“ವಾಡಿಕೆ ಮಳೆಯ ಆಸೆನೇ ಬಿಟ್ಟುಬಿಡಿ!”: ದೇಶಾದ್ಯಂತ ಶೇ.42ರಷ್ಟು ಮುಂಗಾರು ಕೊರತೆ, ಹವಾಮಾನ ಇಲಾಖೆಯ ಎಚ್ಚರಿಕೆ

ನವದೆಹಲಿ, ಜೂ.19: ದೇಶಕ್ಕೆ ಮುಂಗಾರು ಪ್ರವೇಶಿಸಿ ಎರಡು ವಾರಗಳು ಕಳೆದಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ದೇಶಾದ್ಯಂತ ಮಳೆ ಕೊರತೆ ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮಾಹಿತಿಯ ಪ್ರಕಾರ, ಜೂನ್ 18ರವರೆಗೆ ದೇಶದಲ್ಲಿ ವಾಡಿಕೆಯಂತೆ 72.2 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 42.1 ಮಿ.ಮೀ. ಮಳೆಯಷ್ಟೇ ದಾಖಲಾಗಿದ್ದು, ಒಟ್ಟಾರೆ ಮುಂಗಾರು ಕೊರತೆ ಶೇ.42ಕ್ಕೆ ತಲುಪಿದೆ. ಜೂನ್ 4ರಂದು ದೇಶಕ್ಕೆ ಮುಂಗಾರು ಪ್ರವೇಶಿಸಿದ್ದರೂ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಅಗತ್ಯ ಪ್ರಮಾಣದ ವಾಯುಭಾರ ಕುಸಿತ…

Read More

ದುಂದುವೆಚ್ಚದ ಮದುವೆಗಳ ನಡುವೆ ಆಶಾಕಿರಣ: 3,465 ಗ್ರಾಮಸ್ಥರಿಗೆ ₹33.6 ಕೋಟಿ ಮೊತ್ತದ ವಿಮಾ ಕವಚ ನೀಡಿದ ವರ*

ನಾಂದೇಡ್ (ಮಹಾರಾಷ್ಟ್ರ): ಇತ್ತೀಚಿನ ದಿನಗಳಲ್ಲಿ ಮದುವೆ ಎಂದರೆ ಲಕ್ಷಾಂತರ ರೂಪಾಯಿ ಖರ್ಚು, ಅದ್ಧೂರಿ ವೇದಿಕೆ, ವೈಭವದ ಅಲಂಕಾರ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುವ ಕಾರ್ಯಕ್ರಮ ಎಂಬಂತಾಗಿದೆ. ಅನೇಕರು ತಮ್ಮ ಸಾಮರ್ಥ್ಯ ಮೀರಿಯೂ ಸಾಲ ಮಾಡಿ ಮದುವೆಗಳನ್ನು ವಿಜೃಂಭಣೆಯಿಂದ ನಡೆಸುವ ಪ್ರವೃತ್ತಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಯುವಕನೊಬ್ಬ ತನ್ನ ವಿವಾಹವನ್ನು ಸಮಾಜಮುಖಿ ಕಾರ್ಯದೊಂದಿಗೆ ಜೋಡಿಸಿ ಎಲ್ಲರ ಗಮನ ಸೆಳೆದಿದ್ದಾನೆ. ನಾಂದೇಡ್ ಜಿಲ್ಲೆಯ ಬಹಾದ್ದೂರ್‌ಪುರ ಗ್ರಾಮದ ಸಿದ್ಧೇಶ್ವರ್ ಪೇಠ್ಕರ್ ಅವರು ತಮ್ಮ ಮದುವೆಯ ಸಂಭ್ರಮವನ್ನು…

Read More

ತಲೆ ಬೋಳಿಸಿಕೊಂಡ ಕೂಲಿ ಕಾರ್ಮಿಕನನ್ನು ಗುರುತಿಸದ ಡಿಜಿಟಲ್ ಹಾಜರಾತಿ ಆ್ಯಪ್; ಮಹಿಳೆಯ ಕೂದಲಿನಿಂದ ಸಿಕ್ಕ ಪರಿಹಾರ!

ಹೈದರಾಬಾದ್, ಮೇ 30: ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಕೆಲವೊಮ್ಮೆ ಅದರಲ್ಲಿನ ಲೋಪದೋಷಗಳು ಜನರನ್ನು ಸಂಕಷ್ಟಕ್ಕೆ ಸಿಲುಕಿಸುವುದರ ಜೊತೆಗೆ ಹಾಸ್ಯಾಸ್ಪದ ಘಟನೆಗಳಿಗೂ ಕಾರಣವಾಗುತ್ತವೆ. ಇಂತಹ ವಿಚಿತ್ರ ಪ್ರಸಂಗವೊಂದು ತೆಲಂಗಾಣದಲ್ಲಿ ನಡೆದಿದ್ದು, ದೇವಸ್ಥಾನದಲ್ಲಿ ಹರಕೆ ಸಲ್ಲಿಸಿ ತಲೆ ಬೋಳಿಸಿಕೊಂಡು ಬಂದ ಕೂಲಿ ಕಾರ್ಮಿಕನನ್ನು ಸರ್ಕಾರದ ಡಿಜಿಟಲ್ ಹಾಜರಾತಿ ಆ್ಯಪ್ ಗುರುತಿಸಲು ನಿರಾಕರಿಸಿದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಇನುಗುರ್ತಿ ಮಂಡಲದ ಕೋಮಟಿಪಲ್ಲಿ ಗ್ರಾಮದ ದಿನಗೂಲಿ ಕಾರ್ಮಿಕ ಮಳ್ಳಾಲ ಶ್ರೀನಿವಾಸ್ ಇತ್ತೀಚೆಗೆ ಕೊಂಡಗಟ್ಟು…

Read More

ಡಿ.ಕೆ. ಶಿವಕುಮಾರ್‌ಗೆ ಸಿಎಂ ಪಟ್ಟ? ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಚರ್ಚೆ

ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದೊಂದು ವರ್ಷದಿಂದ ಚರ್ಚೆಗೆ ಗ್ರಾಸವಾಗಿದ್ದ ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಚಾರಕ್ಕೆ ಅಂತಿಮ ರೂಪ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡುವ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಸರ್ವಾನುಮತದ ಬೆಂಬಲ ವ್ಯಕ್ತಪಡಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನ ನೀಡುವ ಜೊತೆಗೆ ದೆಹಲಿಯಲ್ಲಿ ಪ್ರಮುಖ ರಾಷ್ಟ್ರೀಯ ಜವಾಬ್ದಾರಿ ವಹಿಸುವಂತೆ ಪಕ್ಷದ ನಾಯಕತ್ವ ಮನವಿ ಮಾಡಿದೆ ಎನ್ನಲಾಗಿದೆ. ಈ ಕುರಿತು ಅಂತಿಮ…

Read More

ಒಬಾಮಾ ದಂಪತಿ ಭೇಟಿ ಹಿನ್ನೆಲೆ: ಮಂಡ್ಯದಲ್ಲಿ ₹711.4 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಸರ್ಕಾರ ಸಜ್ಜು

ಮಂಡ್ಯ: ಜಾಗತಿಕ ಮಟ್ಟದ ಗಣ್ಯರ ಭೇಟಿ ಸ್ಥಳೀಯ ಮೂಲಸೌಕರ್ಯ ಅಭಿವೃದ್ಧಿಗೆ ಹೇಗೆ ವೇಗ ನೀಡಬಲ್ಲದು ಎಂಬುದಕ್ಕೆ ಮಂಡ್ಯ ಜಿಲ್ಲೆಯ ಬೆಳವಣಿಗೆಯೊಂದು ಗಮನ ಸೆಳೆಯುತ್ತಿದೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಅವರ ಪತ್ನಿ, ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಅವರ ನಿರೀಕ್ಷಿತ ಭೇಟಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಹೊರವಲಯದ ಹಲ್ಲೆಗೆರೆ ಗ್ರಾಮದ ಸಂಪರ್ಕ ರಸ್ತೆಯನ್ನು ₹711.4 ಕೋಟಿ ವೆಚ್ಚದಲ್ಲಿ ಆಧುನೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಂಡ್ಯ ಜಿಲ್ಲೆಯ ಹಲ್ಲೆಗೆರೆ ಗ್ರಾಮದ ಸಮೀಪ ನಿರ್ಮಾಣವಾಗುತ್ತಿರುವ ಅಂತಾರಾಷ್ಟ್ರೀಯ…

Read More

ತಮಿಳುನಾಡಿನಲ್ಲಿ ಹೊಸ ಯುಗಾರಂಭ: ನಾಳೆ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪದಗ್ರಹಣ

ಚೆನ್ನೈ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ನಡೆದಿದ್ದ ದ್ರಾವಿಡ ಪಕ್ಷಗಳ ಏಕಸ್ವಾಮ್ಯಕ್ಕೆ ತೆರೆ ಬಿದ್ದಿದ್ದು, ನಾಳೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ವಿಜಯ್ ನೇತೃತ್ವದ ಟಿವಿಕೆ, ನಾಳೆ ರಾಜ್ಯಪಾಲರ ಮುಂದೆ ತನ್ನ ಸಂಖ್ಯಾಬಲವನ್ನು ಅಧಿಕೃತವಾಗಿ ಸಾಬೀತುಪಡಿಸಿ ಸರ್ಕಾರ ರಚನೆ ಮಾಡಲಿದೆ.​ವಿಜ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ…

Read More

ದೆಹಲಿಯಲ್ಲಿ ಯುವ ನ್ಯಾಯಾಧೀಶರ ನಿಗೂಢ ಸಾವು: ಕಾನೂನು ವಲಯದಲ್ಲಿ ತಲ್ಲಣ

ನವದೆಹಲಿ: ದೇಶದ ರಾಜಧಾನಿಯಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ 30 ವರ್ಷದ ಯುವ ನ್ಯಾಯಾಧೀಶ ಅಮನ್ ಕುಮಾರ್ ಶರ್ಮಾ ಅವರು ಶನಿವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದಾರೆ. ​ಸಫ್ದರ್ಜಂಗ್ ಎನ್ಕ್ಲೇವ್ ವ್ಯಾಪ್ತಿಯ ಗ್ರೀನ್ ಪಾರ್ಕ್ ಪ್ರದೇಶದಲ್ಲಿರುವ ತಮ್ಮ ನಿವಾಸದ ಸ್ನಾನಗೃಹದಲ್ಲಿ ಶರ್ಮಾ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ಕಾನೂನು ಲೋಕವೇ ಈ ಸುದ್ದಿಯಿಂದ ಬೆಚ್ಚಿಬಿದ್ದಿದೆ. ಶನಿವಾರ ಮಧ್ಯಾಹ್ನ ಸುಮಾರು…

Read More

ಆರ್‌ಎಸ್‌ಎಸ್-ಬಿಜೆಪಿ ವಿಷಕಾರಿ ಹಾವುಗಳಿಗೆ ಹೋಲಿಕೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ದೂರು ದಾಖಲು

ಗುವಾಹಟಿ: ಚುನಾವಣಾ ರಾಲಿಯೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿಯ ಸಿದ್ಧಾಂತವನ್ನು ‘ವಿಷಕಾರಿ ಹಾವು’ಗಳಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸ್ಸಾಂನ ಎರಡು ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ. ​ದಕ್ಷಿಣ ಅಸ್ಸಾಂನ ಶ್ರೀಭೂಮಿ ಜಿಲ್ಲೆಯ ಕರೀಂಗಂಜ್ ದಕ್ಷಿಣ ವಿಧಾನಸಭಾ ಕ್ಷೇತ್ರದ ನೀಲಂಬಜಾರ್‌ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಸಭೆಯಲ್ಲಿ ಮಾತನಾಡುತ್ತಿದ್ದ ಖರ್ಗೆ ಅವರು, ನಮಾಜ್ ಮಾಡುವಾಗ ಮುಂದೆ ವಿಷಕಾರಿ ಹಾವು ಬಂದರೆ ಪ್ರಾರ್ಥನೆ ನಿಲ್ಲಿಸಿ ಮೊದಲು ಹಾವನ್ನು ಕೊಲ್ಲಬೇಕು…

Read More

ಖಾಕಿಯೊಳಗಿನ ಕ್ರೌರ್ಯಕ್ಕೆ ಸಿಂಹಸ್ವಪ್ನವಾದ ‘ನ್ಯಾಯದೇವತೆ’: ಸಹೋದ್ಯೋಗಿಗಳಿಗೇ ಗಲ್ಲು ಶಿಕ್ಷೆ ಕೊಡಿಸಿದ ರೇವತಿ ಎಂಬ ಧೀಶಕ್ತಿ!

ಚೆನ್ನೈ: ತನ್ನವರೇ ಆದ ಒಂಬತ್ತು ಮಂದಿ ಪೊಲೀಸರ ಅಮಾನವೀಯ ಪೈಶಾಚಿಕ ಕೃತ್ಯಕ್ಕೆ ಅಂಜದೆ, ಜೀವದ ಹಂಗು ತೊರೆದು ಸತ್ಯದ ಪರವಾಗಿ ನಿಂತ ಮಹಿಳಾ ಕಾನ್ಸ್‌ಟೇಬಲ್ ರೇವತಿ ಅವರ ದಿಟ್ಟತನ ಇಂದು ದೇಶದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆಯುವಂತಹದ್ದಾಗಿದೆ. ತಮಿಳುನಾಡಿನ ಸಾತಂಕುಲಂನಲ್ಲಿ ನಡೆದ ತಂದೆ-ಮಗನ ಭೀಕರ ಲಾಕಪ್ ಡೆತ್ ಪ್ರಕರಣದಲ್ಲಿ ಮೃಗೀಯವಾಗಿ ವರ್ತಿಸಿದ ಖಾಕಿಧಾರಿಗಳಿಗೆ ಮರಣದಂಡನೆ ಶಿಕ್ಷೆ ಘೋಷಣೆಯಾಗುವಲ್ಲಿ ಈ ‘ಅಚಲ ಧೀಶಕ್ತಿ’ ನೀಡಿದ ಸಾಕ್ಷ್ಯವೇ ಬ್ರಹ್ಮಾಸ್ತ್ರವಾಗಿದೆ. ಏನಿದು ಭೀಕರ ಪ್ರಕರಣ?:2020ರ ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ಅಲ್ಪ ಸಮಯ ಅಂಗಡಿ…

Read More

ನಗದು ವ್ಯವಹಾರದ ಮೇಲೆ ಐಟಿ ‘ಸರ್ಜರಿ’: ಇಂದಿನಿಂದಲೇ ಹೊಸ ನಿಯಮ ಜಾರಿ, ನಿಯಮ ಮೀರಿದರೆ 100% ದಂಡ!

ಬೆಂಗಳೂರು: ದೇಶದ 64 ವರ್ಷಗಳ ಹಳೆಯ ಆದಾಯ ತೆರಿಗೆ ಕಾನೂನಿಗೆ ಕೇಂದ್ರ ಸರ್ಕಾರ ಭಾರಿ ತಿದ್ದುಪಡಿ ತಂದಿದ್ದು, ಏಪ್ರಿಲ್ 1ರಿಂದಲೇ ಅನ್ವಯವಾಗುವಂತೆ ನಗದು ವ್ಯವಹಾರಗಳ ಮೇಲೆ ಕಠಿಣ ನಿರ್ಬಂಧಗಳನ್ನು ಹೇರಲಾಗಿದೆ. ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಜಾರಿಗೆ ಬಂದಿರುವ ಈ ನಿಯಮಗಳು ಸಾಮಾನ್ಯ ಜನರಿಂದ ಹಿಡಿದು ಉದ್ಯಮಿಗಳವರೆಗೆ ಪ್ರತಿಯೊಬ್ಬರಿಗೂ ಅನ್ವಯವಾಗಲಿವೆ. ​ಪ್ರಮುಖ ನಿರ್ಬಂಧಗಳು ಮತ್ತು ದಂಡದ ವಿವರ: ​ 2 ಲಕ್ಷ ರೂ. ಮೀರಿದ ವ್ಯವಹಾರಕ್ಕೆ 100% ದಂಡ: ಯಾವುದೇ ವ್ಯಕ್ತಿಯಿಂದ ಒಂದು ದಿನದಲ್ಲಿ 2 ಲಕ್ಷ…

Read More