ಹುಣಸೂರಿನಲ್ಲಿ ಭೀಕರ ಕೌಟುಂಬಿಕ ದುರಂತ: ಹೆಂಡತಿ, ಮಕ್ಕಳಿಗೆ ಪ್ಲಾಸ್ಟರ್ ಸುತ್ತಿ ಕೊಲೆ ಮಾಡಿ ವ್ಯಕ್ತಿ ಆತ್ಮಹತ್ಯೆ!
ವಿಶೇಷ ಕ್ರೈಂ ವರದಿ ಹುಣಸೂರು / ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ನಗರದ ಮಾರುತಿ ಬಡಾವಣೆಯಲ್ಲಿ ಸಮಾಜವೇ ತಲೆತಗ್ಗಿಸುವಂತಹ, ಕರುಳು ಹಿಂಡುವ ದಾರುಣ ಘಟನೆಯೊಂದು ನಡೆದಿದೆ. ಸಣ್ಣಪುಟ್ಟ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತಾಶೆಗೊಂಡ ವ್ಯಕ್ತಿಯೊಬ್ಬ ತನ್ನ ಹೆಂಡತಿ ಹಾಗೂ ಇಬ್ಬರು ಮುಗ್ಧ ಮಕ್ಕಳನ್ನು ಅತ್ಯಂತ ನೃಶಂಸವಾಗಿ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಕುಟುಂಬದ ಯಜಮಾನ ಹರೀಶ್, ಆತನ ಪತ್ನಿ ನಿಶ್ಚಿತಾ ಹಾಗೂ ಇವರ ಮುಗ್ಧ ಮಕ್ಕಳಾದ ನೆಕ್ಸಾ ಮತ್ತು ರಕ್ಷಾ…

