ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ ಜೋಶಿ; ಪ್ರಧಾನಿ ಮೋದಿಗೆ ಕೃತಜ್ಞತೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಅವರು ಭಾನುವಾರ ನವದೆಹಲಿಯ ಕೇಂದ್ರ ಸಚಿವಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇಶದ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಪೂರ್ಣ ನಿಷ್ಠೆ ಹಾಗೂ ವಿನಮ್ರತೆಯಿಂದ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಲ್ಹಾದ ಜೋಶಿ, ತಮ್ಮ ಮೇಲೆ ಅಪಾರ ನಂಬಿಕೆ ಇಟ್ಟು ಕೇಂದ್ರ ಶಿಕ್ಷಣ ಸಚಿವರಂತಹ ಮಹತ್ವದ ಜವಾಬ್ದಾರಿಯನ್ನು ವಹಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಈ…

Read More

ನೀಟ್ ವಿವಾದದ ಬಳಿಕ ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ಕೇಂದ್ರ ಘೊಷಣೆ

ನವದೆಹಲಿ (ಜು. 25): ದೇಶಾದ್ಯಂತ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿಗೆ ವಹಿಸಲಾಗಿದೆ. ಈ ನಿರ್ಧಾರದೊಂದಿಗೆ ನೀಟ್ ವಿವಾದದ ಬಳಿಕ ಶಿಕ್ಷಣ ಸಚಿವಾಲಯದ ಹೊಣೆಗಾರಿಕೆ ಪ್ರಹ್ಲಾದ್ ಜೋಶಿ ಅವರ ಹೆಗಲಿಗೆ ಬಂದಿದ್ದು,…

Read More

NEET ವಿವಾದದ ಬೆನ್ನಲ್ಲೇ ಕೇಂದ್ರ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ ರಾಜೀನಾಮೆ: ‘ಯುವಕರ ಭವಿಷ್ಯವೇ ನನ್ನ ಆದ್ಯತೆ’

ನವದೆಹಲಿ: ಕಳೆದ ಕೆಲವು ದಿನಗಳಿಂದ NEET-UG ಪರೀಕ್ಷೆ ಸಂಬಂಧ ದೇಶಾದ್ಯಂತ ಉಂಟಾಗಿದ್ದ ವಿವಾದ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಗಳ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಈ ಕುರಿತು ದೇಶದ ಯುವಕರಿಗೆ ಉದ್ದೇಶಿಸಿ ಭಾವನಾತ್ಮಕ ಮುಕ್ತ ಪತ್ರ ಬರೆದಿರುವ ಅವರು, ದೇಶದ ಏಕತೆ, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ತಮ್ಮ ಪತ್ರದಲ್ಲಿ, ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ…

Read More

ದೆಹಲಿ ಪ್ರತಿಭಟನೆ ಬೆನ್ನಲ್ಲೇ ಭದ್ರತಾ ಸಂಸ್ಥೆಗಳ ಹೈ ಅಲರ್ಟ್: ಖಲಿಸ್ತಾನಿ ಬೆದರಿಕೆ ಹಾಗೂ ವಿದೇಶಿ ಅನುದಾನದ ಶಂಕೆ ಕುರಿತು ತನಿಖೆ ತೀವ್ರ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಸಿಜೆಪಿ ಪಕ್ಷದ ವತಿಯಿಂದ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಗಂಭೀರ ಸಂಚು ರೂಪಿಸಿರುವ ಆಘಾತಕಾರಿ ಮಾಹಿತಿ ಲಭ್ಯವಾಗಿದ್ದು, ದೇಶಾದ್ಯಂತ ವ್ಯಾಪಕ ಕಳವಳಕ್ಕೆ ಕಾರಣವಾಗಿದೆ. ನಿಷೇಧಿತ ಖಲಿಸ್ತಾನ್ ಬೆಂಬಲಿತ ಉಗ್ರ ಸಂಘಟನೆ ‘ಸಿಖ್ಸ್ ಫಾರ್ ಜಸ್ಟಿಸ್’ (SFJ) ಮುಖ್ಯಸ್ಥ ಗುರುಪತ್‌ವಂತ್ ಸಿಂಗ್ ಪನ್ನುನ್, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹತ್ಯೆಗೆ ಯತ್ನ ಹಾಗೂ ದೆಹಲಿ ವಿಮಾನ ನಿಲ್ದಾಣ ಧ್ವಂಸಗೊಳಿಸುವುದಾಗಿ ಬೆದರಿಕೆ ಹಾಕಿರುವ ಹಿಂದಿನ ಆಡಿಯೋ ಮತ್ತು ವಿಡಿಯೋ ಸಂದೇಶಗಳು ಹರಿದಾಡುತ್ತಿರುವ….

Read More

10 ವರ್ಷಗಳಲ್ಲಿ 152 ಪೇಪರ್ ಲೀಕ್, ಒಬ್ಬರಿಗೂ ಶಿಕ್ಷೆಯಾಗಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ (ಜು.22): ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಬರೋಬ್ಬರಿ 152 ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ (ಪೇಪರ್ ಲೀಕ್) ಪ್ರಕರಣಗಳು ನಡೆದಿದ್ದರೂ, ಇದುವರೆಗೆ ಒಂದೇ ಒಬ್ಬ ಆರೋಪಿಗೂ ಶಿಕ್ಷೆಯಾಗಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದ ಕೋಟ್ಯಂತರ ವಿದ್ಯಾರ್ಥಿಗಳಿಗೆ ನ್ಯಾಯಯುತ ಶಿಕ್ಷಣ ವ್ಯವಸ್ಥೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು. ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ…

Read More

ನವದೆಹಲಿ ಧರಣಿ ಹಿಂಸಾಚಾರ: ‘ಸಂಸತ್ ಚಲೋ’ ಪ್ರತಿಭಟನೆ ಉಗ್ರರೂಪ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 70 ಪ್ರತಿಭಟನಾಕಾರರ ಬಂಧನ

ನವದೆಹಲಿ: ದೇಶದ ರಾಜಧಾನಿಯಲ್ಲಿ ಸೋಮವಾರ ನಡೆದ ನಾಟಕೀಯ ಬೆಳವಣಿಗೆಗಳ ಮರುದಿನವೂ, ವ್ಯಂಗ್ಯಾತ್ಮಕ ವೇದಿಕೆಯಾದ ‘ಕಾಕ್ರೂಚ ಜಂಟಾ ಪಾರ್ಟಿ’ (ಸಿಜೆಪಿ) ದೆಹಲಿಯ ಜಂತರ್ ಮಂತರ್‌ನಲ್ಲಿ ತನ್ನ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಘೋಷಿಸಿದೆ. ಮಂಗಳವಾರ ಬೆಳಿಗ್ಗೆ, ಸೋಮವಾರ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯ ನಂತರ ಪೊಲೀಸರು ಪ್ರತಿಭಟನಾ ಸ್ಥಳದಲ್ಲಿದ್ದ ಮಂಟಪ ಮತ್ತು ಟೆಂಟ್‌ಗಳನ್ನು ತೆರವುಗೊಳಿಸಿದ್ದರೂ, ಪ್ರತಿಭಟನಾಕಾರರು ಮತ್ತೆ ಜಂತರ್ ಮಂತರ್‌ಗೆ ಹಿಂತಿರುಗಿದರು. ಚಳವಳಿಯನ್ನು ಮುಂದುವರಿಸಲು ಸಿಜೆಪಿ ನೀಡಿದ ಕರೆಯ ಮೇರೆಗೆ, ಪ್ರತಿಭಟನಾಕಾರರು ಮುಂಜಾನೆಯಿಂದಲೇ ಸ್ಥಳದಲ್ಲಿ ನೆರೆಯಲು ಪ್ರಾರಂಭಿಸಿದರು….

Read More

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್: ಹೊಸ ಮುಖಗಳಿಗೆ ಮಣೆ ಹಾಕಲು ರಾಹುಲ್ ಗಾಂಧಿ ಸೂಚನೆ

ನವದೆಹಲಿ: ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕಸರತ್ತಿಗೆ ಸದ್ಯಕ್ಕೆ ಮತ್ತೆ ಕಾರ್ಮೋಡ ಕವಿದಿದೆ. ಗುರುವಾರ ನವದೆಹಲಿಯಲ್ಲಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಹೈಕಮಾಂಡ್ ನಾಯಕರೊಂದಿಗಿನ ಸಭೆಯು ಯಾವುದೇ ಅಂತಿಮ ನಿರ್ಧಾರವಿಲ್ಲದೆ ಅಪೂರ್ಣಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧಪಡಿಸಿ ತಂದಿದ್ದ ಭಾವೀ ಸಚಿವರ ಪಟ್ಟಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಪ್ಪಿಗೆ ನೀಡಿಲ್ಲ. ಅಷ್ಟೇ ಅಲ್ಲದೆ, ತಮ್ಮದೇ ಆದ ಪ್ರತ್ಯೇಕ ಪಟ್ಟಿಯೊಂದನ್ನು ಮುಂದಿಡುವ ಮೂಲಕ ರಾಜ್ಯ…

Read More

ಸರ್ಕಾರದ ನಿರೀಕ್ಷೆಯಲ್ಲಿರಲಿಲ್ಲ ಗ್ರಾಮಸ್ಥರು; ಸ್ವಂತ ಹಣ, ಶ್ರಮದಿಂದಲೇ ಶಾಲೆ ನಿರ್ಮಾಣಕ್ಕೆ ಮುಂದಾದ ಗ್ರಾಮ, ದೇಶಾದ್ಯಂತ ಮೆಚ್ಚುಗೆ

ಮಧ್ಯ ಪ್ರದೇಶ: ಮಧ್ಯ ಪ್ರದೇಶದ ಡಿಂಡೋರಿ ಜಿಲ್ಲೆಯ ಶಿಕಾರಿಟೋಲಾ ಗ್ರಾಮದಲ್ಲಿ ನಡೆದಿರುವ ಒಂದು ಸ್ಫೂರ್ತಿದಾಯಕ ಘಟನೆ ದೇಶದಾದ್ಯಂತ ಜನರ ಮನಗೆದ್ದಿದೆ. ಹಲವು ವರ್ಷಗಳಿಂದ ಹೊಸ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಕೈಕಟ್ಟಿ ಕುಳಿತುಕೊಳ್ಳದೆ, ಗ್ರಾಮಸ್ಥರೇ ತಮ್ಮ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸ್ವಂತ ಹಣ ಹಾಗೂ ಶ್ರಮದಾನದ ಮೂಲಕ ಹೊಸ ಶಾಲೆ ನಿರ್ಮಿಸಲು ಮುಂದಾಗಿದ್ದಾರೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದರಿಂದ ಕೆಲವು ವರ್ಷಗಳ ಹಿಂದೆ ಅದನ್ನು ನೆಲಸಮಗೊಳಿಸಲಾಗಿತ್ತು….

Read More

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳು ಎಂಬ ಶಂಕೆ: ಮದುವೆಯಾದ ಮೂರೇ ತಿಂಗಳಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳು ಎಂಬ ಶಂಕೆ: ಮದುವೆಯಾದ ಮೂರೇ ತಿಂಗಳಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ ಹರಿಯಾಣ: ಅಕ್ರಮ ಸಂಬಂಧಕ್ಕೆ ಪತ್ನಿ ಅಡ್ಡಿಯಾಗಬಹುದು ಎಂಬ ಶಂಕೆಯಿಂದ ಮದುವೆಯಾದ ಕೇವಲ ಮೂರು ತಿಂಗಳಲ್ಲೇ ಪತಿಯೊಬ್ಬ ತನ್ನ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬೆಚ್ಚಿಬೀಳಿಸುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಂಕಿತ್ (25) ಮಾನೇಸರ್ ನಿವಾಸಿಯಾಗಿದ್ದು, ತಂಬಾಕು ಅಂಗಡಿ ನಡೆಸುತ್ತಿದ್ದಾನೆ. ಈತನಿಗೆ…

Read More

126 ವರ್ಷಗಳಲ್ಲೇ 5ನೇ ಅತಿ ಶುಷ್ಕ ಜೂನ್: ಜುಲೈನಲ್ಲೂ ಕಡಿಮೆ ಮಳೆಯ ಎಚ್ಚರಿಕೆ

ನವದೆಹಲಿ: ದೇಶದಲ್ಲಿ ಈ ವರ್ಷ ಮುಂಗಾರು ನಿರೀಕ್ಷೆಯಂತೆ ಚುರುಕುಗೊಳ್ಳದೆ, ಜೂನ್ ತಿಂಗಳಲ್ಲಿ ತೀವ್ರ ಮಳೆ ಕೊರತೆ ದಾಖಲಾಗಿದೆ. 126 ವರ್ಷಗಳಲ್ಲೇ 2026ರ ಜೂನ್ ತಿಂಗಳು 5ನೇ ಅತಿ ಶುಷ್ಕ ಜೂನ್ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಜೊತೆಗೆ, ಜುಲೈ ತಿಂಗಳಲ್ಲೂ ದೇಶದ ಬಹುತೇಕ ಭಾಗಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಐಎಂಡಿ ಮುಖ್ಯಸ್ಥ ಡಾ. ಮೃತ್ಯುಂಜಯ ಮಹಾಪಾತ್ರ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶಾದ್ಯಂತ ಜೂನ್ ತಿಂಗಳಲ್ಲಿ…

Read More