ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಜೃಂಭಣೆಯಿಂದ ವಿಶ್ವ ಪರಿಸರ ದಿನಾಚರಣೆ
ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಮಾನವ ಸರಪಳಿ ಹನೂರು, ಜೂನ್ 5: ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಪ್ರಕೃತಿಯ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಹನೂರಿನ ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹನೂರು ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಹೇಬ್ ಗೌಡ ಅವರು ಮಾತನಾಡಿ, ಪರಿಸರವು ಮಾನವಕುಲಕ್ಕೆ ದೊರೆತಿರುವ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ…

