನ ಯಶಸ್ಸು ದೊರೆಯಲಿ ಎಂದು ಹಾರೈಸಲಾಗಿದೆ. ಈ ನೇಮಕವು ಪಕ್ಷದ ಪ್ರಚಾರ ಕಾರ್ಯಗಳಿಗೆ ಹೊಸ ಬಲ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

