ಅಕ್ರಮ ಸಂಬಂಧದ ದುರಂತ ಅಂತ್ಯ: ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹ ಸುಟ್ಟ ಆರೋಪ; ತನಿಖೆ ಭೀತಿಗೆ ಆರೋಪಿ ಆತ್ಮಹತ್ಯೆ
ಮಂಡ್ಯ: ಅಕ್ರಮ ಸಂಬಂಧದ ಹಿನ್ನೆಲೆ ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹವನ್ನು ಸುಟ್ಟು ಸಾಕ್ಷ್ಯ ನಾಶಪಡಿಸಿದ ಪ್ರಕರಣ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಪ್ರಮುಖ ಆರೋಪಿ ತನ್ನ ತಾಯಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದ ನಳಿನಿ ಎಂದು ಗುರುತಿಸಲಾಗಿದೆ. ಅವರು ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕೆಲ ತಿಂಗಳ ಹಿಂದೆ ದೇವಸ್ಥಾನವೊಂದರಲ್ಲಿ ರಾಜಶೇಖರ ಎಂಬಾತನ ಪರಿಚಯವಾಗಿದ್ದು, ಬಳಿಕ…

