ಚನ್ನಪಟ್ಟಣ ತಹಶೀಲ್ದಾರ್ ಸರ್ಕಾರಿ ನಿವಾಸದಲ್ಲೇ ಭೀಕರ ಕೃತ್ಯ: ಅಸಹಜ ಲೈಂಗಿಕ ದೌರ್ಜನ್ಯ, ದರೋಡೆ, ಕೊಲೆ ಯತ್ನ ಆರೋಪ; ಓರ್ವ ಬಂಧನ
ಚನ್ನಪಟ್ಟಣ: ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆಯೇ ಅವರ ಸರ್ಕಾರಿ ನಿವಾಸದಲ್ಲಿ ಅಸಹಜ ಲೈಂಗಿಕ ದೌರ್ಜನ್ಯ, ದರೋಡೆ ಹಾಗೂ ಕೊಲೆ ಯತ್ನ ನಡೆದಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್. ಗಿರೀಶ್ ನೀಡಿರುವ ದೂರಿನ ಆಧಾರದ ಮೇಲೆ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ಅನುಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪೊಲೀಸರ ಮಾಹಿತಿ ಪ್ರಕಾರ, ಮೈಸೂರು ಮೂಲದ ಅನುಶ್ ಎಂಬಾತನಿಗೆ ತಹಶೀಲ್ದಾರ್ ಬಿ.ಎನ್….

