ಏಪ್ರಿಲ್ 30ರಂದು ಬಿಳಿಗಿರಿರಂಗನಬೆಟ್ಟದಲ್ಲಿ ಅದ್ದೂರಿ ಬ್ರಹ್ಮ ರಥೋತ್ಸವ: ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಚಾಮರಾಜನಗರ: ಜಿಲ್ಲೆಯ ಸುಪ್ರಸಿದ್ಧ ಯಾತ್ರಾಕ್ಷೇತ್ರ ಬಿಳಿಗಿರಿರಂಗನಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವವು ಏಪ್ರಿಲ್ 30ರಂದು ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವ ಸಾವಿರಾರು ಭಕ್ತಾದಿಗಳಿಗೆ ಯಾವುದೇ ಲೋಪವಾಗದಂತೆ ಕುಡಿಯುವ ನೀರು, ಸಾರಿಗೆ ಹಾಗೂ ಭದ್ರತೆ ಸೇರಿದಂತೆ ಸಕಲ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದಲ್ಲಿ ನಡೆದ ರಥೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ರಥೋತ್ಸವದ ಸಂದರ್ಭದಲ್ಲಿ ಭಾರಿ ಸಂಖ್ಯೆಯ…

Read More

ಮಲೆ ಮಹದೇಶ್ವರ ಬೆಟ್ಟದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಚಾಲನೆ: ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ

​ಹನೂರ: ಪವಿತ್ರ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಹಸಿರು ನಾಳೆ-ಎಂ.ಎಂ. ಹಿಲ್ಸ್’ (Green Tomorrow – MM Hills) ಅಭಿಯಾನದ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿ ಶ್ರೀರೂಪ ಅವರು ಘನತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳಿಗೆ ಅಧಿಕೃತವಾಗಿ ಚಾಲನೆ ನೀಡಿದರು. ​ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಈ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನೂತನವಾಗಿ…

Read More

​ಪಿಂಚಣಿ ಸ್ಥಗಿತಕ್ಕೆ ‘ಡಬಲ್ ಪಾವತಿ’ ಕಾರಣ: ಹನೂರು ತಹಸೀಲ್ದಾರ್ ಚೈತ್ರಾ ಸ್ಪಷ್ಟನೆ

ಹನೂರು: ತಾಲ್ಲೂಕಿನ ವಿಶೇಷ ಚೇತನ ಮಹಿಳೆಯೊಬ್ಬರಿಗೆ ಪಿಂಚಣಿ ಆದೇಶ ಪ್ರತಿ ನೀಡದೆ ಕಳೆದ ಎರಡು ವರ್ಷಗಳಿಂದ ಅಲೆದಾಡಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಹನೂರು ತಹಸೀಲ್ದಾರ್ ಚೈತ್ರಾ ಅವರು ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ತಾಂತ್ರಿಕ ಕಾರಣಗಳಿಂದಾಗಿ ಪಿಂಚಣಿ ಸ್ಥಗಿತಗೊಂಡಿದೆಯೇ ಹೊರತು ಉದ್ದೇಶಪೂರ್ವಕ ವಿಳಂಬವಾಗಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಪೊನ್ನಾಚ್ಚಿ ಗ್ರಾಮದ ರಾಚಮ್ಮ (45) ಎಂಬುವವರು 76% ಅಂಗವಿಕಲತೆ ಹೊಂದಿದ್ದು, ಇವರಿಗೆ 2010ರಲ್ಲಿಯೇ ನಿಯಮಾನುಸಾರ ಮಾಸಿಕ 1,400 ರೂಪಾಯಿ ಪಿಂಚಣಿ ಮಂಜೂರಾಗಿತ್ತು. ಆದರೆ, 2022ರಲ್ಲಿ ಇವರು 90% ಅಂಗವಿಕಲತೆ…

Read More

ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರಿಗೆ ಡಾಕ್ಟರೇಟ್ ಪದವಿ ಪ್ರದಾನ

ಹನೂರು: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ವಿದ್ಯಾವಾರಾಧಿ (ಪಿಹೆಚ್.ಡಿ) ಪದವಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮಂಗಳವಾರ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 12 ಮತ್ತು 13ನೇ ಘಟಿಕೋತ್ಸವ ಸಮಾರಂಭದಲ್ಲಿ ಸ್ವಾಮೀಜಿಯವರಿಗೆ ಈ ಉನ್ನತ ಪದವಿಯನ್ನು ಪ್ರದಾನ ಮಾಡಲಾಯಿತು. ​ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಸನ್ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪೂಜ್ಯ ಶ್ರೀಗಳಿಗೆ ಅಧಿಕೃತವಾಗಿ ಪದವಿ ಪ್ರಮಾಣಪತ್ರವನ್ನು ಹಸ್ತಾಂತರಿಸಿ ಗೌರವಿಸಿದರು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ಕರ್ನಾಟಕ…

Read More

ಹನೂರು: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ; ಐವರಿಗೆ ಗಾಯ

ಹನೂರು: ತಾಲೂಕಿನ ಲೊಕ್ಕನಹಳ್ಳಿ–ಆಂಡಿಪಾಳ್ಯ ರಸ್ತೆಯಲ್ಲಿ ಇಂದು ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಅತಿವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಐವರು ಗಾಯಗೊಂಡ ಘಟನೆ ನಡೆದಿದೆ. ​ಒಡೆಯರಪಾಳ್ಯ ಗ್ರಾಮದ ನಿವಾಸಿಯೊಬ್ಬರು ಚಲಾಯಿಸುತ್ತಿದ್ದ ಕೆಎ-01 ಎಂಜೆ 1260 ನೋಂದಣಿ ಸಂಖ್ಯೆಯ ಕಾರು, ಒಡೆಯರಪಾಳ್ಯದಿಂದ ಆಂಡಿಪಾಳ್ಯದ ಕಡೆಗೆ ಅತಿವೇಗವಾಗಿ ಸಾಗುತ್ತಿತ್ತು ಎನ್ನಲಾಗಿದೆ. ರಾತ್ರಿಯ ಕತ್ತಲಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನವು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಜೋರಾಗಿ…

Read More

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಚಿರತೆಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಭಕ್ತರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ​ಬೆಟ್ಟದ ರಂಗನಾಥಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯು ಸಂಚರಿಸುತ್ತಿರುವುದು ಕಂಡುಬಂದಿದ್ದು, ಈ ದೃಶ್ಯಗಳನ್ನು ಭಕ್ತರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಈ ಹಿಂದೆ ಇದೇ ಮಾರ್ಗದಲ್ಲಿ ಪಾದಯಾತ್ರೆ ಕೈಗೊಂಡಿದ್ದ ಮಗುವಿನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಚಿರತೆಯೇ ಇದು ಎಂದು ಶಂಕಿಸಲಾಗಿದೆ. ಚಿರತೆಯನ್ನು ಸೆರೆಹಿಡಿಯಲು…

Read More

ಹನೂರು: ಹಬ್ಬದ ಸಂಭ್ರಮದ ನಡುವೆಯೇ ಯುವ ಪ್ರೇಮಿಗಳ ಆತ್ಮಹತ್ಯೆ

ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿ ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದ್ದು, ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ​ಮೃತರನ್ನು ನಕ್ಕುಂದಿ ಗ್ರಾಮದ ನಾಗೇಂದ್ರ (21) ಹಾಗೂ ಪಾಲಾರ್ ಗ್ರಾಮದ ನದಿಯಾ (19) ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಪೊನ್ನಾಚಿ ಗ್ರಾಮದಲ್ಲಿ ಹಬ್ಬದ ಸಂಭ್ರಮ ನಡೆಯುತ್ತಿದ್ದು, ಮೃತ ಯುವಕ ನಾಗೇಂದ್ರ ಇಲ್ಲಿನ ತನ್ನ ಅಜ್ಜ ಶಿವಮಾದಯ್ಯ ಅವರ ಮನೆಗೆ ಬಂದಿದ್ದ ಎನ್ನಲಾಗಿದೆ. ಕಳೆದ ಎರಡು…

Read More

ಹನೂರು: ಕಾಡಾನೆಗಳ ದಾಳಿಗೆ ಬಾಳೆ, ಅಡಿಕೆ ತೋಟ ನಾಶ; ಕಂಗಾಲಾದ ರೈತ

​ಹನೂರು: ರೈತರು ತಮ್ಮ ಆರ್ಥಿಕ ಸಂಕಷ್ಟದ ನಡುವೆಯೂ ಬದುಕು ಕಟ್ಟಿಕೊಳ್ಳಲು ನೆಚ್ಚಿನ ತೋಟಗಳಲ್ಲಿ ಬಾಳೆ, ಅರಿಶಿನ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ಆದರೆ ಕಾಡಿನಿಂದ ಲಗ್ಗೆ ಇಡುವ ವನ್ಯಪ್ರಾಣಿಗಳು ರೈತರ ಬೆಳೆಗಳನ್ನು ಹಾನಿ ಮಾಡಿದರೆ ಅನ್ನದಾತನ ಬದುಕು ಬೀದಿಗೆ ಬರುತ್ತದೆ ಎಂದು ವಕೀಲ ಅಶೋಕ್ ಕುಮಾರ್ ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ​ತಾಲೂಕಿನ ಲೋಕನಹಳ್ಳಿ ಹೋಬಳಿಯ ಚಿಕ್ಕಮಾಲಾಪುರ ಗ್ರಾಮದ ಸರ್ವೆ ನಂಬರ್ 117/1 ರ ನಾರಾಯಣ್ ಮೂರ್ತಿ ಹಾಗೂ 117/2 ರ ದಿವ್ಯಶ್ರೀ ಎಂಬುವವರಿಗೆ ಸೇರಿದ ಜಮೀನಿನಲ್ಲಿ…

Read More

ಅಸ್ತೂರು ಗ್ರಾಮದ ನೂತನ ದೇವಾಲಯಕ್ಕೆ ಮಾಜಿ ಶಾಸಕ ಆರ್. ನರೇಂದ್ರ ಭೇಟಿ: ಭಕ್ತಿಪೂರ್ವಕ ಉದ್ಘಾಟನೆ

ಹನೂರು: ಗ್ರಾಮಗಳಲ್ಲಿ ದೇವಾಲಯಗಳನ್ನು ನಿರ್ಮಿಸಿ ಭಕ್ತರಿಗೆ ಸಮರ್ಪಣೆ ಮಾಡುವುದರಿಂದ ಆಯಾ ಭಾಗದಲ್ಲಿ ಉತ್ತಮ ಸಂಸ್ಕಾರ ಹಾಗೂ ಆರೋಗ್ಯವಂತ ವಾತಾವರಣ ನಿರ್ಮಾಣವಾಗಲಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ಅವರು ಅಭಿಪ್ರಾಯಪಟ್ಟರು. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಸ್ತೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಶನಿಶ್ವರ ಸ್ವಾಮಿ, ಜೆಡೆಶ್ವರ ಸ್ವಾಮಿ ಹಾಗೂ ಪಡಗಲ ಮಾದೇಶ್ವರ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು. ಕಾಡಂಚಿನ ಪುಟ್ಟ ಗ್ರಾಮದಲ್ಲಿ ಇಷ್ಟೊಂದು ಸುಂದರವಾದ…

Read More

ದಂಟಳ್ಳಿ ಏತ ನೀರಾವರಿ ಯೋಜನೆ: 153 ದಿನಗಳ ರೈತರ ಅಹೋರಾತ್ರಿ ಧರಣಿ ಅಂತ್ಯ

ಹನೂರು: ತಾಲ್ಲೂಕಿನ ವಡಕೆಹಳ್ಳ ಗ್ರಾಮದಲ್ಲಿ ದಂಟಳ್ಳಿ ಏತ ನೀರಾವರಿ ಯೋಜನೆ ಜಾರಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯ ವತಿಯಿಂದ ಕಳೆದ 153 ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವು ಶನಿವಾರ ಅಧಿಕೃತವಾಗಿ ಮುಕ್ತಾಯಗೊಂಡಿತು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಆರ್. ಮಂಜುನಾಥ್ ಅವರು ಪ್ರತಿಭಟನಾ ನಿರತ ರೈತರ ಮನವೊಲಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೋರಾಟಕ್ಕೆ ಅಂತ್ಯ ಹಾಡಲಾಯಿತು. ​ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, ಹನೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ರಸ್ತೆ,…

Read More