ಶಿಕ್ಷಣದಿಂದ ಸಮಾಜದ ಪ್ರಗತಿ ಸಾಧ್ಯ: ಶಾಸಕ ಎಂ.ಆರ್. ಮಂಜುನಾಥ್; 3.82 ಕೋಟಿ ವೆಚ್ಚದ ನೂತನ ವಸತಿ ಶಾಲೆ ಲೋಕಾರ್ಪಣೆ
ಹನೂರು: ಶಿಕ್ಷಣದಿಂದ ಮಾತ್ರ ಪ್ರತಿಯೊಂದು ಸಮಾಜವೂ ಪ್ರಗತಿ ಹೊಂದಲು ಸಾಧ್ಯ ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ತಾಲೂಕು ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ಗಾಣಮಂಗಲದಲ್ಲಿ ಸುಮಾರು 3.82 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಆದಿವಾಸಿ ಮತ್ತು ಬುಡಕಟ್ಟು ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಸದುದ್ದೇಶದಿಂದ ಸರ್ಕಾರ ವಸತಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ಹಿಂದೆ…

