ಬಡ್ಡಿ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ: ಸಾಲದ ಸುಳಿಗೆ ಸಿಲುಕಿ ದಾರುಣ ಅಂತ್ಯ ಕಾಣಿಸಿಕೊಂಡ ಆಟೋ ಚಾಲಕನ ಸಂಸಾರ
ಕೋಲಾರ: ಸಾಲದ ಹೊರೆ ಹಾಗೂ ಬಡ್ಡಿದಾರರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಒಂದೇ ತಿಂಗಳ ಅವಧಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮನೆ ಕಟ್ಟುವ ಕನಸಿನಿಂದ ಸಾಲ ಮಾಡಿಕೊಂಡಿದ್ದ ಕುಟುಂಬ ಕೊನೆಗೆ ಸಾಲದ ಸುಳಿಗೆ ಸಿಲುಕಿ ದಾರುಣ ಅಂತ್ಯ ಕಂಡಿರುವುದು ಜಿಲ್ಲೆಯಾದ್ಯಂತ ಮರುಕ ಮೂಡಿಸಿದೆ. ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಆಟೋ ಚಾಲಕ ಸುರೇಶ್ ಹಾಗೂ ಅವರ ಪತ್ನಿ ಪ್ರಮೀಳಾ ದಂಪತಿಗೆ ಇಬ್ಬರು ಮಕ್ಕಳಿದ್ದರು. ಕಷ್ಟಪಟ್ಟು ದುಡಿದು ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುತ್ತಾ…

