ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್ ಬ್ಯಾನ್: ನಂದಿನಿ ಉತ್ಪನ್ನಗಳ ಕಡ್ಡಾಯ ಬಳಕೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು (ಅ. 31): ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಮತ್ತು ರಾಜ್ಯದ ಹಾಲು ಒಕ್ಕೂಟವಾದ ಕೆಎಂಎಫ್‌ನ (KMF) ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸಲು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಪ್ಲಾಸ್ಟಿಕ್ ಬಾಟಲಿಗಳಿಗೆ ಶಾಶ್ವತ ನಿಷೇಧಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ನಿಷೇಧಿಸುವ ಕುರಿತು ಈ ಹಿಂದೆಯೇ ಸೂಚನೆ ನೀಡಲಾಗಿತ್ತು….

Read More

2025 ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 70 ಸಾಧಕರಿಗೆ ಗೌರವ; ‘ಅನನ್ಯ ಸೇವೆಯು ಸ್ಫೂರ್ತಿಯಾಗಲಿ’ – ಮುಖ್ಯಮಂತ್ರಿಗಳ ಅಭಿನಂದನೆ

ಬೆಂಗಳೂರು:2025ನೇ ಸಾಲಿನ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ ಒಟ್ಟು 70 ಗಣ್ಯರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರಕಟಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಎಲ್ಲಾ ವಿಜೇತರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧಕರ ಅನನ್ಯ ಸೇವೆಯು ನಾಡಿನ ಯುವ ಸಮುದಾಯಕ್ಕೆ ಪ್ರೇರಣೆಯಾಗಲಿ ಎಂದು ಅವರು ಹಾರೈಸಿದ್ದಾರೆ. ಸಾಹಿತ್ಯದಿಂದ ಸಮಾಜಸೇವೆವರೆಗೆ ಸಾಧಕರ ಗೌರವಕರ್ನಾಟಕ ರಾಜ್ಯವು ತನ್ನ ಸಾಧಕರಿಗೆ ನೀಡುವ ಅತ್ಯುನ್ನತ ಗೌರವಗಳಲ್ಲಿ ಒಂದಾದ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಸಾಹಿತ್ಯ, ಸಂಗೀತ,…

Read More

ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಜಮಖಂಡಿ ಬಿಜೆಪಿ ಶಾಸಕರಿಂದ ಹೈಕೋರ್ಟ್‌ನಲ್ಲಿ ಪಿಐಎಲ್‌ 🏛️

ಬೆಂಗಳೂರು: ಶಾಸಕರಿಗೆ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ (CMIDP) ಅನುದಾನ ಹಂಚಿಕೆ ಮಾಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶಿವಯ್ಯ ಗುಡಗುಂಟಿ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ. ಈ ಅನುದಾನ ತಾರತಮ್ಯದ ಕಾನೂನು ಸಮರದ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ಶಾಸಕ…

Read More

ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬ: ಹೈಕೋರ್ಟ್‌ನಲ್ಲಿ ಹೋರಾಟ ಮುಂದುವರಿಸಿದ ರಾಜ್ಯ ಚುನಾವಣಾ ಆಯೋಗ!

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯುವಂತೆ ಮಾಡಲು ಕಳೆದ ನಾಲ್ಕೈದು ವರ್ಷಗಳಿಂದ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮುಂದೆ ಹೇಳಿಕೆ ನೀಡಿದೆ. ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಸದಸ್ಯರಿಂದ ಅರ್ಜಿನಗರ ಸ್ಥಳೀಯ ಸಂಸ್ಥೆಗಳ ಆಡಳಿತಾಧಿಕಾರಿಗಳ ನೇಮಕವನ್ನು ವಿರೋಧಿಸಿ 40ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಈ ಹಿಂದೆ ನೇಮಕವಾಗಿದ್ದ ಆಡಳಿತಾಧಿಕಾರಿಗಳ…

Read More

‘ಸುರಂಗ ರಸ್ತೆ ಕೇವಲ ದೋಚುವ ತಂತ್ರ’: ರುದ್ರಭೂಮಿ ಕಾರ್ಮಿಕರಿಗೆ ಸಂಬಳ ಕೊಡಲಾಗದ ಸರ್ಕಾರದಿಂದ ಸಾವಿರಾರು ಕೋಟಿ ಯೋಜನೆ ಏಕೆ? – ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ನಗರದಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಸುರಂಗ ಮಾರ್ಗ (ಟನೆಲ್ ರೋಡ್) ಮಾಡುವ ಮಾತುಗಳ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಯೋಜನೆ ಕೇವಲ ‘ದೋಚುವ ತಂತ್ರ’ ಅಷ್ಟೇ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸುರಂಗ ಮಾರ್ಗ ಆಮೇಲೆ ಮಾಡೋಣ. ಆದರೆ, ರುದ್ರಭೂಮಿಯಲ್ಲಿ ಕೆಲಸ ಮಾಡುವ 147 ಜನ ಕಾರ್ಮಿಕರಿಗೆ ಸಂಬಳ ಕೊಡೋ ಯೋಗ್ಯತೆ ಈ ಕಾಂಗ್ರೆಸ್ ಸರ್ಕಾರಕ್ಕೆ ಇದೆಯೇ ಇಲ್ಲವೇ?” ಎಂದು ನೇರವಾಗಿ ಪ್ರಶ್ನಿಸಿದರು….

Read More

ಮೆಟ್ರೋ ದರ ಇಳಿಸಿ; ಸುರಂಗ ರಸ್ತೆ ನಿಲ್ಲಿಸಿ: ಕಾಂಗ್ರೆಸ್ ಯೋಜನೆಯಿಂದ ಸಾರ್ವಜನಿಕರ ದುಡ್ಡು ಪೋಲು – ತೇಜಸ್ವಿ ಸೂರ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಪ್ರಸ್ತಾಪಿಸಿರುವ ಟನೆಲ್ ರಸ್ತೆಯ ಯೋಜನೆಯು ‘ಸಾಮಾಜಿಕ ಪಿಡುಗು ನಿವಾರಣೆಗೆ ಇರುವ ₹43 ಸಾವಿರ ಕೋಟಿ’ಯ ಯೋಜನೆ ಎಂದು ಟೀಕಿಸಿದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು, ಬೆಂಗಳೂರಿನ ಸಾರಿಗೆ ಸಮಸ್ಯೆ ಪರಿಹಾರಕ್ಕೆ ಮೆಟ್ರೋ ದರಗಳನ್ನು ಆದಷ್ಟು ಬೇಗ ಇಳಿಸಿ, ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ 18 ಕಿ.ಮೀ….

Read More

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಅನುಷ್ಠಾನ: ಯಾವುದೇ ಜಾತಿಗೆ ಅನ್ಯಾಯವಾಗದಂತೆ ರೋಸ್ಟರ್ ಜಾರಿಗೆ ಕ್ರಮ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ (SC) ಒಳ ಮೀಸಲಾತಿಯ ಅನುಷ್ಠಾನಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದುವಾರದಂದು ವಿಧಾನಸೌಧದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುದೀರ್ಘವಾಗಿ ಚರ್ಚಿಸಿದರು. ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ರೋಸ್ಟರ್‌ನಲ್ಲಿ ಯಾವುದೇ ಜಾತಿಗೆ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ನೇಮಕಾತಿ…

Read More

ಕಾಗಿನೆಲೆ ಅಭಿವೃದ್ಧಿಗೆ ₹34 ಕೋಟಿ ಕ್ರಿಯಾ ಯೋಜನೆಗೆ ಮಂಜೂರಾತಿ: ವರ್ಷಕ್ಕೊಮ್ಮೆ ಕನಕ ಉತ್ಸವ ಆಚರಣೆಗೆ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬುಧವಾರದಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು ₹34 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಸಭೆಯ ಪ್ರಮುಖ ನಿರ್ಧಾರಗಳ ಪ್ರಕಾರ, ಇನ್ನು ಮುಂದೆ ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಉತ್ಸವದ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಲ್ಲದೆ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನಕ ಅಧ್ಯಯನ ಪೀಠದ…

Read More

ರಾಜ್ಯ ಹೈಕೋರ್ಟ್ ತೀರ್ಪಿನಿಂದ ಸರ್ಕಾರಕ್ಕೆ ಹಿನ್ನಡೆ, ಷಡ್ಯಂತ್ರಕ್ಕೆ ತಡೆ: ಬಿ.ವೈ. ವಿಜಯೇಂದ್ರರೈತರ ಪಾಲಿಗೆ ಸರ್ಕಾರ ಬದುಕಿದ್ದೂ ಸತ್ತಂತೆ: ಬಿಜೆಪಿ ರಾಜ್ಯಾಧ್ಯಕ್ಷರ ಟೀಕೆ

ಬೆಂಗಳೂರು: ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಅವರ ಕುತಂತ್ರ ಮತ್ತು ಷಡ್ಯಂತ್ರಗಳಿಗೆ ತಡೆ ಬಿದ್ದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರೈತರಿಗೆ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. “ರೈತರು ತೀವ್ರ ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರದಿಂದ ಯಾವುದೇ ಅನುಕೂಲ ಸಿಗುತ್ತಿಲ್ಲ. ಪರಿಹಾರ ನೀಡುವ ಬದಲು ಕೇಂದ್ರ ಸರ್ಕಾರದ…

Read More

ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ಹೊಸ ‘ಪೀಕ್‌ ಕ್ಯಾಪ್’ ಮುಕುಟ: 4 ದಶಕಗಳ ಬೇಡಿಕೆ ಈಡೇರಿಕೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಿಬ್ಬಂದಿಯ ಬಹುದಿನಗಳ ಬೇಡಿಕೆಯಾಗಿದ್ದ ಹೊಸ ‘ಪೀಕ್ ಕ್ಯಾಪ್’ ಅನ್ನು ಅಧಿಕೃತವಾಗಿ ವಿತರಿಸಲಾಗಿದ್ದು, ಹಳೆಯ ‘ಸ್ಲೋಚ್ ಹ್ಯಾಟ್’ಗೆ ವಿದಾಯ ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವರಾದ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದರು. ನಗರದಲ್ಲಿ ಮಂಗಳವಾದಂದು ನಡೆದ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ‘ಸನ್ಮಿತ್ರ’ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ…

Read More