ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಜೃಂಭಣೆಯಿಂದ ವಿಶ್ವ ಪರಿಸರ ದಿನಾಚರಣೆ

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಮಾನವ ಸರಪಳಿ ಹನೂರು, ಜೂನ್ 5: ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಪ್ರಕೃತಿಯ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಹನೂರಿನ ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹನೂರು ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಹೇಬ್ ಗೌಡ ಅವರು ಮಾತನಾಡಿ, ಪರಿಸರವು ಮಾನವಕುಲಕ್ಕೆ ದೊರೆತಿರುವ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ…

Read More

​ಮಳವಳ್ಳಿ: ನ್ಯೂ ರೇಬೋ ಕಿಡ್ಸ್ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ; ಪುಟಾಣಿಗಳಿಂದ ಜಾಗೃತಿ ಮೆರವಣಿಗೆ

ಮಳವಳ್ಳಿ: ಪಟ್ಟಣದ ನ್ಯೂ ರೇಬೋ ಕಿಡ್ಸ್ ಸಂಸ್ಥೆಯ ವತಿಯಿಂದ ಪುಟಾಣಿ ಮಕ್ಕಳೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ವಿದ್ಯಾ ಅವರು ಗಿಡಗಳಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ವಿದ್ಯಾ ಅವರು, ಪ್ರಸ್ತುತ ದಿನಗಳಲ್ಲಿ ಪ್ಲಾಸ್ಟಿಕ್ ಅತಿಯಾದ ಬಳಕೆಯಿಂದಾಗಿ ಪರಿಸರ ಸಂಪೂರ್ಣವಾಗಿ ಹಾಳಾಗುತ್ತಿದೆ. ಹೀಗಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಬೇಕಾಗಿದೆ. ಕೇವಲ ಭಾಷಣಕ್ಕೆ ಸೀಮಿತವಾಗದೆ, ಎಲ್ಲಾ ಖಾಲಿ ಜಾಗಗಳಲ್ಲೂ ಗಿಡಗಳನ್ನು ನೆಟ್ಟು, ಅವುಗಳಿಗೆ ನಿಯಮಿತವಾಗಿ ನೀರು…

Read More

​ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಆಡಳಿತಾಧಿಕಾರಿ ಧನುಷ್ ಸೂಚನೆ

ಮಳವಳ್ಳಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಧನುಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಬೋರ್‌ವೆಲ್‌ಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಜನರಿಗೆ ಕುಡಿಯುವ ನೀರಿನ ಕೊರತೆ…

Read More

ರಿಯಲ್ ಎಸ್ಟೇಟ್ ದಂಧೆಗೆ ರಾಜ್ಯ ಸರ್ಕಾರ ಮುಂದಾಗಿದೆ: ಭರತ್ ರಾಜ್ ಆರೋಪ

ಮಳವಳ್ಳಿ: ಬಿಡದಿ ಸಮೀಪದ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ರಾಜ್ಯ ಸರ್ಕಾರ ರಿಯಲ್ ಎಸ್ಟೇಟ್ ದಂಧೆಗೆ ಮುಂದಾಗಿದೆ ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಭರತ್ ರಾಜ್ ಆರೋಪಿಸಿದರು. ಪಟ್ಟಣದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಪಕ್ಕದ ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಪ್ರದೇಶಗಳಲ್ಲಿರುವ ಸಾವಿರಾರು ಎಕರೆ ಕೃಷಿಯೋಗ್ಯ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದನ್ನು ಪ್ರಾಂತ ರೈತ ಸಂಘ ಖಂಡಿಸುತ್ತದೆ ಎಂದರು. ದೆಹಲಿಯಲ್ಲಿ ರೈತರು ನಡೆಸಿದ ದೀರ್ಘಕಾಲದ ಹೋರಾಟದ ಮಾದರಿಯಲ್ಲೇ ಆ ಭಾಗದ…

Read More

ಚಾಮರಾಜನಗರ:ನರಬಲಿ ಪಡೆದ ಚಿರತೆ ಸೆರೆ: ಅರಣ್ಯ ಇಲಾಖೆಯ 15 ದಿನಗಳ ಕಾರ್ಯಾಚರಣೆ ಯಶಸ್ವಿ

ಚಾಮರಾಜನಗರ: ಜಿಲ್ಲೆಯ ನಾಗಮಲೆ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆಗೆ ತೆರಳಿದ್ದ ಬಾಲಕನನ್ನು ಬಲಿ ಪಡೆದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಸೆರೆ ಹಿಡಿದಿದ್ದಾರೆ. ಕಳೆದ 15 ದಿನಗಳಿಂದ ನಿರಂತರವಾಗಿ ನಡೆದ ಬೃಹತ್ ಕಾರ್ಯಾಚರಣೆಯ ಫಲವಾಗಿ ಹನೂರು ತಾಲೂಕಿನ ಇಂಡಿಗನತ್ತ ಹಾಡಿ ಸಮೀಪ ಇರಿಸಲಾಗಿದ್ದ ಬೋನಿನಲ್ಲಿ ಹೆಣ್ಣು ಚಿರತೆ ಸೆರೆಯಾಗಿದೆ. ಇದರಿಂದ ಕಾಡಂಚಿನ ಗ್ರಾಮಸ್ಥರು ಹಾಗೂ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರು ನಿಟ್ಟುಸಿರು ಬಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬೆಂಗಳೂರು ಮೂಲದ ಹರ್ಷಿತ್ ಎಂಬ ಬಾಲಕ ತನ್ನ…

Read More

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬೆಂಗಳೂರಿನ ಬಾಲಕ ಬಲಿ

ಹನೂರು: ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುವ ಕಾಲುನಡಿಗೆ ಮಾರ್ಗದಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಬೆಂಗಳೂರು ಮೂಲದ 10 ವರ್ಷದ ಬಾಲಕ ಹರ್ಷಿತ್ ಎಂಬಾತ ದುರ್ಮರಣಕ್ಕೀಡಾಗಿದ್ದಾನೆ. ದೇವರ ದರ್ಶನದ ಹಂಬಲ ಹೊತ್ತು ಬಂದಿದ್ದ ಪುಟ್ಟ ಬಾಲಕ ಪ್ರಾಣ ಕಳೆದುಕೊಂಡ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಭಕ್ತರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ​ಬೆಂಗಳೂರಿನಿಂದ ಕುಟುಂಬದವರೊಂದಿಗೆ ಬೆಟ್ಟಕ್ಕೆ ಬಂದಿದ್ದ ಹರ್ಷಿತ್, ನಾಗಮಲೆಯತ್ತ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಹಠಾತ್ತಾಗಿ ದಾಳಿ ಮಾಡಿದ ಚಿರತೆಯು…

Read More

​ಗುಂಡ್ಲುಪೇಟೆ ಬಳಿ ಕಾರು-ಲಾರಿ ಮುಖಾಮುಖಿ ಡಿಕ್ಕಿ: ಗರ್ಭಿಣಿ ಹಾಗೂ ಚಾಲಕ ದುರ್ಮರಣ

​ಚಾಮರಾಜನಗರ: ಜಿಲ್ಲೆಯ ಜನತೆ ಮಳೆ ಮತ್ತು ಬೆಳೆಯ ಲೆಕ್ಕಾಚಾರದಲ್ಲಿ ತೊಡಗಿರುವಾಗಲೇ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಗುಂಡ್ಲುಪೇಟೆ-ಕೇರಳ ರಾಷ್ಟ್ರೀಯ ಹೆದ್ದಾರಿಯ ಮದ್ದಯ್ಯನಹುಂಡಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗರ್ಭಿಣಿ ಮಹಿಳೆ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ​ಕೇರಳದಿಂದ ಚಾಮರಾಜನಗರದ ಕಡೆಗೆ ಬರುತ್ತಿದ್ದ ಕಾರಿಗೆ, ಕೇರಳದತ್ತ ತೆರಳುತ್ತಿದ್ದ ಲಾರಿ ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ…

Read More

ಮಲೆ ಮಾದೇಶ್ವರ ಬೆಟ್ಟದ ಹಾದಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ – ಆಂಬ್ಯುಲೆನ್ಸ್ ಸಿಗದೆ ನರಳಾಡಿದ ಗಾಯಾಳುಗಳು, ವ್ಯವಸ್ಥೆಯ ವಿರುದ್ಧ ಆಕ್ರೋಶ

ಹನೂರು: ಕೊಳ್ಳೇಗಾಲದಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಭಕ್ತಾದಿಗಳನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಟ್ಟದ ಹಾದಿಯ ತಾಳುಬೆಟ್ಟದ ಮೂರನೇ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಭೀಕರವಾಗಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯ ನಂತರದ ಪರಿಸ್ಥಿತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಬೇಜವಾಬ್ದಾರಿಯನ್ನು ಎತ್ತಿ ತೋರಿಸುವಂತಿತ್ತು. ​ಅಪಘಾತ ಸಂಭವಿಸಿದ ತಕ್ಷಣ ಸಹಾಯಕ್ಕಾಗಿ ಕಿರುಚಾಡಿದ ಪ್ರಯಾಣಿಕರಿಗೆ…

Read More

ಮೇಕೆದಾಟು ಬಳಿ ಪ್ರವಾಸಿಗರ ಮೇಲೆ ಕಾಡಾನೆ ದಾಳಿ: ನದಿಯಲ್ಲಿ ಜಲಕ್ರೀಡೆ ಆಡುತ್ತಿದ್ದಾಗ ಎದುರಾದ ಗಜಾತಂಕ!

ಹನೂರು: ಪ್ರಕೃತಿಯ ಸೌಂದರ್ಯ ಸವಿಯಲು ಬಂದಿದ್ದ ಪ್ರವಾಸಿಗರಿಗೆ ಕಾಡಾನೆಯೊಂದು ಸಿಂಹಸ್ವಪ್ನವಾದ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ಸಂಭವಿಸಿದೆ. ಕಾವೇರಿ ನದಿಯ ದಡದಲ್ಲಿ ಪ್ರವಾಸಿಗರು ಆಟವಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕಾಡಾನೆಯೊಂದು ದಾಳಿ ನಡೆಸಿದ್ದು, ಪ್ರಾಣಾಪಾಯದಿಂದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ​ಸಂಗಮಕ್ಕೆ ಆಗಮಿಸಿದ್ದ ಪ್ರವಾಸಿಗರ ತಂಡವೊಂದು ಮೇಕೆದಾಟು ಬಳಿಯ ನದಿಯಲ್ಲಿ ಜಲಕ್ರೀಡೆ ಆಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿತ್ತು. ಇದೇ ಸಮಯದಲ್ಲಿ ನೀರು ಕುಡಿಯಲು ಬಂದಿದ್ದ ಕಾಡಾನೆಯು ಪ್ರವಾಸಿಗರ ಗದ್ದಲಕ್ಕೆ ಕೆರಳಿ ಏಕಾಏಕಿ ಅವರ ಮೇಲೆ ಎರಗಿದೆ….

Read More

ಕೆರೆ ನೀರಿಗೆ ಯೂರಿಯಾ ಮಿಶ್ರಣ: ಏಳು ಕುರಿಗಳ ದಾರುಣ ಸಾವು, ಕುರಿಗಾಯಿಯ ಕಣ್ಣೀರು

ಹನೂರು: ಕುರಿ ಮೇಯಿಸಿ ಜೀವನ ಸಾಗಿಸುತ್ತಿದ್ದ ಬಡ ರೈತನೊಬ್ಬನ ಹೊಟ್ಟೆಯ ಮೇಲೆ ಕಿಡಿಗೇಡಿಗಳು ಹೊಡೆದಿದ್ದಾರೆ. ಕುರಿಗಳು ಕುಡಿಯುವ ನೀರಿಗೆ ಅಪರಿಚಿತರು ಯೂರಿಯಾ ಮಿಶ್ರಣ ಮಾಡಿದ ಪರಿಣಾಮ, ನೀರು ಕುಡಿದ ಏಳು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹನೂರು ತಾಲ್ಲೂಕಿನ ಡಿ. ವಿಲೇಜ್‌ನ ಬೂದಿಕೆರೆ ಬಳಿ ಸಂಭವಿಸಿದೆ. 75 ಅರಬಗೆರೆ ಗ್ರಾಮದ ನಿವಾಸಿ ಮುತ್ತೇಗೌಡ ಬಿನ್ ಕರಗೆಗೌಡ ಎಂಬುವವರಿಗೆ ಸೇರಿದ ಕುರಿಗಳು ಈ ಮಾರಣಹೋಮಕ್ಕೆ ಬಲಿಯಾಗಿವೆ. ​ಮುತ್ತೇಗೌಡ ಅವರು ಪ್ರತಿದಿನದಂತೆ ಸೋಮವಾರ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕುರಿ…

Read More