ಮಲೆ ಮಹದೇಶ್ವರ ಬೆಟ್ಟದಲ್ಲಿ ಇತಿಹಾಸ: ಕೇವಲ 28 ದಿನಗಳಲ್ಲಿ 3.41 ಕೋಟಿ ರೂ. ಹುಂಡಿ ಹಣ ಸಂಗ್ರಹ
ಹನೂರು: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಬುಧವಾರ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ತಿಂಗಳಿಗೂ ಕಡಿಮೆ ಅವಧಿಯಲ್ಲಿ ಬರೋಬ್ಬರಿ 3.41 ಕೋಟಿ ರೂಪಾಯಿ ನಗದು ಸಂಗ್ರಹವಾಗುವ ಮೂಲಕ ಮಾದಪ್ಪನ ಬೆಟ್ಟದಲ್ಲಿ ದಾಖಲೆ ಬರೆಯಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ…

