ಅಹಿಂಸಾ ಮಾರ್ಗದಿಂದ ಮಾತ್ರ ಜೀವನದಲ್ಲಿ ನೆಮ್ಮದಿ ಸಾಧ್ಯ: ಪತ್ರಕರ್ತ ಗೋಣೆಪ್ಪ ದೀಪಾವಳಿ ಅಭಿಮತ

ರಾಣೇಬೆನ್ನೂರ: ಇಲ್ಲಿನ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ತಾಲೂಕಾ ಆಡಳಿತ ಮತ್ತು ವಿವಿದ ಸಂಘಟನೆಗಳ ವತಿಯಿಂದ ಶುಕ್ರವಾರ ಭಗವಾನ ಗೌತಮ ಬುದ್ಧರ ಜಯಂತಿಯನ್ನು ಆಚರಿಸಲಾಯಿತು. ಪತ್ರಕರ್ತ ಗೋಣೆಪ್ಪ ದೀಪಾವಳಿ ಈ ವೇಳೆ ಭಗವಾನ ಗೌತಮ ಬುದ್ಧರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಅಹಿಂಸಾ ಮಾರ್ಗವನ್ನು ಪ್ರತಿಪಾದಿಸಿದ ಭಗವಾನ ಗೌತಮ ಬುದ್ಧರು ಪ್ರಾಣಿಗಳ ಹಿಂಸೆ ಮಾಡಬಾರದು ಮಹಾಪಾಪ, ಸಕಲ ಜೀವಿಗಳ ಮೇಲೆ ದಯವಿರಬೇಕು ಎಂದು ಬೋಧಿಸಿದವರು ಅವರ ವಿಚಾರ ಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆಗಾಗ ಮಾತ್ರ ಜಯಂತಿಗೆ…

Read More

ಲಾರಿ ಕ್ಲೀನರ್ ಸ್ಕೆಚ್‌ಗೆ ಖದೀಮರು ಫಿದಾ: ಮೋಟೆಬೆನ್ನೂರು ಹೆದ್ದಾರಿ ದರೋಡೆ ಪ್ರಕರಣದ 9 ಆರೋಪಿಗಳ ಬಂಧನ

ಹಾವೇರಿ: ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಇತ್ತೀಚೆಗೆ ನಡೆದಿದ್ದ ಸಿನೆಮಾ ಮಾದರಿಯ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಹಾವೇರಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 40 ಲಕ್ಷ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಮಹೀಂದ್ರಾ ಥಾರ್ ಮತ್ತು ಸ್ವಿಫ್ಟ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ​ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಯಶೋಧಾ ವಂಟಗೋಡಿ ಅವರು ಈ ಕುರಿತು…

Read More

ಮಾತೃಶ್ರಿ. ಹೇಮಾವತಿ ವಿ. ಹೆಗ್ಗಡೆ ಜನ್ಮದಿನ: ನಿರ್ಗತಿಕರಿಗೆ ಹಣ್ಣು-ಹಂಪಲ ವಿತರಣೆ

​ರಾಣೇಬೆನ್ನೂರ : ತಾಲ್ಲೂಕಿನ ಹೊಳೆ ಆನ್ವೇರಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ವಾತ್ಸಲ್ಯ’ ಯೋಜನೆಯಡಿ ತಾಲೂಕಿನ ಹೊಳೆ ಆನ್ವೇರಿ ಗ್ರಾಮದ ಅಸಹಾಯಕ ಸದಸ್ಯರಿಗೆ ಹಾಗೂ ನೂತನ ಮನೆ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಹಣ್ಣು-ಹಂಪಲ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಲಾಯಿತು. ​ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಮಂಜುನಾಥಗೌಡ ಎಂ. ಅವರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜದ ಕಟ್ಟಕಡೆಯ ವ್ಯಕ್ತಿ ಹಾಗೂ ನಿರ್ಗತಿಕರ ಏಳಿಗೆಗಾಗಿ ಹತ್ತು…

Read More

ಪ್ರಾಮಾಣಿಕತೆ ಮೆರೆದ ಸಾರಿಗೆ ನಿರ್ವಾಹಕಿ: ಮಹಿಳೆಗೆ ಮರಳಿ ಸಿಕ್ಕ ಮೊಬೈಲ್

ರಾಣೇಬೆನ್ನೂರ: ಬಸ್ಸಿನಲ್ಲಿ ಆಕಸ್ಮಿಕವಾಗಿ ಬಿಟ್ಟು ಹೋಗಿದ್ದ ಮೊಬೈಲ್ ಫೋನನ್ನು ಮಹಿಳೆಯೊಬ್ಬರಿಗೆ ಮರಳಿಸುವ ಮೂಲಕ ಕೆಎಸ್ಆರ್‌ಟಿಸಿ ಬಸ್ ನಿರ್ವಾಹಕಿಯೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ತಾಲೂಕಿನ ಗುಡಿಹೊನ್ನತ್ತಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ​ತಾಲೂಕಿನ ಮೈದೂರು ಗ್ರಾಮದ ಕೆಂಚವ್ವ ಹರಿಜನ ಎಂಬ ಮಹಿಳೆಯು ಬೆಳಿಗ್ಗೆ ರಾಣೇಬೆನ್ನೂರಿನಿಂದ ಚಂದಾಪುರಕ್ಕೆ ಹೊರಡುವ ಬಸ್ಸಿನಲ್ಲಿ ಹೊನ್ನತ್ತಿಗೆ ತೆರಳಲು ಹತ್ತಿದ್ದರು. ಹೊನ್ನತ್ತಿಯಲ್ಲಿ ಬಸ್ ಇಳಿಯುವ ಸಂದರ್ಭದಲ್ಲಿ ಅವರು ಅರಿಯದೇ ತಮ್ಮ ಮೊಬೈಲ್ ಫೋನನ್ನು ಸೀಟಿನಲ್ಲಿಯೇ ಬಿಟ್ಟು ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕಿ…

Read More

​ಮಹಿಳೆಯರನ್ನು ಗೌರವಿಸುವ ಸಮಾಜದಲ್ಲಿ ನೆಮ್ಮದಿ ಸಾಧ್ಯ: ಆರ್.ಸಿ. ಪಾಟೀಲ್

ರಾಣೇಬೆನ್ನೂರ: ಎಲ್ಲಿ ಮಹಿಳೆಯರನ್ನು ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತಾರೋ, ಅಲ್ಲಿ ಸುಸಂಸ್ಕೃತ ಹಾಗೂ ನೆಮ್ಮದಿಯ ವಾತಾವರಣ ಇರುತ್ತದೆ. ಪ್ರತಿಯೊಬ್ಬರೂ ಮಹಿಳೆಯರನ್ನು ಪೂಜಿಸುವ ಮತ್ತು ಗೌರವಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಆರ್.ಸಿ. ಪಾಟೀಲ್ ಹೇಳಿದರು. ನಗರದ ಹೊರವಲಯದ ಮಾಗೋಡ ರಸ್ತೆಯಲ್ಲಿರುವ ಸಾರಿಗೆ ಘಟಕದಲ್ಲಿ ಭಾನುವಾರ ಆಯೋಜಿಸಲಾಗಿದ್ದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಹೆಣ್ಣನ್ನು ಅಬಲೆಯೆಂದು ಹಿಯಾಳಿಸಬಾರದು. ಜನ್ಮ ನೀಡಿದ ತಾಯಿಯಿಂದ ಹಿಡಿದು ರವಿವಾರದಂದು…

Read More

ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹ: ಕ್ರಮಕ್ಕೆ ಆಗ್ರಹಿಸಿ ಸ್ವಾಭಿಮಾನಿ ಕರವೇ ಪ್ರತಿಭಟನೆ

ರಾಣೇಬೆನ್ನೂರು: ತಾಲೂಕಿನಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಬಾಹಿರವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿರುವ ಇಂತಹ ದಂಧೆಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ​ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಅವರು, ತಾಲೂಕಿನಾದ್ಯಂತ ಹೆಚ್.ಪಿ, ಇಂಡಿಯನ್ ಹಾಗೂ ಭಾರತ ಗ್ಯಾಸ್ ಏಜೆನ್ಸಿಗಳು ಸೇರಿದಂತೆ ವಿವಿಧ ಸಂಸ್ಥೆಗಳು ಎಲ್ಲೆಂದರಲ್ಲಿ…

Read More

ಉಕ್ಕುಂದ ಗ್ರಾಮದಲ್ಲಿ ಫೆಬ್ರವರಿ 24 ರಿಂದ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

ರಾಣೇಬೆನ್ನೂರು: ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಫೆಬ್ರವರಿ 24 ರಿಂದ ಫೆಬ್ರವರಿ 27 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ​ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 24 ರಂದು ಬೆಳಿಗ್ಗೆ 6 ಗಂಟೆಗೆ ನಂದಿಧ್ವಜ ಸ್ಥಾಪನೆ ಮತ್ತು ಕಂಕಣ ಕಟ್ಟುವ ಕಾರ್ಯಕ್ರಮ ನೆರವೇರಲಿದೆ. ಇದೇ ವೇಳೆ ನೂತನ ಪುಷ್ಪ ರಥೋತ್ಸವದ ನಿಮಿತ್ತ…

Read More

ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹ: ಕ್ರಮಕ್ಕೆ ಆಗ್ರಹಿಸಿ ಸ್ವಾಭಿಮಾನಿ ಕರವೇ ಪ್ರತಿಭಟನೆ

ರಾಣೇಬೆನ್ನೂರು: ತಾಲೂಕಿನಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಬಾಹಿರವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿರುವ ಇಂತಹ ದಂಧೆಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಅವರು, ತಾಲೂಕಿನಾದ್ಯಂತ ಹೆಚ್.ಪಿ., ಇಂಡಿಯನ್ ಹಾಗೂ ಭಾರತ ಗ್ಯಾಸ್ ಏಜೆನ್ಸಿಗಳು ಸೇರಿದಂತೆ ವಿವಿಧ ಸಂಸ್ಥೆಗಳು ಎಲ್ಲೆಂದರಲ್ಲಿ…

Read More

ಏಕಾಏಕಿ ಶಿಕ್ಷಕನ ವಜಾ: ಕುಮಾರಪಟ್ಟಣದ ಆದಿತ್ಯ ಸ್ಕೂಲ್ ಎದುರು ಪ್ರತಿಭಟನೆ

ರಾಣೇಬೆನ್ನೂರ: ತಾಲ್ಲೂಕಿನ ಕುಮಾರಪಟ್ಟಣದ ಆದಿತ್ಯ ಸ್ಕೂಲ್‌ನಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕ ಹಾಗೂ ಕಚೇರಿ ಆಡಳಿತಾಧಿಕಾರಿ ಶಶಿಧರ ಶಿಗ್ಲಿ ಅವರನ್ನು ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಕೆಲಸದಿಂದ ತೆಗೆದುಹಾಕಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ​ಸಂಬಳ ಹೆಚ್ಚಳ ಕೇಳಿದ್ದಕ್ಕೆ ವಜಾ ಆರೋಪ: ಪ್ರತಿಭಟನೆಯಲ್ಲಿ ಮಾತನಾಡಿದ ಶಿಕ್ಷಕ ಶಶಿಧರ ಶಿಗ್ಲಿ, “ನಾನು 1997ರಿಂದ ಈ ಸಂಸ್ಥೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದೇನೆ. 28 ವರ್ಷಗಳ ಸೇವೆಯ ನಂತರವೂ ಸಂಸ್ಥೆಯು ನನಗೆ ಕೇವಲ…

Read More

ಹಾವೇರಿಯಲ್ಲಿ ‘ಹಂಚು’ ಸರಿಸಿದ ಕಿಲಾಡಿ ಕಳ್ಳರು: 15 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ,

ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಗ್ರಾಮದಲ್ಲಿ ಅತಿಮಾನುಷ ರೀತಿಯಲ್ಲಿ ಮನೆಯೊಳಗೆ ನುಗ್ಗಿರುವ ಕಳ್ಳರು ಬರೋಬ್ಬರಿ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಜನತೆಯನ್ನು ಬೆಚ್ಚಿಬೀಳಿಸಿದೆ. ಮನೆಗೆ ಹಾಕಿರುವ ದುಬಾರಿ ಬೀಗಗಳು ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ನಾಗರಿಕರು ಹೆಮ್ಮೆಪಡುವ ಕಾಲದಲ್ಲಿ, ಕಳ್ಳರು ಈ ಬಾರಿ ಆರಿಸಿಕೊಂಡಿದ್ದು ಮನೆಯ ಅತ್ಯಂತ ದುರ್ಬಲ ಭಾಗವಾದ ‘ಮೇಲ್ಛಾವಣಿ’ಯನ್ನು! ​ಅಡುಗೆ ಮನೆಯೇ ಕಳ್ಳರ ರಹದಾರಿ! ​ಹಿರೂರು ಗ್ರಾಮದ ನಿವಾಸಿ ಮೊಹಮ್ಮದ್ ಗೌಸ್ ಎಂಬುವವರ ಮನೆಯಲ್ಲಿ ಈ ಸಿನೆಮಾ…

Read More