ಬಾಣಂತಿ ಕೊಲೆ ಪ್ರಕರಣ: ಆರೋಪಿ ಅಮಲ್ರಾಜ್ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೊಳ್ಳೇಗಾಲ ನ್ಯಾಯಾಲಯ
ಹನೂರು: ಕ್ಷುಲ್ಲಕ ಕಾರಣಕ್ಕೆ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಆರೋಪಿಗೆ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಮಂಗಳವಾರ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ: ಡಿಸೆಂಬರ್ 23, 2024ರಂದು ಸಂಜೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಅಮಲ್ರಾಜ್ ಬಿನ್ ಥೋಮಸ್ ಎಂಬಾತ ಶೋಭಾ ಎಂಬ ಮಹಿಳೆಯ ಬಳಿ ಮದ್ಯಪಾನಕ್ಕಾಗಿ ಹಣ ಕೇಳಿದ್ದನು. ಹಣ ನೀಡಲು…

