ಬೆಂಬಿಡದೆ ಕಾಡುತ್ತಿರುವ ಮಳೆರಾಯ; ಗದಗ ರೈತರು ಸಂಕಷ್ಟದಲ್ಲಿ: ಮೆಕ್ಕೆಜೋಳಕ್ಕೆ ಬೆಲೆ ಕುಸಿತದಿಂದ ಬೆಳೆಗಾರರು ಕಂಗಾಲು
ಗದಗ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಮೆಕ್ಕೆಜೋಳ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರಂತರ ತೇವಾಂಶದಿಂದಾಗಿ ಕಾಳುಗಳ ಗುಣಮಟ್ಟ ಕುಸಿದಿದ್ದು, ಕೈಗೆ ಬಂದ ಅಲ್ಪಸ್ವಲ್ಪ ಫಸಲಿಗೂ ಮಾರುಕಟ್ಟೆಯಲ್ಲಿ ನಿರೀಕ್ಷಿತ ದರ ಸಿಗದೆ ರೈತರು ಆತಂಕಗೊಂಡಿದ್ದಾರೆ. ಅತಿಹೆಚ್ಚಿನ ಆದಾಯದ ನಿರೀಕ್ಷೆಯಲ್ಲಿದ್ದ ರೈತರಿಗೆ ವೈಜ್ಞಾನಿಕ ಬೆಲೆ ಸಿಗದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಉತ್ಪಾದನಾ ವೆಚ್ಚ ಹೆಚ್ಚಳ, ದರದಲ್ಲಿ ಭಾರಿ ಕುಸಿತ ಕಳೆದ ತಿಂಗಳಷ್ಟೇ ಮಾರುಕಟ್ಟೆಯಲ್ಲಿ ಕ್ವಿಂಟಲ್ ಮೆಕ್ಕೆಜೋಳದ ಬೆಲೆ…

