ಕಂಪ್ಲಿ ಉತ್ಸವಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ: ಕ್ಷೇತ್ರಕ್ಕೆ 3 ಸಾವಿರ ಹೊಸ ಮನೆಗಳ ಭರ್ಜರಿ ಕೊಡುಗೆ
ಬಳ್ಳಾರಿ: “ಕಂಪ್ಲಿ ವಿಧಾನಸಭಾ ಕ್ಷೇತ್ರದ ವಸತಿ ರಹಿತರ ಕನಸು ನನಸು ಮಾಡುವ ನಿಟ್ಟಿನಲ್ಲಿ ಕಳೆದ ಸಾಲಿನಲ್ಲಿ 2 ಸಾವಿರ ಮನೆಗಳನ್ನು ನೀಡಲಾಗಿತ್ತು. ಈಗ ಬರುವ ಹೊಸ ಆರ್ಥಿಕ ಸಾಲಿಗೆ ಹೆಚ್ಚುವರಿಯಾಗಿ 3 ಸಾವಿರ ಮನೆಗಳನ್ನು ಮಂಜೂರು ಮಾಡಲಾಗುವುದು. ಈ ಮೂಲಕ ಕೇವಲ ಎರಡೂವರೆ ವರ್ಷಗಳಲ್ಲಿ ಒಟ್ಟು 5 ಸಾವಿರ ಮನೆಗಳನ್ನು ಈ ಕ್ಷೇತ್ರಕ್ಕೆ ವಿತರಿಸಿದಂತಾಗುತ್ತದೆ” ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್…

