ಡ್ರಗ್ಸ್ ಮುಕ್ತ ಕರ್ನಾಟಕವೇ ನಮ್ಮ ಗುರಿ; ಪೊಲೀಸರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸಂಪೂರ್ಣವಾಗಿ ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡುವುದು ಸರ್ಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮಂಗಳವಾರದಂದು (ಅಕ್ಟೋಬರ್ 28,) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ಸನ್ಮಿತ್ರ ಕಾರ್ಯಯೋಜನೆ ಕೈಪಿಡಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಯುವಶಕ್ತಿ ಮಾದಕ ವ್ಯಸನಕ್ಕೆ…

