ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 23 ದಿನಕ್ಕೆ 2.34 ಕೋಟಿ ಸಂಗ್ರಹ
ಹನೂರು: ತಾಲ್ಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ ಕಾರ್ಯವು ಗುರುವಾರ ನಡೆದಿದ್ದು, ಕೇವಲ 23 ದಿನಗಳ ಅವಧಿಯಲ್ಲಿ ಬರೋಬ್ಬರಿ 2.34 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸಾಲೂರು ಬೃಹನ್ಮಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಸನ್ನಿಧಿಯಲ್ಲಿ ಹಾಗೂ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರ ನೇತೃತ್ವದಲ್ಲಿ ನಡೆದ ಎಣಿಕೆಯಲ್ಲಿ ಒಟ್ಟು 2,33,84,201 ರೂಪಾಯಿ ನಗದು ಸಂಗ್ರಹವಾಗಿದೆ. ಇದರಲ್ಲಿ ಭಕ್ತರು ಇ-ಹುಂಡಿ ಮೂಲಕ ಸಲ್ಲಿಸಿದ ಕಾಣಿಕೆಯೂ ಸೇರಿದೆ. ನಗದಿನ…

