ರಾಜ್ಯ ಹೈಕೋರ್ಟ್ ತೀರ್ಪಿನಿಂದ ಸರ್ಕಾರಕ್ಕೆ ಹಿನ್ನಡೆ, ಷಡ್ಯಂತ್ರಕ್ಕೆ ತಡೆ: ಬಿ.ವೈ. ವಿಜಯೇಂದ್ರರೈತರ ಪಾಲಿಗೆ ಸರ್ಕಾರ ಬದುಕಿದ್ದೂ ಸತ್ತಂತೆ: ಬಿಜೆಪಿ ರಾಜ್ಯಾಧ್ಯಕ್ಷರ ಟೀಕೆ
ಬೆಂಗಳೂರು: ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಅವರ ಕುತಂತ್ರ ಮತ್ತು ಷಡ್ಯಂತ್ರಗಳಿಗೆ ತಡೆ ಬಿದ್ದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರೈತರಿಗೆ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. “ರೈತರು ತೀವ್ರ ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರದಿಂದ ಯಾವುದೇ ಅನುಕೂಲ ಸಿಗುತ್ತಿಲ್ಲ. ಪರಿಹಾರ ನೀಡುವ ಬದಲು ಕೇಂದ್ರ ಸರ್ಕಾರದ…

