ಯಲ್ಲಾಪುರ ರಂಜಿತಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅರಣ್ಯದಲ್ಲಿ ಆರೋಪಿ ರಫೀಕ್ ಶವ ಪತ್ತೆ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಸಂಭವಿಸಿದ ವಿಚ್ಛೇದಿತ ಮಹಿಳೆ ರಂಜಿತಾ ಬನಸವಾಡೆ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿ ರಫೀಕ್ (30) ಪಟ್ಟಣದ ಸಮೀಪದ ಕಾಳಮ್ಮನಗರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಂಜಿತಾ ಅವರನ್ನು ಕೊಲೆ ಮಾಡಿ ಅಡಗಿದ್ದ ಆರೋಪಿಗಾಗಿ ರವಿವಾರದಂದು ಶ್ವಾನದಳದೊಂದಿಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ನೇಹದ ಹೆಸರಲ್ಲಿ ನಡೆದ ಘಾತುಕ ಕೃತ್ಯ:ಕಳೆದ ಹತ್ತು…

