ಹನೂರು: ಹಬ್ಬದ ಸಂಭ್ರಮದ ನಡುವೆಯೇ ಯುವ ಪ್ರೇಮಿಗಳ ಆತ್ಮಹತ್ಯೆ

ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿ ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದ್ದು, ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ​ಮೃತರನ್ನು ನಕ್ಕುಂದಿ ಗ್ರಾಮದ ನಾಗೇಂದ್ರ (21) ಹಾಗೂ ಪಾಲಾರ್ ಗ್ರಾಮದ ನದಿಯಾ (19) ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಪೊನ್ನಾಚಿ ಗ್ರಾಮದಲ್ಲಿ ಹಬ್ಬದ ಸಂಭ್ರಮ ನಡೆಯುತ್ತಿದ್ದು, ಮೃತ ಯುವಕ ನಾಗೇಂದ್ರ ಇಲ್ಲಿನ ತನ್ನ ಅಜ್ಜ ಶಿವಮಾದಯ್ಯ ಅವರ ಮನೆಗೆ ಬಂದಿದ್ದ ಎನ್ನಲಾಗಿದೆ. ಕಳೆದ ಎರಡು…

Read More

ಹನೂರು: ಕಾಡಾನೆಗಳ ದಾಳಿಗೆ ಬಾಳೆ, ಅಡಿಕೆ ತೋಟ ನಾಶ; ಕಂಗಾಲಾದ ರೈತ

​ಹನೂರು: ರೈತರು ತಮ್ಮ ಆರ್ಥಿಕ ಸಂಕಷ್ಟದ ನಡುವೆಯೂ ಬದುಕು ಕಟ್ಟಿಕೊಳ್ಳಲು ನೆಚ್ಚಿನ ತೋಟಗಳಲ್ಲಿ ಬಾಳೆ, ಅರಿಶಿನ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ಆದರೆ ಕಾಡಿನಿಂದ ಲಗ್ಗೆ ಇಡುವ ವನ್ಯಪ್ರಾಣಿಗಳು ರೈತರ ಬೆಳೆಗಳನ್ನು ಹಾನಿ ಮಾಡಿದರೆ ಅನ್ನದಾತನ ಬದುಕು ಬೀದಿಗೆ ಬರುತ್ತದೆ ಎಂದು ವಕೀಲ ಅಶೋಕ್ ಕುಮಾರ್ ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ​ತಾಲೂಕಿನ ಲೋಕನಹಳ್ಳಿ ಹೋಬಳಿಯ ಚಿಕ್ಕಮಾಲಾಪುರ ಗ್ರಾಮದ ಸರ್ವೆ ನಂಬರ್ 117/1 ರ ನಾರಾಯಣ್ ಮೂರ್ತಿ ಹಾಗೂ 117/2 ರ ದಿವ್ಯಶ್ರೀ ಎಂಬುವವರಿಗೆ ಸೇರಿದ ಜಮೀನಿನಲ್ಲಿ…

Read More

ಅಸ್ತೂರು ಗ್ರಾಮದ ನೂತನ ದೇವಾಲಯಕ್ಕೆ ಮಾಜಿ ಶಾಸಕ ಆರ್. ನರೇಂದ್ರ ಭೇಟಿ: ಭಕ್ತಿಪೂರ್ವಕ ಉದ್ಘಾಟನೆ

ಹನೂರು: ಗ್ರಾಮಗಳಲ್ಲಿ ದೇವಾಲಯಗಳನ್ನು ನಿರ್ಮಿಸಿ ಭಕ್ತರಿಗೆ ಸಮರ್ಪಣೆ ಮಾಡುವುದರಿಂದ ಆಯಾ ಭಾಗದಲ್ಲಿ ಉತ್ತಮ ಸಂಸ್ಕಾರ ಹಾಗೂ ಆರೋಗ್ಯವಂತ ವಾತಾವರಣ ನಿರ್ಮಾಣವಾಗಲಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ಅವರು ಅಭಿಪ್ರಾಯಪಟ್ಟರು. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಸ್ತೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಶನಿಶ್ವರ ಸ್ವಾಮಿ, ಜೆಡೆಶ್ವರ ಸ್ವಾಮಿ ಹಾಗೂ ಪಡಗಲ ಮಾದೇಶ್ವರ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು. ಕಾಡಂಚಿನ ಪುಟ್ಟ ಗ್ರಾಮದಲ್ಲಿ ಇಷ್ಟೊಂದು ಸುಂದರವಾದ…

Read More

ದಂಟಳ್ಳಿ ಏತ ನೀರಾವರಿ ಯೋಜನೆ: 153 ದಿನಗಳ ರೈತರ ಅಹೋರಾತ್ರಿ ಧರಣಿ ಅಂತ್ಯ

ಹನೂರು: ತಾಲ್ಲೂಕಿನ ವಡಕೆಹಳ್ಳ ಗ್ರಾಮದಲ್ಲಿ ದಂಟಳ್ಳಿ ಏತ ನೀರಾವರಿ ಯೋಜನೆ ಜಾರಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯ ವತಿಯಿಂದ ಕಳೆದ 153 ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವು ಶನಿವಾರ ಅಧಿಕೃತವಾಗಿ ಮುಕ್ತಾಯಗೊಂಡಿತು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಆರ್. ಮಂಜುನಾಥ್ ಅವರು ಪ್ರತಿಭಟನಾ ನಿರತ ರೈತರ ಮನವೊಲಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೋರಾಟಕ್ಕೆ ಅಂತ್ಯ ಹಾಡಲಾಯಿತು. ​ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, ಹನೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ರಸ್ತೆ,…

Read More

​ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 23 ದಿನಕ್ಕೆ 2.34 ಕೋಟಿ ಸಂಗ್ರಹ

ಹನೂರು: ತಾಲ್ಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ ಕಾರ್ಯವು ಗುರುವಾರ ನಡೆದಿದ್ದು, ಕೇವಲ 23 ದಿನಗಳ ಅವಧಿಯಲ್ಲಿ ಬರೋಬ್ಬರಿ 2.34 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ​ಸಾಲೂರು ಬೃಹನ್ಮಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಸನ್ನಿಧಿಯಲ್ಲಿ ಹಾಗೂ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರ ನೇತೃತ್ವದಲ್ಲಿ ನಡೆದ ಎಣಿಕೆಯಲ್ಲಿ ಒಟ್ಟು 2,33,84,201 ರೂಪಾಯಿ ನಗದು ಸಂಗ್ರಹವಾಗಿದೆ. ಇದರಲ್ಲಿ ಭಕ್ತರು ಇ-ಹುಂಡಿ ಮೂಲಕ ಸಲ್ಲಿಸಿದ ಕಾಣಿಕೆಯೂ ಸೇರಿದೆ. ನಗದಿನ…

Read More

ಹನೂರು: ಹೋಟೆಲ್, ಬೇಕರಿಗಳ ಮೇಲೆ ಆಹಾರ ಇಲಾಖೆ ದಾಳಿ; 11 ಗೃಹಬಳಕೆ ಸಿಲಿಂಡರ್‌ಗಳ ವಶ

ಹನೂರು: ಪಟ್ಟಣದ ವಿವಿಧ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಬೇಕರಿಗಳ ಮೇಲೆ ಆಹಾರ ನಿರೀಕ್ಷಕರು ದಿಢೀರ್ ದಾಳಿ ನಡೆಸಿ, ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ 11 ಗೃಹಬಳಕೆಯ ಅನಿಲ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ​ಜಾಗತಿಕ ಮಟ್ಟದಲ್ಲಿ ಯುದ್ಧದಂತಹ ಸನ್ನಿವೇಶಗಳಿಂದ ಅನಿಲ ಕೊರತೆ ಎದುರಾಗುತ್ತಿರುವ ಬೆನ್ನಲ್ಲೇ, ತಾಲ್ಲೂಕು ಕೇಂದ್ರದಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ವ್ಯಾಪಾರ ವಹಿವಾಟಿಗೆ ಅಕ್ರಮವಾಗಿ ಬಳಸಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ವಸುಂಧರಾ ಅವರ ಸೂಚನೆಯ ಮೇರೆಗೆ…

Read More

​ಬಂಡೀಪುರ: ಅಕ್ರಮ ವಿದ್ಯುತ್ ಸ್ಪರ್ಶದಿಂದ ಹೆಣ್ಣು ಹುಲಿ ಸಾವು; ಆರೋಪಿಗಳು ತಲೆಮರೆಸಿಕೊಂಡಿರುವ ಶಂಕೆ

ಹನೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಜೋನ್ ವ್ಯಾಪ್ತಿಯ ಪಡಗೂರು ಗ್ರಾಮದ ಬಳಿ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಪಡಗೂರು ವ್ಯಾಪ್ತಿಯಲ್ಲಿ ಹುಲಿ ಸಂಚರಿಸುತ್ತಿರುವ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಅದರ ಚಲನವಲನ ಗಮನಿಸಲು ಥರ್ಮಲ್ ಡ್ರೋನ್ ಬಳಸಿದಾಗ ಖಾಸಗಿ ಜಮೀನೊಂದರಲ್ಲಿ ಹುಲಿ ಅಸ್ವಾಭಾವಿಕವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ, ಸೆಸ್ಕಾಂ ಹಾಗೂ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ…

Read More

ಮಲೆ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಸಂಭ್ರಮ: ಭಕ್ತರಿಗಾಗಿ ಲಕ್ಷಾಂತರ ಲಾಡು ಪ್ರಸಾದ ಸಿದ್ಧತೆ

ಹನೂರು: ಪಾವನ ಕ್ಷೇತ್ರವಾದ ಮಲೆ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿದ್ದು, ಶ್ರೀ ಕ್ಷೇತ್ರಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗಾಗಿ ವಿಶೇಷ ಲಾಡು ಪ್ರಸಾದ ತಯಾರಿಕಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭಕ್ತರ ಸೇವೆಯನ್ನು ಮೂಲ ಮಂತ್ರವಾಗಿಸಿಕೊಂಡಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರವು, ಜಾತ್ರೆಯ ಸಂದರ್ಭದಲ್ಲಿ ಪ್ರಸಾದದ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದೆ. ಪ್ರಸಾದ ತಯಾರಿಕೆಯಲ್ಲಿ ಶುದ್ಧತೆ, ನೈರ್ಮಲ್ಯ ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅತ್ಯಂತ ಶ್ರದ್ಧೆಯಿಂದ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ. ​ಈ ಬೃಹತ್…

Read More

​ಹನೂರು ಕುಡಿಯುವ ನೀರಿನ ಯೋಜನೆಗೆ 490 ಕೋಟಿ ರೂ. ಅನುದಾನ: ಸುತ್ತೂರು ಶ್ರೀಗಳಿಗೆ ಡಾ. ದತ್ತೇಶ್ ಕುಮಾರ್ ಕೃತಜ್ಞತೆ

​ಹನೂರು: ಹನೂರು ವಿಧಾನಸಭಾ ಕ್ಷೇತ್ರದ ರಾಮಾಪುರ, ಮಾರ್ಟಳ್ಳಿ ಹಾಗೂ ಅಜ್ಜಿಪುರ ಭಾಗದ ದಶಕಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಕ್ಷೇತ್ರದ ಮುಖಂಡರು ಭೇಟಿ ಮಾಡಿ ಭಕ್ತಿಪೂರ್ವಕ ಕೃತಜ್ಞತೆ ಸಲ್ಲಿಸಿದರು. ಹನೂರು ಕ್ಷೇತ್ರದ ಮುಖಂಡರಾದ ಡಾ. ಎಸ್. ದತ್ತೇಶ್ ಕುಮಾರ್ ನೇತೃತ್ವದಲ್ಲಿ ಸುತ್ತೂರು ಮಠಕ್ಕೆ ಭೇಟಿ ನೀಡಿದ ತಂಡವು, ಶ್ರೀಗಳ ಮಾರ್ಗದರ್ಶನ ಹಾಗೂ ಆಶೀರ್ವಾದದಿಂದಾಗಿ ಈ ಸಾಲಿನ ಬಜೆಟ್‌ನಲ್ಲಿ ಹನೂರು ಕ್ಷೇತ್ರಕ್ಕೆ ಬೃಹತ್ ನೀರಾವರಿ…

Read More

ಮಲೈ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ: ಕಾರ್ಯದರ್ಶಿ ಎ.ಇ. ರಘು ಪರಿಶೀಲನೆ

ಹನೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೈ ಮಾದೇಶ್ವರ ಬೆಟ್ಟದಲ್ಲಿ ಇಂದಿನಿಂದ (ಮಾರ್ಚ್ 16 ರಿಂದ 19 ರವರೆಗೆ) ಜರುಗಲಿರುವ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರು, ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಮಹಾರಥೋತ್ಸವ ಭಕ್ತಿಭಾವದಿಂದ ನೆರವೇರಲಿದ್ದು, ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ…

Read More