ಸೆ:23 ರಂದು ಪರಿಸರ ಜಾಗೃತಿ ಕಾರ್ಯಕ್ರಮ: ಕೆಎಲ್‌ಇ ಕಾಲೇಜಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆ

Spread the love

ಧಾರವಾಡ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಧಾರವಾಡ ಮತ್ತು ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ “ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣಮಹೋತ್ಸವ” ಅಂಗವಾಗಿ ‘ಪರಿಸರ ಜಾಗೃತಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವು ಸೆಪ್ಟೆಂಬರ್ 23,ರ ಮಂಗಳವಾರ ಮಧ್ಯಾಹ್ನ 2:30 ಗಂಟೆಗೆ ಸಂಶಿಯ ಕೆಎಲ್‌ಇ ಕಾಲೇಜು ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ವಿವರಗಳು:

  • ಉದ್ಘಾಟನೆ: ಗೋಪಾಲಕೃಷ್ಣ ಸಣ್ಣತಂಗಿ, ವಲಯ ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಧಾರವಾಡ.
  • ಮುಖ್ಯ ಅತಿಥಿಗಳು: ಐ.ಹೆಚ್. ಜಗದೀಶ್, ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಧಾರವಾಡ, ಮತ್ತು ಶಂಕರ ಕುಂಬಿ, ಅಧ್ಯಕ್ಷರು, ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ, ಧಾರವಾಡ.
  • ಅಧ್ಯಕ್ಷತೆ: ಎ.ಬಿ. ಉಪ್ಪಿನ, ಅಧ್ಯಕ್ಷರು, ಕೆಎಲ್‌ಇ ಕಾಲೇಜು, ಸಂಶಿ.

ಈ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿಯ ಕುರಿತು ಉಪನ್ಯಾಸ ಮತ್ತು ವಿಚಾರ ವಿನಿಮಯ ನಡೆಯಲಿದ್ದು, ಎಲ್ಲರೂ ಭಾಗವಹಿಸಿ ಸಹಕರಿಸಬೇಕೆಂದು ಆಯೋಜಕರು ಕೋರಿದ್ದಾರೆ.

Leave a Reply

Your email address will not be published. Required fields are marked *