ಬೆಂಗಳೂರ: ಕೋಗಿಲು ಬಡಾವಣೆ ಒತ್ತುವರಿ ತೆರವು: ವಲಸೆ ಕಾರ್ಮಿಕರಿಗೆ ಮಾನವೀಯ ನೆಲೆಯಲ್ಲಿ ಆಶ್ರಯ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಇದ್ದ ಅಕ್ರಮ ಗುಡಿಸಲುಗಳ ತೆರವು ಕಾರ್ಯಾಚರಣೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ತೆರವುಗೊಂಡ ಕುಟುಂಬಗಳಿಗೆ ಮಾನವೀಯತೆ ದೃಷ್ಟಿಯಿಂದ ಪರ್ಯಾಯ ವಸತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ. ವಾಸಕ್ಕೆ ಯೋಗ್ಯವಲ್ಲದ ಜಾಗ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಅನೇಕರು ಅತಿಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದರು. ಆದರೆ ಆ ಪ್ರದೇಶವು ಜನವಸತಿಗೆ ಯಾವುದೇ ರೀತಿಯಲ್ಲೂ ಯೋಗ್ಯವಾಗಿರಲಿಲ್ಲ….

