ಜಾತಿ ಗಣತಿ ಜಾರಿಗೆ ಬದ್ಧ: ಕೊನೆಯುಸಿರು ಇರುವವರೆಗೂ ಸಾಮಾಜಿಕ ನ್ಯಾಯದ ಪರ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಹಿಂದುಳಿದ ವರ್ಗಗಳಿಗೆ ‘ಹಾವನೂರು ವರದಿಯು ಬೈಬಲ್’ ಇದ್ದಂತೆ. ಅಂಬೇಡ್ಕರ್ ಕನಸಿನ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕೆ ನನ್ನ ಕೊನೆಯುಸಿರು ಇರುವವರೆಗೂ ಬದ್ಧನಾಗಿರುತ್ತೇನೆ. ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಗಣತಿಯ ವರದಿಯನ್ನು ಒಪ್ಪಿಕೊಂಡು ಜಾರಿಗೊಳಿಸಲು ಸಿದ್ಧವಿದ್ದು, ಮೀಸಲಾತಿ ಪ್ರಮಾಣವನ್ನು ಶೇ 70-75ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ “ಎಲ್.ಜಿ. ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಹಿಂದುಳಿದವರು, ದಲಿತರು ಸೇರಿದಂತೆ…

