ಪಾಲಿಕೆ ಶಿಕ್ಷಕರಿಗೆ ವೇತನ ನೀಡಿ, ಸುರಂಗ ರಸ್ತೆ ಹಠ ಬಿಡಿ: ಡಿಸಿಎಂ ವಿರುದ್ಧ ಆರ್. ಅಶೋಕ ವಾಗ್ದಾಳಿ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ಯೋಜನೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕುರಿತು ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಶಿವಕುಮಾರ್ ಅವರು ಕನ್ನಡಿಗರಿಗೆ “ಚೊಂಬು ಕೊಟ್ಟಿದ್ದಾರೆ” ಎಂದು ಅಶೋಕ ಟೀಕಿಸಿದ್ದಾರೆ. ಸುರಂಗ ರಸ್ತೆ, ಸ್ಕೈ ಡೆಕ್, ಬ್ರ್ಯಾಂಡ್ ಬೆಂಗಳೂರು, ಜಿಬಿಎ (ಗ್ರೇಟರ್ ಬೆಂಗಳೂರು) ಯೋಜನೆಗಳ ಕುರಿತು ಮಾತನಾಡುತ್ತಾ, ಡಿಸಿಎಂ ಅವರು “ಬರೀ…

