ಬಾಲಕಿಯರನ್ನು ಪ್ರಾಣಿಗಳಂತೆ ನಡೆಸಿಕೊಂಡ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬಿ.ವೀರಪ್ಪ ಖಂಡನೆ!
ಮಂಡ್ಯ, ಮೇ.23: ನಗರದ ಬಂದೀಗೌಡ ಬಡಾವಣೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವಿದ್ಯಾರ್ಥಿನಿಯರ ವಾಸದ ಪರಿಸ್ಥಿತಿ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಕಂಡು ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪರಿಶೀಲನೆ ವೇಳೆ ಒಂದೇ ಕೊಠಡಿಯಲ್ಲಿ 13 ವಿದ್ಯಾರ್ಥಿನಿಯರು ವಾಸಿಸುತ್ತಿರುವುದು ಬೆಳಕಿಗೆ ಬಂದಿದ್ದು, ಇದರಿಂದ ಆಕ್ರೋಶಗೊಂಡ ಉಪ ಲೋಕಾಯುಕ್ತರು, “ಇವರು ಮಕ್ಕಳು ಎಂದು ತಿಳ್ಕೊಂಡಿದ್ದೀರಾ…

