ಮಲೈ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ: ಕಾರ್ಯದರ್ಶಿ ಎ.ಇ. ರಘು ಪರಿಶೀಲನೆ
ಹನೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೈ ಮಾದೇಶ್ವರ ಬೆಟ್ಟದಲ್ಲಿ ಇಂದಿನಿಂದ (ಮಾರ್ಚ್ 16 ರಿಂದ 19 ರವರೆಗೆ) ಜರುಗಲಿರುವ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರು, ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಮಹಾರಥೋತ್ಸವ ಭಕ್ತಿಭಾವದಿಂದ ನೆರವೇರಲಿದ್ದು, ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ…

