ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ; ಸ್ಪರ್ಧೆಗಳ ಸ್ಥಳ ಬದಲಾವಣೆ: ಅಕ್ಟೋಬರ್ 27ರ ಕಾರ್ಯಕ್ರಮ ಶ್ರೀನಗರದ ಪರಿಸರ ಭವನಕ್ಕೆ ಸ್ಥಳಾಂತರ

Spread the love

ಧಾರವಾಡ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಅಕ್ಟೋಬರ್ 27 ರಂದು ಆಯೋಜಿಸಲಾಗಿದ್ದ ಸ್ಪರ್ಧೆಗಳ ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಜಿಲ್ಲಾ ಪರಿಸರ ಅಧಿಕಾರಿ ಜಗದೀಶ ಐ.ಎಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಮಂಡಳಿಯ ಸುವರ್ಣ ಮಹೋತ್ಸವದ ಭಾಗವಾಗಿ ಅಕ್ಟೋಬರ್ 27 ರಂದು ಬೆಳಿಗ್ಗೆ 10:30 ಗಂಟೆಗೆ ಮಹಿಳೆಯರಿಗಾಗಿ ‘ಪರಿಸರ ಸಮೂಹ ಗೀತೆ’ ಸ್ಪರ್ಧೆ ಮತ್ತು ತಾಲೂಕು ಮಟ್ಟದಲ್ಲಿ ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಮೊದಲು ಈ ಕಾರ್ಯಕ್ರಮವನ್ನು ಜೆ.ಎಸ್.ಎಸ್. ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಆದರೆ, ಈಗ ಈ ಕಾರ್ಯಕ್ರಮದ ಸ್ಥಳವನ್ನು ಬದಲಿಸಿ ಧಾರವಾಡದ ಶ್ರೀನಗರ ಪರಿಸರ ಭವನಕ್ಕೆ ಸ್ಥಳಾಂತರಿಸಲಾಗಿದೆ.

​ಈಗಾಗಲೇ ಹೆಸರು ನೋಂದಾಯಿಸಿದ ಸ್ಪರ್ಧಿಗಳು ಮತ್ತು ವಿಜೇತರು ನಿಗದಿತ ದಿನಾಂಕ ಮತ್ತು ಸಮಯಕ್ಕೆ (ಅಕ್ಟೋಬರ್ 27 ರಂದು ಬೆಳಿಗ್ಗೆ 10:30 ಗಂಟೆಗೆ) ಶ್ರೀನಗರದ ಪರಿಸರ ಭವನಕ್ಕೆ ಹಾಜರಾಗಬೇಕೆಂದು ಮನವಿ ಮಾಡಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ನೆಹರು ನಗರ ಅಥವಾ ಶ್ರೀನಗರ ಬಸ್ ಮಾರ್ಗವಾಗಿ ಪರಿಸರ ಭವನಕ್ಕೆ ಬರಬಹುದು. ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಅಧ್ಯಕ್ಷ ಶಂಕರ ಕುಂಬಿ ಅವರನ್ನು ಮೊಬೈಲ್ ಸಂಖ್ಯೆ 9448801141 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಸರ ಅಧಿಕಾರಿ ಜಗದೀಶ ಐ.ಎಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *