ಧಾರವಾಡ: ನಾಳೆ ಹಿರಿಯ ಸಂಗೀತಗಾರ ಡಾ. ಅಶೋಕ ಹುಗ್ಗನ್ನವರ ಅವರಿಗೆ ‘ನುಡಿ ನಮನ’

Spread the love

ಧಾರವಾಡ: ಇತ್ತೀಚೆಗೆ ನಿಧನರಾದ ಹಿರಿಯ ಸಂಗೀತಗಾರ ಹಾಗೂ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಸದಸ್ಯ ಡಾ. ಅಶೋಕ ಹುಗ್ಗನ್ನವರ ಅವರಿಗೆ ಗೌರವ ಸಲ್ಲಿಸಲು ಜನೆವರಿ 06ರಂದು ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

​ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ವಿವರ:

  • ದಿನಾಂಕ: ಜನೆವರಿ 06, 2026 (ಮಂಗಳವಾರ)
  • ಸಮಯ: ಸಂಜೆ 4:00 ಗಂಟೆಗೆ
  • ಸ್ಥಳ: ಸುವರ್ಣ ಸಾಂಸ್ಕೃತಿಕ ಸಮುಚ್ಚಯ, ರಂಗಾಯಣ ಆವರಣ, ಧಾರವಾಡ.

ಗಣ್ಯರ ಉಪಸ್ಥಿತಿ:

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿರಲಿದ್ದಾರೆ. ಡಿಸೆಂಬರ್ 25, 2025ರಂದು ಅಕಾಲಿಕ ನಿಧನರಾದ ಡಾ. ಅಶೋಕ ಹುಗ್ಗನ್ನವರ ಅವರ ಸ್ಮರಣಾರ್ಥ ನಡೆಯುವ ಈ ಕಾರ್ಯಕ್ರಮಕ್ಕೆ ನಾಡಿನ ಸಂಗೀತ ಕಲಾವಿದರು, ಸಾಹಿತ್ಯಾಸಕ್ತರು ಹಾಗೂ ಅವರ ಅಪಾರ ಶಿಷ್ಯವೃಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಮನ ಸಲ್ಲಿಸಬೇಕೆಂದು ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *