ತೂಗು ಸೇತುವೆ ಮನುಷ್ಯ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನ: ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಯ ರೂವಾರಿ ಇನ್ನಿಲ್ಲ
ದಕ್ಷಿಣ ಕನ್ನಡ: ದೇಶಾದ್ಯಂತ ‘ಭಾರತದ ಸೇತುವೆ ಮನುಷ್ಯ’ (Bridge Man of India) ಹಾಗೂ ತೂಗು ಸೇತುವೆಗಳ ನಿರ್ಮಾಣದ ಮೂಲಕ ಗ್ರಾಮೀಣ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ನಿಧನರಾದರು. ಕೆಲ ದಿನಗಳ ಹಿಂದೆ ಉತ್ತರಾಖಂಡದ ಪವಿತ್ರ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಪತ್ನಿ ಉಷಾ ಅವರನ್ನು…

