ಕಳಸ ಗ್ರಾಮದ ಅಂಬಿಗರ ಚೌಡಯ್ಯ ಭವನ ಪೂರ್ಣಕ್ಕೆ ಷಣ್ಮುಖಪ್ಪ ಶಿವಳ್ಳಿಗೆ ಮನವಿ: 50 ಮೂಟೆ ಸಿಮೆಂಟ್ ನೆರವು ಭರವಸೆ
Recent Views 12 ಕುಂದಗೋಳ: ಕುಂದಗೋಳ ವಿಧಾನಸಭಾ ಕ್ಷೇತ್ರದ ಕಳಸ ಗ್ರಾಮದಲ್ಲಿ ಅಪೂರ್ಣಗೊಂಡಿರುವ ಶ್ರೀ ಅಂಬಿಗರ ಚೌಡಯ್ಯ ಸಮುದಾಯ ಭವನ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಶ್ರೀ ಅಂಬಿಗರ ಚೌಡಯ್ಯ ಯುವಕ ಮಂಡಳಿ ಮಿತ್ರರು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಷಣ್ಮುಖಪ್ಪ ಎಸ್. ಶಿವಳ್ಳಿ ಅವರಿಗೆ ಮನವಿ ಸಲ್ಲಿಸಿದರು. ಕಳಸ ಗ್ರಾಮದಲ್ಲಿ ಷಣ್ಮುಖಪ್ಪ ಶಿವಳ್ಳಿ ಅವರನ್ನು ಭೇಟಿ ಮಾಡಿದ ಯುವಕ ಮಂಡಳಿಯ ಸದಸ್ಯರು, ಸಮುದಾಯ ಭವನದ ಕಾಮಗಾರಿಯು ಹಲವು ಕಾರಣಗಳಿಂದ ಅಪೂರ್ಣಗೊಂಡಿದ್ದು, ಇದರಿಂದ ಸಮುದಾಯದ ಕಾರ್ಯಕ್ರಮಗಳಿಗೆ…

