ಬಾಲಕಿಯರನ್ನು ಪ್ರಾಣಿಗಳಂತೆ ನಡೆಸಿಕೊಂಡ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬಿ.ವೀರಪ್ಪ ಖಂಡನೆ!

ಮಂಡ್ಯ, ಮೇ.23: ನಗರದ ಬಂದೀಗೌಡ ಬಡಾವಣೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವಿದ್ಯಾರ್ಥಿನಿಯರ ವಾಸದ ಪರಿಸ್ಥಿತಿ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಕಂಡು ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪರಿಶೀಲನೆ ವೇಳೆ ಒಂದೇ ಕೊಠಡಿಯಲ್ಲಿ 13 ವಿದ್ಯಾರ್ಥಿನಿಯರು ವಾಸಿಸುತ್ತಿರುವುದು ಬೆಳಕಿಗೆ ಬಂದಿದ್ದು, ಇದರಿಂದ ಆಕ್ರೋಶಗೊಂಡ ಉಪ ಲೋಕಾಯುಕ್ತರು, “ಇವರು ಮಕ್ಕಳು ಎಂದು ತಿಳ್ಕೊಂಡಿದ್ದೀರಾ…

Read More

​ಮಂಡ್ಯದಲ್ಲಿ ಭೀಕರ ಕೆಮಿಕಲ್ ಟ್ಯಾಂಕ್ ಸ್ಫೋಟ: ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಾವು. ನಾಲ್ವರಿಗೆ ಗಂಭೀರ ಗಾಯ

ಮಂಡ್ಯ: ಜಿಲ್ಲೆಯ ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪವಿರುವ ‘ಕೀರ್ತಿ ಕೆಮಿಕಲ್ ಕಾರ್ಖಾನೆ’ಯಲ್ಲಿ ಭಾನುವಾರ ರಾಸಾಯನಿಕ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಭೀಕರವಾಗಿ ಮೃತಪಟ್ಟಿದ್ದಾರೆ. ಕಾರ್ಖಾನೆಯ ಸಾಮಗ್ರಿಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ​ಛಿದ್ರಗೊಂಡ ದೇಹಗಳು: ​ಬಿಹಾರ ಮೂಲದ ಕಲೂಪ್‌ಖಾನ್ (27) ಮತ್ತು ಅಶೋಕ್ (26) ಮೃತಪಟ್ಟ ದುರ್ದೈವಿಗಳು. ಟ್ಯಾಂಕ್ ಸ್ಫೋಟಗೊಂಡ ರಭಸಕ್ಕೆ ಇಬ್ಬರು ಕಾರ್ಮಿಕರ ದೇಹಗಳು ಛಿದ್ರಛಿದ್ರಗೊಂಡು ನೂರಾರು ಅಡಿ ದೂರಕ್ಕೆ ಎಸೆಯಲ್ಪಟ್ಟಿವೆ. ಘಟನೆಯಲ್ಲಿ ಖಾಸಿಂ, ರವಿ, ಮಹಾಂತೇಶ್ ಹಾಗೂ ರಾಜೀವ್‌ಕುಮಾರ್…

Read More