ಇಂದಿರಾ ಗಾಂಧಿ ಹೆಸರು ಈ ದೇಶದ ಬಡವರ ಉಸಿರು: ಭೂಮಿ, ಬ್ಯಾಂಕ್ ರಾಷ್ಟ್ರೀಕರಣದಿಂದ ಲಕ್ಷಾಂತರ ಜನರ ಬದುಕು ಬದಲಾವಣೆ – ಡಿ.ಕೆ. ಶಿವಕುಮಾರ್
ಬೆಂಗಳೂರು (ಅ. 31): ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ಈ ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿಗೆ ದೊಡ್ಡ ಕೊಡುಗೆ ನೀಡಿ ಹುತಾತ್ಮರಾದವರು. ಅವರ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ಸಾರಕ್ಕಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಭೂಕ್ರಾಂತಿ ಮತ್ತು ಬ್ಯಾಂಕ್ ರಾಷ್ಟ್ರೀಕರಣಬಡತನ ನಿವಾರಣೆಗೆ ಇಂದಿರಾ ಗಾಂಧಿಯವರು ತೆಗೆದುಕೊಂಡ…

