​ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 23 ದಿನಕ್ಕೆ 2.34 ಕೋಟಿ ಸಂಗ್ರಹ

ಹನೂರು: ತಾಲ್ಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ ಕಾರ್ಯವು ಗುರುವಾರ ನಡೆದಿದ್ದು, ಕೇವಲ 23 ದಿನಗಳ ಅವಧಿಯಲ್ಲಿ ಬರೋಬ್ಬರಿ 2.34 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ​ಸಾಲೂರು ಬೃಹನ್ಮಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಸನ್ನಿಧಿಯಲ್ಲಿ ಹಾಗೂ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರ ನೇತೃತ್ವದಲ್ಲಿ ನಡೆದ ಎಣಿಕೆಯಲ್ಲಿ ಒಟ್ಟು 2,33,84,201 ರೂಪಾಯಿ ನಗದು ಸಂಗ್ರಹವಾಗಿದೆ. ಇದರಲ್ಲಿ ಭಕ್ತರು ಇ-ಹುಂಡಿ ಮೂಲಕ ಸಲ್ಲಿಸಿದ ಕಾಣಿಕೆಯೂ ಸೇರಿದೆ. ನಗದಿನ…

Read More

ಹನೂರು: ಹೋಟೆಲ್, ಬೇಕರಿಗಳ ಮೇಲೆ ಆಹಾರ ಇಲಾಖೆ ದಾಳಿ; 11 ಗೃಹಬಳಕೆ ಸಿಲಿಂಡರ್‌ಗಳ ವಶ

ಹನೂರು: ಪಟ್ಟಣದ ವಿವಿಧ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಬೇಕರಿಗಳ ಮೇಲೆ ಆಹಾರ ನಿರೀಕ್ಷಕರು ದಿಢೀರ್ ದಾಳಿ ನಡೆಸಿ, ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ 11 ಗೃಹಬಳಕೆಯ ಅನಿಲ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ​ಜಾಗತಿಕ ಮಟ್ಟದಲ್ಲಿ ಯುದ್ಧದಂತಹ ಸನ್ನಿವೇಶಗಳಿಂದ ಅನಿಲ ಕೊರತೆ ಎದುರಾಗುತ್ತಿರುವ ಬೆನ್ನಲ್ಲೇ, ತಾಲ್ಲೂಕು ಕೇಂದ್ರದಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ವ್ಯಾಪಾರ ವಹಿವಾಟಿಗೆ ಅಕ್ರಮವಾಗಿ ಬಳಸಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ವಸುಂಧರಾ ಅವರ ಸೂಚನೆಯ ಮೇರೆಗೆ…

Read More

​ಬಂಡೀಪುರ: ಅಕ್ರಮ ವಿದ್ಯುತ್ ಸ್ಪರ್ಶದಿಂದ ಹೆಣ್ಣು ಹುಲಿ ಸಾವು; ಆರೋಪಿಗಳು ತಲೆಮರೆಸಿಕೊಂಡಿರುವ ಶಂಕೆ

ಹನೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಜೋನ್ ವ್ಯಾಪ್ತಿಯ ಪಡಗೂರು ಗ್ರಾಮದ ಬಳಿ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಪಡಗೂರು ವ್ಯಾಪ್ತಿಯಲ್ಲಿ ಹುಲಿ ಸಂಚರಿಸುತ್ತಿರುವ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಅದರ ಚಲನವಲನ ಗಮನಿಸಲು ಥರ್ಮಲ್ ಡ್ರೋನ್ ಬಳಸಿದಾಗ ಖಾಸಗಿ ಜಮೀನೊಂದರಲ್ಲಿ ಹುಲಿ ಅಸ್ವಾಭಾವಿಕವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ, ಸೆಸ್ಕಾಂ ಹಾಗೂ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ…

Read More

ಮಲೆ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಸಂಭ್ರಮ: ಭಕ್ತರಿಗಾಗಿ ಲಕ್ಷಾಂತರ ಲಾಡು ಪ್ರಸಾದ ಸಿದ್ಧತೆ

ಹನೂರು: ಪಾವನ ಕ್ಷೇತ್ರವಾದ ಮಲೆ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿದ್ದು, ಶ್ರೀ ಕ್ಷೇತ್ರಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗಾಗಿ ವಿಶೇಷ ಲಾಡು ಪ್ರಸಾದ ತಯಾರಿಕಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭಕ್ತರ ಸೇವೆಯನ್ನು ಮೂಲ ಮಂತ್ರವಾಗಿಸಿಕೊಂಡಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರವು, ಜಾತ್ರೆಯ ಸಂದರ್ಭದಲ್ಲಿ ಪ್ರಸಾದದ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದೆ. ಪ್ರಸಾದ ತಯಾರಿಕೆಯಲ್ಲಿ ಶುದ್ಧತೆ, ನೈರ್ಮಲ್ಯ ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅತ್ಯಂತ ಶ್ರದ್ಧೆಯಿಂದ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ. ​ಈ ಬೃಹತ್…

Read More

​ಹನೂರು ಕುಡಿಯುವ ನೀರಿನ ಯೋಜನೆಗೆ 490 ಕೋಟಿ ರೂ. ಅನುದಾನ: ಸುತ್ತೂರು ಶ್ರೀಗಳಿಗೆ ಡಾ. ದತ್ತೇಶ್ ಕುಮಾರ್ ಕೃತಜ್ಞತೆ

​ಹನೂರು: ಹನೂರು ವಿಧಾನಸಭಾ ಕ್ಷೇತ್ರದ ರಾಮಾಪುರ, ಮಾರ್ಟಳ್ಳಿ ಹಾಗೂ ಅಜ್ಜಿಪುರ ಭಾಗದ ದಶಕಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಕ್ಷೇತ್ರದ ಮುಖಂಡರು ಭೇಟಿ ಮಾಡಿ ಭಕ್ತಿಪೂರ್ವಕ ಕೃತಜ್ಞತೆ ಸಲ್ಲಿಸಿದರು. ಹನೂರು ಕ್ಷೇತ್ರದ ಮುಖಂಡರಾದ ಡಾ. ಎಸ್. ದತ್ತೇಶ್ ಕುಮಾರ್ ನೇತೃತ್ವದಲ್ಲಿ ಸುತ್ತೂರು ಮಠಕ್ಕೆ ಭೇಟಿ ನೀಡಿದ ತಂಡವು, ಶ್ರೀಗಳ ಮಾರ್ಗದರ್ಶನ ಹಾಗೂ ಆಶೀರ್ವಾದದಿಂದಾಗಿ ಈ ಸಾಲಿನ ಬಜೆಟ್‌ನಲ್ಲಿ ಹನೂರು ಕ್ಷೇತ್ರಕ್ಕೆ ಬೃಹತ್ ನೀರಾವರಿ…

Read More

ಮಲೈ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ: ಕಾರ್ಯದರ್ಶಿ ಎ.ಇ. ರಘು ಪರಿಶೀಲನೆ

ಹನೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೈ ಮಾದೇಶ್ವರ ಬೆಟ್ಟದಲ್ಲಿ ಇಂದಿನಿಂದ (ಮಾರ್ಚ್ 16 ರಿಂದ 19 ರವರೆಗೆ) ಜರುಗಲಿರುವ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರು, ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಮಹಾರಥೋತ್ಸವ ಭಕ್ತಿಭಾವದಿಂದ ನೆರವೇರಲಿದ್ದು, ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ…

Read More

ಮಲೈ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ: ಕಾರ್ಯದರ್ಶಿ ಎ.ಇ. ರಘು ಪರಿಶೀಲನೆ

ಹನೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೈ ಮಾದೇಶ್ವರ ಬೆಟ್ಟದಲ್ಲಿ ಇಂದಿನಿಂದ (ಮಾರ್ಚ್ 16 ರಿಂದ 19 ರವರೆಗೆ) ಜರುಗಲಿರುವ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರು, ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಮಹಾರಥೋತ್ಸವ ಭಕ್ತಿಭಾವದಿಂದ ನೆರವೇರಲಿದ್ದು, ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ…

Read More

ರೈತ ಸಂಘದ ಹೋರಾಟಕ್ಕೆ ಸಂದ ಜಯ: ಉಡುತೊರೆ ಯೋಜನೆಗೆ 490 ಕೋಟಿ ರೂ. ಮಂಜೂರಾತಿಗೆ ಗೌಡೆ ಗೌಡ ಹರ್ಷ

ಹನೂರು: ಕರ್ನಾಟಕ ರಾಜ್ಯ ರೈತ ಸಂಘವು ಹನೂರು ತಾಲ್ಲೂಕಿನ ರೈತರ ಹಿತರಕ್ಷಣೆಗಾಗಿ ಹಮ್ಮಿಕೊಂಡಿದ್ದ ನಿರಂತರ ಹೋರಾಟ ಹಾಗೂ ಬೆಂಗಳೂರು ವಿಧಾನಸೌಧ ಚಲೋ ಪಾದಯಾತ್ರೆಗೆ ಪ್ರತಿಫಲ ದೊರೆತಿದ್ದು, ರಾಜ್ಯ ಬಜೆಟ್‌ನಲ್ಲಿ ಉಡುತೊರೆಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ರೂಪಾಯಿ ಘೋಷಿಸಿರುವುದು ರೈತ ಸಂಘದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೆ ಗೌಡ ತಿಳಿಸಿದರು. ಹನೂರು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಂತ ಹಿಂದುಳಿದ ತಾಲ್ಲೂಕಾಗಿರುವ ಹನೂರಿನಲ್ಲಿ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ…

Read More

ರೈತರ ಹಿತರಕ್ಷಣೆಗಾಗಿ ಉಡುತೊರೆ ಯೋಜನೆಗೆ ರೂ. 490 ಕೋಟಿ ಅನುದಾನ: ಮಾಜಿ ಶಾಸಕ ಆರ್. ನರೇಂದ್ರ ಹರ್ಷ

ಹನೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಏಳಿಗೆಗೆ ಶ್ರಮಿಸುವುದರ ಜೊತೆಗೆ, ಈಗ ಏತ ನೀರಾವರಿ ಯೋಜನೆಗಳ ಮೂಲಕ ರೈತರ ದಶಕಗಳ ಕಾಲದ ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ಹಾಡಲು ಮುಂದಾಗಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ಅವರು ತಿಳಿಸಿದರು. ​ಹನೂರು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದಿನ ರಾಜ್ಯ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ಬಹುದಿನಗಳ ಕನಸಾದ ಉಡುತೊರೆಹಳ್ಳ ಜಲಾಶಯ ಏತ ನೀರಾವರಿ ಯೋಜನೆಗೆ ಸುಮಾರು 490 ಕೋಟಿ ರೂಪಾಯಿಗಳ ಅನುದಾನವನ್ನು ಘೋಷಿಸಿರುವುದು…

Read More

ಚಾಮರಾಜನಗರದಲ್ಲಿ ಕೈವಾರ ತಾತಯ್ಯನವರ ವಿಚಾರ ಸಂಕಿರಣ ಹಾಗೂ ‘ಯತೀಂದ್ರ ಶ್ರೀ’ ಪ್ರಶಸ್ತಿ ಪ್ರದಾನ: ಭಾಗವಹಿಸಲು ಗೋಪಾಲಕೃಷ್ಣ ಕರೆ

ಹನೂರು: ಸನಾತನ ಧರ್ಮದ ಶ್ರೇಷ್ಠ ಗುರುಗಳಾದ ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ಯೋಗಿಗಳ ಪರಿಚಯ, ಆತ್ಮಬೋಧೆ ಕುರಿತ ವಿಚಾರ ಸಂಕಿರಣ ಹಾಗೂ ‘ಯತೀಂದ್ರ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹನೂರು ತಾಲೂಕಿನ ಎಲ್ಲಾ ಸಮುದಾಯದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಹನೂರು ತಾಲೂಕು ಬಣಜಿಗ/ಬಲಿಜ ಸಂಘದ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಮನವಿ ಮಾಡಿದ್ದಾರೆ. ​ಈ ಕುರಿತು ಮಾಹಿತಿ ನೀಡಿದ ಅವರು, ಇದೇ ಮಾರ್ಚ್ 22, 2026ರ ಭಾನುವಾರ ಬೆಳಿಗ್ಗೆ 8:30 ಗಂಟೆಗೆ ಚಾಮರಾಜನಗರ ಜಿಲ್ಲಾ ಕೇಂದ್ರದ ವರನಟ…

Read More